AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Golden Hour ಎಂಬ ಅಮೂಲ್ಯ ಕ್ಷಣವೂ ಇಲ್ಲದಂತೆ ಹಾರಿಹೋದ ಪ್ರಾಣಪಕ್ಷಿ! ಬೈಯಪ್ಪನಹಳ್ಳಿ ಜಿಮ್‌ನಲ್ಲಿ ಕುಸಿದುಬಿದ್ದು ಮಹಿಳೆ ಸಾವು

ಜಿಮ್ ವರ್ಕೌಟ್ ಮಾಡುವಾಗ ಕುಸಿದು ಬಿದ್ದಿದ್ದ ವಿನಯ ಕುಮಾರಿ ಎಂಬ 44 ವರ್ಷದ ಮಹಿಳೆ ಆಸ್ಪತ್ರೆಗೆ ಸಾಗಿಸುವ ವೇಳೆ ಕೊನೆಯುಸಿರೆಳೆದಿದ್ದಾರೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Golden Hour ಎಂಬ ಅಮೂಲ್ಯ ಕ್ಷಣವೂ ಇಲ್ಲದಂತೆ ಹಾರಿಹೋದ ಪ್ರಾಣಪಕ್ಷಿ! ಬೈಯಪ್ಪನಹಳ್ಳಿ ಜಿಮ್‌ನಲ್ಲಿ ಕುಸಿದುಬಿದ್ದು ಮಹಿಳೆ ಸಾವು
ಜಿಮ್‌ನಲ್ಲಿ ವರ್ಕೌಟ್ ವೇಳೆ ಕುಸಿದುಬಿದ್ದು ಮಹಿಳೆ ಸಾವು
TV9 Web
| Edited By: |

Updated on:Mar 26, 2022 | 4:20 PM

Share

ಬೆಂಗಳೂರು: ಜಿಮ್‌ನಲ್ಲಿ ಕಸರತ್ತು ಮಾಡುವ ವೇಳೆ ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಕುಸಿದುಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಆತಂಕಕಾರಿ ಘಟನೆ ಬೆಂಗಳೂರಿನ ಮಲ್ಲೇಶಪಾಳ್ಯದ ಜಿಮ್‌ನಲ್ಲಿ ನಡೆದಿದೆ. ಜಿಮ್ ವರ್ಕೌಟ್ ಮಾಡುವಾಗ (Gym workout) ಕುಸಿದು ಬಿದ್ದಿದ್ದ ವಿನಯ ಕುಮಾರಿ ಎಂಬ 35 ವರ್ಷದ ಮಹಿಳೆ ಆಸ್ಪತ್ರೆಗೆ ಸಾಗಿಸುವ ವೇಳೆ ಕೊನೆಯುಸಿರೆಳೆದಿದ್ದಾರೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ (Baiyappanahalli).

Golden Hour ಎಂಬ ಅಮೂಲ್ಯ ಕ್ಷಣವೂ ಇಲ್ಲದಂತೆ ಹಾರಿಹೋದ ಪ್ರಾಣಪಕ್ಷಿ! ವಿನಯಕುಮಾರಿ ಅವಿವಾಹಿತರು. ಜಿಮ್ ಮತ್ತು ಡ್ಯಾನ್ಸ್ ಹವ್ಯಾಸವಾಗಿ ಮಾಡ್ಕೊಂಡಿದ್ದರು. ವಿನಯಕುಮಾರಿ ಅವರ ಮೃತದೇಹ ಸಿ.ವಿ. ರಾಮನ್ ನಗರ ಆಸ್ಪತ್ರೆಯಲ್ಲಿದೆ. ಘಟನೆಯ ಸಿಸಿಟಿವಿ ದೃಶ್ಯ ಟಿವಿ9 ಗೆ ಲಭ್ಯವಾಗಿದ್ದು, ಅದರಲ್ಲಿ ವಿನಯ ಕುಮಾರಿ ಬಾರ್​ ಮಾಡುತ್ತ ಮಾಡುತ್ತಲೇ ಕುಸಿದುಬೀಳುವ ಆಘಾತಕಾರಿ ದೃಶ್ಯ ಸಾದ್ಯಂತವಾಗಿ ಸೆರೆಯಾಗಿದೆ.

ಆಘಾತಕಾರಿಯೆಂದರೆ ವಿನಯ ಕುಮಾರಿ ಎಂದಿನಂತೆ ಸಾಮಾನ್ಯವಾಗಿ ಜಿಮ್​ ಬಾರ್​ ಮಾಡುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ಅವರ ಅರಿವಿಗೂ ಬಾರದಂತೆ ಹಿಂದಕ್ಕೆ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಜಿಮ್​ನಲ್ಲಿದ್ದವರೆಲ್ಲಾ ಬಂದು ಅವರಿಗೆ ಆರೈಕೆ ಮಾಡಿದ್ದಾರೆ. ಮತ್ತು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಇಲ್ಲಿ ಗೋಲಗ್ಡನ್​ ಅವರ್​ ಎಂಬ ಅಮೂಲ್ಯ ಕ್ಷಣವೂ ಇಲ್ಲದಂತೆ ಆಕೆಯ ಪ್ರಾಣಪಕ್ಷಿ ಹಾರಿಹೋಗಿದೆ.

ಮೃತ ಯುವತಿ ಮೂಲತಃ ಮಂಗಳೂರು ನಿವಾಸಿ: ಮೃತ ಯುವತಿ ಮೂಲತಃ ಮಂಗಳೂರು ನಿವಾಸಿ. ಖಾಸಗಿ ಕಂಪೆನಿಯಲ್ಲಿ ಬ್ಯಾಕ್​​ ಗ್ರೌಂಡ್ ವೆರಿಫಿಕೇಷನ್ ಅಫೀಸರ್ ಆಗಿ ಕೆಲಸ ಮಾಡ್ತಿದ್ದರು. 35 ವರ್ಷದ ಅವಿವಾಹಿತ ವಿನಯ ಕುಮಾರಿ ಮಲ್ಲೇಶಪಾಳ್ಯದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಕಳೆದು ಎರಡು ವರ್ಷಗಳಿಂದ ಜಿಮ್ ನಲ್ಲಿ ವರ್ಕ್ ಔಟ್ ಮಾಡ್ತಿದ್ದ ವಿನಯ ಕುಮಾರಿ ಬೆಳಗ್ಗೆ ವೇಳೆ ಜಿಮ್ ನಲ್ಲಿ ವರ್ಕ್ ಔಟ್ ಮಾಡಿ, ಕೆಲಸಕ್ಕೆ ತೆರಳುತ್ತಿದ್ದರು.

ವರ್ಕೌಟ್ ಮಾಡುವಾಗ ಕುಸಿದು ಬಿದ್ದಿದ್ದ ವಿನಯ ಕುಮಾರಿ ಸಾವು

Published On - 3:09 pm, Sat, 26 March 22

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್