AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಅವೈಜ್ಞಾನಿಕ ರಸ್ತೆಗೆ ಮತ್ತೊಂದು ಜೀವ ಬಲಿ, ಗೂಡ್ಸ್ ಆಟೋದಿಂದ ಬಿದ್ದು ಮಹಿಳೆ ಸಾವು

ಘಟನೆಯಲ್ಲಿ ಬಾಲಕಿ ಸೇರಿ ಮೂವರಿಗೆ ಗಂಭೀರ ಗಾಯಗಳಾಗಿವೆ. ಗಾಯಳುಗಳನ್ನು ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೇಲ್ಸೇತುವೆ ಇಳಿಜಾರಿನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ, ಹಾಗೂ ಲಾರಿ ಚಾಲಕನ ಅತಿವೇಗವೇ ಅಪಘಾತಕ್ಕೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ.

ಬೆಂಗಳೂರಿನಲ್ಲಿ ಅವೈಜ್ಞಾನಿಕ ರಸ್ತೆಗೆ ಮತ್ತೊಂದು ಜೀವ ಬಲಿ, ಗೂಡ್ಸ್ ಆಟೋದಿಂದ ಬಿದ್ದು ಮಹಿಳೆ ಸಾವು
ಬೆಂಗಳೂರಿನಲ್ಲಿ ಅವೈಜ್ಞಾನಿಕ ರಸ್ತೆಗೆ ಮತ್ತೊಂದು ಜೀವ ಬಲಿ, ಗೂಡ್ಸ್ ಆಟೋದಿಂದ ಬಿದ್ದು ಮಹಿಳೆ ಸಾವು
TV9 Web
| Updated By: ಆಯೇಷಾ ಬಾನು|

Updated on:Aug 22, 2022 | 7:18 PM

Share

ಆನೇಕಲ್: ಬೆಂಗಳೂರಿನಲ್ಲಿ ಅವೈಜ್ಞಾನಿಕ ರಸ್ತೆಗೆ ಮತ್ತೊಂದು ಜೀವ ಬಲಿಯಾಗಿದೆ. ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರ ಬಳಿ ಲಾರಿ ಡಿಕ್ಕಿಯಾಗಿ ಗೂಡ್ಸ್ ಆಟೋದಲ್ಲಿದ್ದ ಮಹಿಳೆ ಆಟೋದಿಂದ ಕೆಳಗೆಬಿದ್ದು ಮೃತಪಟ್ಟಿದ್ದಾರೆ. ಪ್ರಮೀಳಾ(42) ಮೃತ ದುರ್ದೈವಿ.

ಘಟನೆಯಲ್ಲಿ ಬಾಲಕಿ ಸೇರಿ ಮೂವರಿಗೆ ಗಂಭೀರ ಗಾಯಗಳಾಗಿವೆ. ಗಾಯಳುಗಳನ್ನು ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೇಲ್ಸೇತುವೆ ಇಳಿಜಾರಿನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ, ಹಾಗೂ ಲಾರಿ ಚಾಲಕನ ಅತಿವೇಗವೇ ಅಪಘಾತಕ್ಕೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮರಕ್ಕೆ ನೇಣು ಬಿಗಿದುಕೊಂಡು‌ ವೃದ್ಧ ಆತ್ಮಹತ್ಯೆ

ಬೆಂಗಳೂರು: ಉತ್ತರ ತಾಲೂಕಿನ ಹೊನ್ನಸಂದ್ರ ಗ್ರಾಮದ ಬಳಿ ಮರಕ್ಕೆ ನೇಣು ಬಿಗಿದುಕೊಂಡು ರಾಜಪ್ಪ(60) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಟುಂಬದವರು ನನ್ನ ಮಾತು ಕೇಳುತ್ತಿಲ್ಲವೆಂದು ಮನನೊಂದು ರಾಜಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ರಾಜಪ್ಪ ಹೊನ್ನಸಂದ್ರ ಕ್ರಾಸ್​ನಲ್ಲಿ ಹೋಟೆಲ್​ ನಡೆಸುತ್ತಿದ್ದರು. ಕುಟುಂಬದಲ್ಲಿ ಕ್ಷುಲಕ ಕಾರಣಕ್ಕೆ ಆಗಾಗ ಜಗಳ ನಡೆಯುತ್ತಿತ್ತು. ಮನೆಯಲ್ಲಿ ಮಗ, ಸೊಸೆ, ಮೊಮ್ಮಕ್ಕಳು ಯಾರು ತನ್ನ ಮಾತು ಕೇಳುತ್ತಿಲ್ಲವೆಂದು ಮನನೊಂದು ವೃದ್ಧ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆ ಬದಿ ನಿಲ್ಲಿಸಿದ್ದ ನೀರಿನ ಟ್ಯಾಂಕರ್​ಗೆ ಬೈಕ್ ಡಿಕ್ಕಿ, ಇಬ್ಬರ ಸಾವು

ರಸ್ತೆ ಬದಿ ನಿಲ್ಲಿಸಿದ್ದ ನೀರಿನ ಟ್ಯಾಂಕರ್​ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಮೃತಪಟ್ಟ ಘಟನೆ ಹುಬ್ಬಳ್ಳಿ ನಗರದ ಗದಗ ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು ಆಸ್ಪತ್ರೆಗೆ ಸಾಗಿಸುವಾಗ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹುಬ್ಬಳ್ಳಿ ಉತ್ತರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಡೆತ್​​​ನೋಟ್ ಬರೆದಿಟ್ಟು ಯುವತಿ ನೇಣಿಗೆ ಶರಣು

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಾಮಸಮುದ್ರದಲ್ಲಿ ಡೆತ್​​​ನೋಟ್ ಬರೆದಿಟ್ಟು ಯುವತಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ನೇಣು ಬಿಗಿದುಕೊಂಡು ಉಷಾ(22) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರಿ ಕೆಲಸ ನೇಮಕಕ್ಕೆ ಕ್ರಿಮಿನಲ್ ಕೇಸೊಂದು ಅಡ್ಡಿಯಾಗಿತ್ತು. ಇದರಿಂದ ಮನನೊಂದು ಡೆತ್​ನೋಟ್​​ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಸಾವಿಗೆ ವ್ಯವಸ್ಥೆಯೇ ಕಾರಣ ಎಂದು ಉಲ್ಲೇಖ ಮಾಡಿದ್ದಾರೆ.

ಜಮೀನು ವಿಚಾರವಾಗಿ 2 ಕುಟುಂಬಗಳ ನಡುವೆ ಜಗಳ ಆಗಿತ್ತು. ಉಷಾ ತಾಯಿ ಯಶೋಧಮ್ಮ ಕುಟುಂಬಸ್ಥರು ಮತ್ತು ನಾಗರಾಜ ಕುಟುಂಬದ ನಡುವೆ ಜಗಳ ಆಗಿ ಕೇಸ್ ಆಗಿತ್ತು. ಜಮೀನಿನ ಜಗಳದಲ್ಲಿ ಉಷಾ A3 ಆರೋಪಿಯಾಗಿದ್ದರು. ಈ ಪ್ರಕರಣದಲ್ಲಿ ರಾಜಿ ಆಗುವಂತೆ ಎದುರಾಳಿಗೆ ಉಷಾ ಮನವಿ ಮಾಡಿದ್ದಾರೆ. ಆದ್ರೆ ಇದಕ್ಕೆ ಒಪ್ಪದ ನಾಗರಾಜ್ ಕುಟುಂಬ ಉಷಾರನ್ನು ನಿಂದಿಸಿದ್ದರು. ಚಾರ್ಜ್​ಶೀಟ್​ನಲ್ಲಿರುವ ಹೆಸರು ಕೈ ಬಿಡುವಂತೆಯೂ ಉಷಾ ಮನವಿ ಮಾಡಿದ್ದಾರೆ. ರಾಜಿ ಆಗದ ಕಾರಣ ಆರೋಪಿಯಾಗಿಯೇ ಉಳಿದಿದ್ದಾಳೆ. ಇದು ಸರ್ಕಾರಿ ಕೆಲಸಕ್ಕೆ ಅಡ್ಡಿಯಾಗುವ ಭೀತಿ ಹಿನ್ನೆಲೆ ನನ್ನ ಸಾವಿಗೆ ಕುಟುಂಬ ಕಾರಣ ಅಲ್ಲ, ವ್ಯವಸ್ಥೆ ಕಾರಣ ಅಂತ ಡೆತ್​ ನೋಟ್​ನಲ್ಲಿ ಉಲ್ಲೇಖಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಗರಾಜ್ ಮತ್ತಿತರರ ವಿರುದ್ಧ ಪರಶುರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 6:25 pm, Mon, 22 August 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!