AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನೈಸ್ ರಸ್ತೆಯಲ್ಲಿ ಲೇಡಿ ಬೈಕ್ ರೈಡರ್ಸ್ ಮತ್ತು ಸ್ಥಳೀಯನ ನಡುವೆ ಕಿರಿಕ್! ದೂರು-ಪ್ರತಿದೂರು ದಾಖಲು

Womens day 2023: ಮಹಿಳಾ ದಿನದ ಪ್ರಯುಕ್ತ ಬೈಕ್ ರೈಡ್ ತೆರಳಿದ ಯುವತಿಯರ ತಂಡ ಮತ್ತು ಸ್ಥಳೀಯರೊಬ್ಬರ ನಡುವೆ ಕಿರಿಕ್ ನಡೆದ ಘಟನೆ ಬೆಂಗಳೂರಿನ ನೈಸ್​ ರೋಡ್​ನಲ್ಲಿ ನಡೆದಿದೆ. ಪ್ರಕರಣ ಸಂಬಂಧ ದೂರು-ಪ್ರತಿದೂರು ದಾಖಲಾಗಿದೆ.

ಬೆಂಗಳೂರು: ನೈಸ್ ರಸ್ತೆಯಲ್ಲಿ ಲೇಡಿ ಬೈಕ್ ರೈಡರ್ಸ್ ಮತ್ತು ಸ್ಥಳೀಯನ ನಡುವೆ ಕಿರಿಕ್! ದೂರು-ಪ್ರತಿದೂರು ದಾಖಲು
ನೈಸ್ ರಸ್ತೆಯಲ್ಲಿ ಲೇಡಿ ಬೈಕ್ ರೈಡರ್ಸ್ ಮತ್ತು ಸ್ಥಳೀಯನ ನಡುವೆ ಕಿರಿಕ್
Rakesh Nayak Manchi
|

Updated on:Mar 05, 2023 | 10:41 PM

Share

ಬೆಂಗಳೂರು: ಮಹಿಳಾ ದಿನದ (International Women’s Day 2023) ಪ್ರಯುಕ್ತ ಬೈಕ್ ರೈಡ್ (Bike Riding) ತೆರಳಿದ ಯುವತಿಯರ ತಂಡ ಮತ್ತು ಸ್ಥಳೀಯನೊಂದಿಗೆ ಕಿರಿಕ್ ನಡೆದ ಘಟನೆ ಇಂದು (ಮಾರ್ಚ್ 5) ಮಧ್ಯಾಹ್ನ ಬೆಂಗಳೂರಿನ ನೈಸ್​ ರೋಡ್​ನಲ್ಲಿ ನಡೆದಿದ್ದು, ದೂರು-ಪ್ರತಿ ದೂರು ದಾಖಲಾಗಿದೆ. ಯುವತಿಯರ ತಂಡವೊಂದು ಮಹಿಳಾ ದಿನದ ಪ್ರಯುಕ್ತ ಬೈಕ್ ರೈಡ್​ ಆರಂಭಿಸಿದ್ದಾರೆ. ಅದರಂತೆ ನಗರದ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ನೈಸ್​ ರಸ್ತೆ ಬಳಿ ತೆರಳುತ್ತಿದ್ದಾಗ ಒಂದೆಡೆ ಬೈಕ್ ನಿಲ್ಲಿಸಿದ್ದು, ಈ ವೇಳೆ ಬಳಿ ಬಂದ ಸ್ಥಳೀಯ, ಗಾಡಿಗಳನ್ನು ತೆಗೆದುಕೊಂಡು ಹೋಗುವಂತೆ ನಿಂದಿಸಿದ್ದಾಗಿ ಆರೋಪಿಸಲಾಗಿದೆ. ಈ ವೇಳೆ ಉಂಟಾದ ಕಿರಿಕ್ ಕೋಣನಕುಂಟೆ ಠಾಣೆ ಮೆಟ್ಟಿಲೇರಿದೆ.

ಬೈಕ್​ಗಳನ್ನು ತೆಗೆದುಕೊಂಡು ಹೋಗುವಂತೆ ನಿಂದಿಸಿದ್ದಲ್ಲದೆ ಯುವತಿಯೊಬ್ಬಳ ಬೈಕ್ ಕೀಯನ್ನು ಬಲವಂತವಾಗಿ ತೆಗೆದುಕೊಂಡು ಹೋಗಿದ್ದಾರೆ. ಈ ಸಂಬಂಧ ಯುವತಿಯರು ಕೋಣನಕುಂಟೆ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಅದರಂತೆ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡಿದ್ದಾರೆ. ಮತ್ತೊಂದೆಡೆ ಆರೊಪಕ್ಕೊಳಗಾದ ವ್ಯಕ್ತಿಯೂ ಠಾಣೆಗೆ ತೆರಳಿ ಪ್ರತಿದೂರು ದಾಖಲಿಸಿದ್ದು, ಪೊಲೀಸರು ಎರಡನೇ ಎಫ್​ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿ: International Women’s Day 2023: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ಹಾಗೂ ಧ್ಯೇಯದ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ

ತನ್ನ ವಿರುದ್ಧ ಯುವತಿಯರು ದೂರು ದಾಖಲಿಸುತ್ತಿದ್ದಂತೆ ಪ್ರತಿದೂರು ದಾಖಲಿಸಿದ ಸ್ಥಳೀಯ, ರಸ್ತೆಯ ಪಕ್ಕದಲ್ಲೇ ತನಗೆ ಸೇರಿದ ಜಾಗವಿದೆ. ಈ ಹಿನ್ನಲೆ ಯುವತಿಯರಿಗೆ ತೆರಳಲು ಸೂಚಿಸಿದ್ದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸದ್ಯ ಎರಡು ದೂರುಗಳನ್ನು ಪಡೆದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ, ಕೋಣನಕುಂಟೆ ಪೊಲೀಸ್ ಠಾಣೆಯ ಮುಂದೆ ಕೆಲವು ಬೈಕ್ ರೈಡರ್ಸ್ ಜಮಾಯಿಸಿದ್ದು, ಸುಬ್ರಹ್ಮಣ್ಯಪುರ ಎಸಿಪಿಯಿಂದ ಯುವತಿಯರನ್ನು ವಿಚಾರಣೆ ನಡೆಸಲಾಗುತ್ತಿದೆ. ಜೊತೆಗೆ ಕಿರಿಕ್ ಮಾಡಿದ ವ್ಯಕ್ತಿ ಹಾಗೂ ಆತನ ತಂದೆಯನ್ನೂ ವಿಚಾರಿಸಲಾಗುತ್ತಿದೆ. ಸದ್ಯ ಎರಡು ಕಡೆಯವರೂ ಠಾಣೆಯಲ್ಲೇ ಇದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:17 pm, Sun, 5 March 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್