AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ರೀ ಬಸ್ ಭಾಗ್ಯಕ್ಕೆ ಯಾವುದೇ ಕಂಡೀಷನ್ ಹಾಕದಂತೆ ಮಹಿಳಾ ಮಣಿಗಳ ಮನವಿ

ಕಾಂಗ್ರೆಸ್ ಪಕ್ಷವು ಚುನಾವಣೆಯಲ್ಲಿ ಗೆಲ್ಲಲು ಯಾವುದೇ ಷರತ್ತು ಹಾಕದೆ ಭರ್ಜರಿ ಉಚಿತ ಭಾಗ್ಯಗಳನ್ನೇನೋ ಘೋಷಿಸಿತ್ತು. ಆದರೆ ಗೆಲುವಿನ ನಂತರ ಷರತ್ತು ವಿಧಿಸುವ ಮಾತುಗಳು ಕೇಳಿಬರುತ್ತಿವೆ. ಹೀಗಾಗಿ ಉಚಿತ ಬಸ್ ಭಾಗ್ಯಕ್ಕೆ ಷರತ್ತು ವಿಧಿಸದಂತೆ ಮಹಿಳಾ ಮಣಿಗಳು ಮನವಿ ಮಾಡಿದ್ದಾರೆ.

ಫ್ರೀ ಬಸ್ ಭಾಗ್ಯಕ್ಕೆ ಯಾವುದೇ ಕಂಡೀಷನ್ ಹಾಕದಂತೆ ಮಹಿಳಾ ಮಣಿಗಳ ಮನವಿ
ಉಚಿತ ಬಸ್ ಯೋಜನೆಗೆ ಷರತ್ತು ಹಾಕದಂತೆ ಮಹಿಳೆಯರ ಮನವಿ
Rakesh Nayak Manchi
|

Updated on: May 19, 2023 | 3:53 PM

Share

ಆನೇಕಲ್: ಕರ್ನಾಟಕ ವಿಧಾನಸಭೆ ಚುನಾವಣೆ 2023ರಲ್ಲಿ ಗೆದ್ದು ಸರ್ಕಾರ ರಚಸಿಲು ಕಾಂಗ್ರೆಸ್ (Congress) ಪಕ್ಷವು ಯಾವುದೇ ಷರತ್ತು ಹಾಕದೆ ವಿವಿಧ ಉಚಿತ ಘೋಷಣೆಗಳನ್ನು ಮಾಡಿದ್ದರು. ಆದರೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಉಚಿತ ಭಾಗ್ಯಗಳಿಗೆ ಷರತ್ತು ವಿಧಿಸುವ ಮಾತುಗಳು ಕೇಳಿಬರಲಾರಂಭಿಸಿದೆ. ಈ ನಡುವೆ “ಕಾಂಗ್ರೆಸ್​ ಪಕ್ಷ 200 ಯುನಿಟ್ ಉಚಿತ ವಿದ್ಯುತ್ ಘೋಷಣೆ ಮಾಡಿದ್ದರೆ, ಹೀಗಾಗಿ ನಾವು ವಿದ್ಯುತ್ ಬಿಲ್ ಕಟ್ಟಲ್ಲ” ಎಂದು ರಾಜ್ಯದ ವಿವಿಧ ಕಡೆಗಳಲ್ಲಿ ಜನರು ಹೇಳಲು ಆರಂಭಿಸಿದ್ದಾರೆ. ಇದೀಗ ಮಹಿಳಾ ಮಣಿಗಳು ಕೂಡ, ಉಚಿತ ಬಸ್ ಪ್ರಯಾಣಕ್ಕೆ (Free bus travel for Women) ಷರತ್ತು ವಿಧಿಸದಂತೆ ಮನವಿ ಮಾಡಿದ್ದಾರೆ.

ಮಹಿಳೆಯರಿಗೆ ಸಾರಿಗೆ ಬಸ್​ನಲ್ಲಿ ಉಚಿತ ಪ್ರಯಾಣ ಘೋಷಣೆಯಿಂದ ಎಲೆಕ್ಟ್ರಾನಿಕ್ ಸಿಟಿಯಲ್ಲಿ (ಬೆಂಗಳೂರು) ಮಹಿಳಾ ಮಣಿಗಳು ಫುಲ್ ಖುಷ್ ಆಗಿದ್ದಾರೆ. ಮೊದಲ ಕ್ಯಾಬಿನೆಟ್ ಬಳಿಕ ಉಚಿತ ಪ್ರಯಾಣ ಬೆಳಸಲು ಉತ್ಸುಕರಾಗಿದ್ದಾರೆ. ಆದರೆ ಉಚಿತ ಭಾಗ್ಯಗಳಿಗೆ ಕಂಡೀಷನ್ಸ್ ಹಾಕುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿದ್ದಂತೆ ಎಚ್ಚೆತ್ತ ಮಹಿಳೆಯರು ಫ್ರೀ ಬಸ್ ಅಂತ ಹೇಳಿ ಸಾವಿರ ಕಂಡೀಷನ್ ಹಾಕದಂತೆ ಮನವಿ ಮಾಡಿದ್ದಾರೆ. ಇಷ್ಟು ಕಿಲೋ ಮೀಟರ್ ವರೆಗೆ ಮಾತ್ರ ಉಚಿತ ಬಸ್ ಪ್ರಯಾಣ, ಇದೇ ಜಾಗದಲ್ಲಿ ಬಸ್ ಹತ್ತಿದರೆ ಮಾತ್ರ ಉಚಿತ ಪ್ರಯಾಣ, ಈ ಜಾಗಕ್ಕೆ ಬಸ್ ಬರಲಿದೆ ಅಂತ ಷರತ್ತು ವಿಧಿಸದಂತೆ ಆಗ್ರಹ ಮಾಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಗೆದ್ದಿರುವುದರಿಂದ ಕರೆಂಟ್ ಬಿಲ್​ ಕಟ್ಟಲ್ಲ: ವಿದ್ಯುತ್ ಬಿಲ್ ನೀಡಲು ಬಂದ ಸಿಬ್ಬಂದಿಗೆ ಗ್ರಾಮಸ್ಥರಿಂದ ತರಾಟೆ

ಹೊರ ರಾಜ್ಯದ ಮಹಿಳೆಯರಿಗೂ ಫ್ರೀ ಸೇವೆ ಸಿಗಲಿ

ಉಚಿತ ಬಸ್ ಪ್ರಯಾಣ ರಾಜ್ಯದ ಮಹಿಳೆಯರಿಗೆ ಮಾತ್ರವಲ್ಲ, ರಾಜ್ಯದಲ್ಲಿರುವ ಹೊರ ರಾಜ್ಯದ ಮಹಿಳೆಯರಿಗೂ ಉಚಿತವಾಗಿ ಬಸ್​ನಲ್ಲಿ ಪ್ರಯಾಣ ಮಾಡುವ ಅವಕಾಶ ನೀಡಬೇಕು. ಹಲವು ವರ್ಷಗಳಿಂದ ಬೆಂಗಳೂರಿನಲ್ಲಿದ್ದೇವೆ. ಮಹಿಳೆ ಅಂದರೆ ಮಹಿಳೆ, ಹೊರ ರಾಜ್ಯದ ಮಹಿಳೆಯರಿಗೂ ಫ್ರೀ ಸೇವೆ ಸಿಗಲಿ ಎಂದು ಹೊರ ರಾಜ್ಯದ ಮಹಿಳೆಯರು ಆಗ್ರಹ ಮಾಡಿದ್ದಾರೆ.

ವಿದ್ಯುತ್ ಬಿಲ್ ಕಟ್ಟಲು ಜನರ ಹಿಂದೇಟು

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆ ರಾಜ್ಯಾದ್ಯಂತ ಭರ್ಜರಿ ಪ್ರಚಾರ ಕೈಗೊಂಡಿದ್ದ ಕಾಂಗ್ರೆಸ್​, ಮತದಾರರನ್ನ ಗೆಲ್ಲಲು ಗ್ಯಾರಂಟಿಗಳನ್ನ ಕೊಟ್ಟಿತ್ತು. ಅದರಲ್ಲಿ 200 ಯುನಿಟ್​ವರೆಗೆ ಉಚಿತ ವಿದ್ಯುತ್​ನ್ನು ನಾವು ಅಧಿಕಾರಕ್ಕೆ ಬಂದೊಡನೆ ಮಾಡುತ್ತೆವೆಂದು ಹೇಳಿದ್ದರು. ಅದರಂತೆ ಕಾಂಗ್ರೆಸ್​ ಅಧಿಕಾರಕ್ಕೆ ಬಂದಿದ್ದು, ರಾಜ್ಯದ ಹಲವೆಡೆ ವಿದ್ಯುತ್ ಶುಲ್ಕ ಪಾವತಿಸಲು ಜನ ಹಿಂದೇಟು ಹಾಕುತ್ತಿದ್ದಾರೆ. ರಾಜ್ಯದ ಜನರು ನಾವು ಕರೆಂಟ್ ಬಿಲ್ ಕಟ್ಟಲ್ಲ ಎನ್ನಲಾರಂಭಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?