Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಬೆಂಗಳೂರಿನಲ್ಲಿ ಯುನಿಟಿ ಕಟ್ಟಡದಿಂದ ಬಿದ್ದು ಮಹಿಳೆ ಸಾವು; ಆತ್ಮಹತ್ಯೆ ಶಂಕೆ

ಮಹಿಳೆಯೊಬ್ಬರು ಕಟ್ಟದಿಂದ ಬಿದ್ದು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ಗುರುವಾರ ಸಂಜೆ ಸುಮಾರು 7 ಗಂಟೆ ವೇಳೆಗೆ ನಡೆದಿದೆ.

Bengaluru: ಬೆಂಗಳೂರಿನಲ್ಲಿ ಯುನಿಟಿ ಕಟ್ಟಡದಿಂದ ಬಿದ್ದು ಮಹಿಳೆ ಸಾವು; ಆತ್ಮಹತ್ಯೆ ಶಂಕೆ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:Apr 06, 2023 | 9:11 PM

ಬೆಂಗಳೂರು: ಮಹಿಳೆಯೊಬ್ಬರು ಕಟ್ಟದಿಂದ ಬಿದ್ದು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ (Bengaluru) ಗುರುವಾರ ಸಂಜೆ ಸುಮಾರು 7 ಗಂಟೆ ವೇಳೆಗೆ ನಡೆದಿದೆ. ಇದೊಂದು ಆತ್ಮಹತ್ಯೆ ಆಗಿರಬಹುದು ಎಂದು ಶಂಕಿಸಲಾಗಿದೆ. ನಗರದ ಯುನಿಟಿ ಕಟ್ಟಡದಿಂದ ಮಹಿಳೆ ಬಿದ್ದಿದ್ದಾರೆ. ಅವರು ಬಿದ್ದಿರುವ ರೀತಿ ನೋಡಿದರೆ ಆತ್ಮಹತ್ಯೆಯಂತೆ ಕಾಣಿಸುತ್ತಿದೆ ಎಂದು ಪ್ರತ್ಯಕ್ಷದರ್ಶಿ ಪ್ರೇಮ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಮೃತಪಟ್ಟಿರುವ ಮಹಿಳೆಯನ್ನು ಇಂಡಿಯನ್ ಆಯಿಲ್​ ಕಾರ್ಪೊರೇಷನ್​​ನ ಡಿವಿಷನಲ್​ ಆಫೀಸ್​ನ ಮ್ಯಾನೇಜರ್​​ ಅಪರ್ಣಕುಮಾರಿ ಎಂದು ಗುರುತಿಸಲಾಗಿದೆ.

ಮಹಿಳೆ ಕಿಟಕಿಯಿಂದ ಬಟ್ಟೆ ಹಾಕಿ ಕೆಳಗೆ ಇದ್ದರು. ಆಗ ಓರ್ವ ವ್ಯಕ್ತಿ ಮಹಿಳೆಯ ಕೈಹಿಡಿದುಕೊಂಡಿದ್ದರು. ವ್ಯಕ್ತಿಯ ಕೈಜಾರಿ ಕೆಳಗೆಬಿದ್ದು ಮಹಿಳೆ ಮೃತಪಟ್ಟಿದ್ದಾರೆ ಎಂದು ಪ್ರೇಮ್ ಹೇಳಿದ್ದಾರೆ.

ಮಹಿಳೆ ಕಟ್ಟಡದಿಂದ ಕೆಳಗೆ ಬಿದ್ದಾಗ ಉಸಿರಾಡುತ್ತಿದ್ದರು. ಘಟನಾ ಸ್ಥಳಕ್ಕೆ ಌಂಬುಲೆನ್ಸ್​ ಬರುವುದು ತಡವಾಯಿತು ಎಂದು ಪ್ರೇಮ್ ಹೇಳಿದ್ದಾರೆ.

ಇದನ್ನೂ ಓದಿ: Bengaluru Karaga Mahotsava: ಬೆಂಗಳೂರಿನ ಐತಿಹಾತಿಕ ಕರಗ ಮಹೋತ್ಸವದ ವೇಳೆ ಅಗ್ನಿ ಅವಘಡ, ಬೈಕ್​ಗಳು ಭಸ್ಮ

ಕಿಟಕಿ ತೆರೆದು ಬಟ್ಟೆ ಹಾಕಿ ಹೊರ ಹಾರಲು ಅಪರ್ಣಕುಮಾರಿ ಯತ್ನಿಸಿದ್ದಾರೆ. ಅಷ್ಟರಲ್ಲಿ ಅದನ್ನು ಕಂಡ ಆಫಿಸ್ ಸಿಬ್ಬಂದಿಯೊಬ್ಬರು ತಡೆಯಲು ಯತ್ನಿಸಿದ್ದಾರೆ. ಆದರೆ ಅವರ ಪ್ರಯತ್ನ ವಿಫಲವಾಗಿದೆ ಎಂದು ಇತರ ಮೂಲಗಳು ತಿಳಿಸಿವೆ.

ಸ್ಥಳಕ್ಕೆ ಎಸ್​ಜೆ ಪಾರ್ಕ್​ ಠಾಣೆ ಪೊಲೀಸರು ಭೇಟಿ ನೀಡಿದ್ದು, ಮಹಿಳೆಯ ಸಾವಿಗೆ ನಿಖರ ಕಾರಣ ಏನಿರಬಹುದು ಎಂಬ ಕುರಿತು ಅನ್ವೇಷಣೆ ನಡೆಸುತ್ತಿದ್ದಾರೆ. ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪೊಲೀಸರು ಕಚೇರಿಯಲ್ಲಿದ್ದ ಡೈರಿ ಹಾಗೂ ಮಹಿಳೆಯ ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಅಪರ್ಣಕುಮಾರಿ ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:58 pm, Thu, 6 April 23

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ