AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಮಿಕನಿಗೆ ಮೆಟ್ರೋದಲ್ಲಿ ಬಿಡದೆ ಅವಮಾನ ಆರೋಪ: ನಡೆದಿದ್ದೇನು? ಇಲ್ಲಿದೆ ಸತ್ಯಾಸತ್ಯತೆ

ಇತ್ತೀಚಿಗೆ ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಸಿಬ್ಬಂದಿ ರೈತನನ್ನ ಒಳಗಡೆ ಬಿಡದೆ ಅವಮಾನಿಸಿದ್ದರು. ಇದರ ಬೆನ್ನಲೇ ಏ.07 ರಂದು ‘ಬಟ್ಟೆ ಸರಿಯಿಲ್ಲ ಎಂದು ಮೊಟ್ರೋ(Namma Metro) ಸಿಬ್ಬಂದಿ ಕಾರ್ಮಿಕನನ್ನು ತಡೆದು ನಿಲ್ಲಿಸಿ ಅಪಮಾನಿಸಲಾಗಿದೆ ಎಂಬ ಆರೋಪ ದೊಡ್ಡಕಲ್ಲಸಂದ್ರ ಮೆಟ್ರೋ ನಿಲ್ದಾಣದಲ್ಲಿ (Doddakallasandra metro Station) ಕೇಳಿಬಂದಿತ್ತು. ಇದಕ್ಕೆ ಬಿಎಂಆರ್​ಸಿಎಲ್​ ಇದೀಗ ಸ್ಪಷ್ಟನೆ ನೀಡಿದೆ.

ಕಾರ್ಮಿಕನಿಗೆ ಮೆಟ್ರೋದಲ್ಲಿ ಬಿಡದೆ ಅವಮಾನ ಆರೋಪ: ನಡೆದಿದ್ದೇನು? ಇಲ್ಲಿದೆ ಸತ್ಯಾಸತ್ಯತೆ
ಕಾರ್ಮಿಕನಿಗೆ ಮೆಟ್ರೋದಲ್ಲಿ ಬಿಡದೆ ಅವಮಾನ ಆರೋಪ
ಕಿರಣ್​ ಸೂರ್ಯ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Apr 10, 2024 | 7:34 PM

Share

ಬೆಂಗಳೂರು, ಏ.10: ದೊಡ್ಡಕಲ್ಲಸಂದ್ರ ಮೆಟ್ರೋ ನಿಲ್ದಾಣದಲ್ಲಿ (Doddakallasandra metro Station) ಬಟ್ಟೆ ಸರಿಯಿಲ್ಲ ಎಂಬ ಕಾರಣಕ್ಕೆ ಮೊಟ್ರೋ(Namma Metro) ಸಿಬ್ಬಂದಿ ಕಾರ್ಮಿಕನನ್ನು ತಡೆದು ನಿಲ್ಲಿಸಿ ಅಪಮಾನಿಸಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು. ಶರ್ಟ್​​ನ​​ ಗುಂಡಿಯನ್ನ ಹಾಕಿಕೊಂಡು ನೀಟಾಗಿ ಬಾ, ಇಲ್ಲದಿದ್ದರೆ ಒಳಗೆ ಪ್ರವೇಶವಿಲ್ಲ ಎಂದು ಮೆಟ್ರೋ ಸಿಬ್ಬಂದಿ ಕಾರ್ಮಿಕನಿಗೆ ಹೇಳಿದ್ದರು ಎನ್ನಲಾಗಿತ್ತು. ಇದಕ್ಕೆ ಭಾರಿ ಆಕ್ರೋಶ ಕೂಡ ವ್ಯಕ್ತವಾಗಿತ್ತು. ಇದೀಗ ಬಿಎಂಆರ್​​ಸಿಎಲ್​​ ದೊಡ್ಡಕಲ್ಲಸಂದ್ರ ಘಟನೆ ಬಗ್ಗೆ ಸ್ಪಷ್ಟೀಕರಣ ನೀಡಿದೆ.

ಏ.7ರಂದು ದೊಡ್ಡಕಲ್ಲಸಂದ್ರ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿತ್ತು. ಮದ್ಯಸೇವಿಸಿ ಮೆಟ್ರೋದಲ್ಲಿ ಪ್ರಯಾಣಿಸಲು ವ್ಯಕ್ತಿಯೊಬ್ಬ ಮುಂದಾಗಿದ್ದ. ಈ ವೇಳೆ ಮೆಟ್ರೋ ಭದ್ರತಾ ಸಿಬ್ಬಂದಿ ಆತನನ್ನು ತಪಾಸಣೆ ಮಾಡಿದ್ದಾರೆ. ಬಳಿಕ ಆತನಿಂದ ಮದ್ಯದ ವಾಸನೆ ಗಮನಿಸಿ ಪ್ರಯಾಣಿಸದಂತೆ ಹೇಳಿದ್ದಾರೆ. ಆದರೆ, ಸಾಮಾಜಿಕ ಜಾಲತಾಣದಲ್ಲಿ ಈ ಘಟನೆಯ ಕುರಿತು ವ್ಯಕ್ತಿಯ ಬಟ್ಟೆ ಕೊಳಕಾಗಿತ್ತು ಅಥವಾ ಶರ್ಟ್ ಬಟನ್ ಹರಿದಿತ್ತು ಎಂಬ ಕಾರಣಕ್ಕಾಗಿ ಆತನಿಗೆ ಪ್ರಯಾಣ ನಿರಾಕರಿಸಿದೆ ಎನ್ನಲಾಗಿತ್ತು. ಆದರೆ, ಆ ವ್ಯಕ್ತಿ ಮದ್ಯಸೇವಿಸಿದ ಹಿನ್ನೆಲೆ ಪ್ರಯಾಣಿಸಲು ನಿರಾಕರಿಸಿದ್ದಾಗಿ ಮೆಟ್ರೋ ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ:ಬೆಂಗಳೂರು: ಕಾರ್ಮಿಕನನ್ನು ಮೆಟ್ರೋದೊಳಗೆ ಬಿಡದೆ ಅವಮಾನಿಸಿದ ಸಿಬ್ಬಂದಿ

ಇತ್ತೀಚಿಗೆ ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಸಿಬ್ಬಂದಿ ರೈತನನ್ನ ಒಳಗಡೆ ಬಿಡದೆ ಅವಮಾನಿಸಿದ್ದರು. ಬಟ್ಟೆ ಸ್ವಚ್ಛವಾಗಿಲ್ಲ ಎಂಬ ಕಾರಣಕ್ಕೆ ರೈತನನ್ನು ಮೆಟ್ರೋ ಒಳಗೆ ಬಿಡದೆ ಸಿಬ್ಬಂದಿ ಅವಮಾನಿಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ಬಳಿಕ ಆ ಸಿಬ್ಬಂದಿಯ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಬಿಎಂಆರ್​ಸಿಎಲ್​ ಹೇಳಿತ್ತು. ಇದೀಗ ಅಂತಹುದೇ ಮತ್ತೊಂದು ಘಟನೆ ನಡೆದಿದೆ ಎಂಬ ಊಹಾಪೋಹಗಳಿಗೆ ಬಿಎಂಆರ್​ಸಿಎಲ್​ ಸ್ಪಷ್ಟನೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:33 pm, Wed, 10 April 24

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ