AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕ್ರಿಕೆಟ್​ ಬೆಟ್ಟಿಂಗ್ ದಂಧೆ: ಸಿಸಿಬಿ ದಾಳಿ ವೇಳೆ ಸಿಕ್ತು 1 ಕೆಜಿ ಗೋಲ್ಡ್ ಬಿಸ್ಕೆಟ್

ಆನ್ಲೈನ್ ನಲ್ಲಿ ಕೆಲ ವೆಬ್ ಸೈಟ್ ಮೂಲಕ ಬೆಟ್ಟಿಂಗ್ ನಡೆಸಲಾಗುತ್ತಿದೆ ಎಂಬ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಆರ್.ಆರ್. ನಗರದ ಫ್ಲಾಟ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದು ನೂರು ಗ್ರಾಂನ ಹತ್ತು ಚಿನ್ನದ ಬಿಸ್ಕೆಟ್​ಗಳು ಸೇರಿದಂತೆ ಬರೋಬ್ಬರಿ ಒಂದು ಕೆಜಿ ಚಿನ್ನ ಪತ್ತೆಯಾಗಿದೆ.

ಬೆಂಗಳೂರಿನಲ್ಲಿ ಕ್ರಿಕೆಟ್​ ಬೆಟ್ಟಿಂಗ್ ದಂಧೆ: ಸಿಸಿಬಿ ದಾಳಿ ವೇಳೆ ಸಿಕ್ತು 1 ಕೆಜಿ ಗೋಲ್ಡ್ ಬಿಸ್ಕೆಟ್
ಪೊಲೀಸರು ವಶಕ್ಕೆ ಪಡೆದ ವಸ್ತುಗಳು
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ಆಯೇಷಾ ಬಾನು|

Updated on: Nov 21, 2023 | 9:42 AM

Share

ಬೆಂಗಳೂರು, ನ.21: ವರ್ಡ್ ಕಪ್ ಫೈನಲ್ ಮ್ಯಾಚ್ ನಲ್ಲಿ ಬೆಟ್ಟಿಂಗ್ (World Cup Match Betting) ಆಡುತ್ತಿದ್ದ ಹಿನ್ನೆಲೆ ಸಿಸಿಬಿ ಪೊಲೀಸರು (CCB Police) ಆರ್.ಆರ್. ನಗರದಲ್ಲಿ ಫ್ಲಾಟ್ ಒಂದರ ಮೇಲೆ ದಾಳಿ ನಡೆಸಿದ್ದು ಒಂದು ಕೆಜಿ ಚಿನ್ನ, ಲ್ಯಾಪ್ ಟಾಪ್ ಹಾಗು ಮೊಬೈಲ್ ಪತ್ತೆಯಾಗಿದೆ. ಆನ್ಲೈನ್ ನಲ್ಲಿ ಕೆಲ ವೆಬ್ ಸೈಟ್ ಮೂಲಕ ಬೆಟ್ಟಿಂಗ್ ನಡೆಸಲಾಗುತ್ತಿದೆ ಎಂಬ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಆರ್.ಆರ್. ನಗರದ ಫ್ಲಾಟ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದು ನೂರು ಗ್ರಾಂನ ಹತ್ತು ಚಿನ್ನದ ಬಿಸ್ಕೆಟ್​ಗಳು (Gold Biscuits) ಸೇರಿದಂತೆ ಬರೋಬ್ಬರಿ ಒಂದು ಕೆಜಿ ಚಿನ್ನ ಪತ್ತೆಯಾಗಿದೆ. ಚಿನ್ನಕ್ಕೆ ಯಾವುದೇ ದಾಖಲೆಗಳು ಸಿಕ್ಕಿಲ್ಲ. ಹೀಗಾಗಿ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಕೊಲೆ ಮಾಡುವ ಮುಂಚೆಯೇ ಹಂತಕರನ್ನು ಬಂಧಿಸಿದ ಪೊಲೀಸರು

ರವಿ ಅಲಿಯಾಸ್ ಟ್ಯಾಂಗೋ ರವಿ ಎಂಬ ರೌಡಿಯೋರ್ವನ ಕೊಲೆಗೆ ಸಂತು ಗ್ಯಾಂಗ್ ಸ್ಕೆಚ್ ಹಾಕಿತ್ತು. ಸದ್ಯ ಕೊಲೆ ಮಾಡುವ ಮೊದಲೇ ಸಿಸಿಬಿ ಪೊಲೀಸರು ಗ್ಯಾಂಗ್ ಅರೆಸ್ಟ್ ಮಾಡಿದ್ದಾರೆ. ಸಂತೋಷ್ ಅಲಿಯಾಸ್ ಸಂತು, ಕಿರಣ್ ಹರೀಶ್, ರಘು ಮತ್ತು ಕುಮಾರ್ ಬಂಧಿತ ಅರೋಪಿಗಳು. ಆನಂದ್ ಕೊಲೆ ಕೇಸ್ ನಲ್ಲಿ ಜೈಲಿನಲ್ಲಿ ಇರುವ ಉಮೇಶ್ ಅಲಿಯಾಸ್ ಮಿಕಾನ ಸಹಕರ ಸಂತೋಷ್​ ಗ್ಯಾಂಗ್ ಕೊಲೆಗೆ ಸಂಚು ರೂಪಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಇದನ್ನೂ ಓದಿ: ಸತ್ತು ಹೋಗಿದ್ದೇನೆ ಎಂದು ನಂಬಿಸಿ 2 ವರ್ಷದಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಅರೆಸ್ಟ್!‌

ಕೆಲ ದಿನಗಳ ಹಿಂದೆ ನೆಲಮಂಗಲ ಬಳಿ ಇಸ್ವೀಟ್ ಅಡ್ಡೆಯಲ್ಲಿ ಭೇಟಿಯಾಗಿದ್ದ ರೌಡಿ ರವಿ ಮತ್ತು ಸಂತೋಷ್​ಗೆ ಫೈನಾನ್ಸ್ ಮಾಡುವಾಗ ಗಲಾಟೆ ನಡೆದಿತ್ತು. ಈ ವೇಳೆ ಟ್ಯಾಂಗೋ ರವಿ ಸಂತೂ ಮೇಲೆ ಹಲ್ಲೆ ನಡೆಸಿದ್ದ. ಹಲ್ಲೆ ವಿಚಾರ ಉಮೇಶ್ ಬಳಿ ಹೇಳಿಕೊಂಡಿದ್ದ. ನಂತರ ಟ್ಯಾಂಗೋ ರವಿಯನ್ನು ಕೊಲೆ ಮಾಡಲು ಪ್ಲಾನ್ ಹಾಕಿದ್ದ. ಸುಮಾರು ಏಂಟರಿಂದ ಹತ್ತು ಕಾರಿನಲ್ಲಿ ಗ್ಯಾಂಗ್ ಮಾಡಿಕೊಂಡು ಟ್ಯಾಂಗೋ ಊರಾದ ಅಮೃತೂರಿಗೆ ಸಂತೂ ಗ್ಯಾಂಗ್ ಹೋಗಿತ್ತು. ಸಿಕ್ಕ ಸಿಕ್ಕಲ್ಲಿ ಹೊಡೆದು ಬಿಡಬೇಕು ಎಂದು ಪ್ಲಾನ್ ಮಾಡಿದ್ರು. ಆದರೆ ಈ ವೇಳೆ ಟ್ಯಾಂಗೋ ಮನೆಯಲ್ಲಿ ಇಲ್ಲದೆ ಎಸ್ಕೇಪ್ ಆಗಿದ್ರು. ಈ ವಿಚಾರ ತಿಳಿದಿದ್ರು ಸಹ ಅಮೃತೂರು ಪೊಲೀಸರು ಕೇಸ್ ಹಾಕದೆ ಹಾಗೆಯೇ ವಾರ್ನ್ ಮಾಡಿ ಕಳಿಸಿದ್ದರು. ಬಳಿಕ ಪೀಣ್ಯ ಬಳಿ ಟ್ಯಾಂಗೋ ರವಿ ಕೊಲೆಗೆ ಸಂತೂ ಮತ್ತೊಂದು ಪ್ಲಾನ್ ಮಾಡಿದ್ದ. ಈ ಮಾಹಿತಿ ಪಡೆದಿದ್ದ ಸಿಸಿಬಿಯ OCW ವಿಭಾಗ ಮಾಹಿತಿ ಅನ್ವಯ ಕಾರ್ಯಾಚರಣೆ ನಡೆಸಿ ರೌಡಿಗಳನ್ನು ಅರೆಸ್ಟ್ ಮಾಡಿದೆ. ಆರೋಪಿಗಳಿಂದ ಮಚ್ಚು ಲಾಂಗ್ ಪೆಪ್ಪರ್ ಸ್ಪ್ರೇ ವಶಕ್ಕೆ ಪಡೆಯಲಾಗಿದೆ. ಪೀಣ್ಯ ಪೊಲೀಸ್ ಠಾಣೆ ಯಲ್ಲಿ ಕೇಸ್ ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ