ಬೆಂಗಳೂರು ಕರಗ ಮಹೋತ್ಸವ: ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ, ಇಲ್ಲಿದೆ ವಿವರ

| Updated By: ಗಣಪತಿ ಶರ್ಮ

Updated on: Apr 23, 2024 | 8:16 AM

Bengaluru Traffic Restrictions: ಬೆಂಗಳೂರಿನ ವಾಹನ ಸವಾರರೇ, ಗಮನಿಸಿ. ಐತಿಹಾಸಿಕ ಕರಗ ಮಹೋತ್ಸವದ ಪ್ರಯುಕ್ತ ನಗರದ ಹಲವು ಕಡೆಗಳಲ್ಲಿ ಇಂದು ಸಂಚಾರ ನಿರ್ಬಂಧ, ವಾಹನ ನಿಲುಗಡೆ ನಿಷೇಧ ಇದೆ. ಕರಗ ಮೆರವಣಿಗೆ ಯಾವೆಲ್ಲ ರಸ್ತೆಗಳಲ್ಲಿ ಸಾಗಲಿದೆ? ಯಾವೆಲ್ಲ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹೇರಲಾಗಿದೆ? ಪಾರ್ಕಿಂಗ್ ಸ್ಥಳಗಳು ಎಲ್ಲೆಲ್ಲಿ ಎಂಬಿತ್ಯಾದಿ ಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು ಕರಗ ಮಹೋತ್ಸವ: ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ, ಇಲ್ಲಿದೆ ವಿವರ
ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ, ಇಲ್ಲಿದೆ ವಿವರ
Follow us on

ಬೆಂಗಳೂರು, ಏಪ್ರಿಲ್ 23: ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವ (Karaga Festival) ಇಂದು ನಡೆಯುತ್ತಿದ್ದು, ಈ ಪ್ರಯುಕ್ತ ನಗರದ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ (Traffic Restrictions) ಹೇರಲಾಗಿದೆ. ಇಂದು ಮಧ್ಯರಾತ್ರಿ 2 ಗಂಟೆಯಿಂದ ಬೆಳಗ್ಗೆ 10 ಗಂಟೆಯವರೆಗೂ ಕರಗ ಮಹೋತ್ಸವದ ಮೆರವಣಿಗೆ ಸಾಗಲಿದೆ. ಹೀಗಾಗಿ ಮೆರವಣಿಗೆ ಸಾಗುವ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ವಿಧಿಸಿ ಸಂಚಾರ ಪೊಲೀಸರು (Traffic Police) ಆದೇಶ ಹೊರಡಿಸಿದ್ದಾರೆ. ಕರಗ ಮೆರವಣಿಗೆ ಯಾವೆಲ್ಲ ರಸ್ತೆಗಳಲ್ಲಿ ಸಾಗಲಿದೆ? ಯಾವೆಲ್ಲ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹೇರಲಾಗಿದೆ ಎಂಬ ಮಾಹಿತಿ ಇಲ್ಲಿದೆ.

ಇಂದು ಮಧ್ಯರಾತ್ರಿ 2 ಗಂಟೆಗೆ ಕರಗ ಮಹೋತ್ಸವ ನಡೆಯಲಿದೆ. ಅದ್ಧೂರಿಯಾಗಿ ಕರಗ ಆಚರಣೆಗೆ ಕರಗ ಸಮಿತಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಇಂದು ಬೆಳಗ್ಗೆಯಿಂದ ಕರಗದ ಶಾಸ್ತ್ರಗಳು ಆರಂಭವಾಗಿ ಮಧ್ಯರಾತ್ರಿವರೆಗೂ ನಡೆಯಲಿದ್ದು, ಶಾಸ್ತ್ರಗಳು ಮುಗಿದ ನಂತರ ಮಧ್ಯರಾತ್ರಿ 2 ಗಂಟೆಗೆ ಅಧಿಕೃತವಾಗಿ ಕರಗ ಶಕ್ತ್ಯೋತ್ಸವ ಆರಂಭವಾಗಲಿದೆ. ಕರಗ ಮೆರವಣಿಗೆ ನೋಡಲು ಲಕ್ಷಾಂತರ ಭಕ್ತರು ಸೇರುವ ಸಾಧ್ಯತೆಯಿದೆ. ಹೀಗಾಗಿ 3 ಸಾವಿರ ಪೋಲಿಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗುತ್ತಿದ್ದು, 25 ಸಾವಿರ ಸಿಸಿಟಿವಿ ಅಳವಡಿಕೆ‌ ಮಾಡಲಾಗಿದೆ.‌

ಕರಗ ಸಾಗುವ ಮಾರ್ಗ

  • ನಗರ್ತಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಆರಂಭ.
  • ಕಬ್ಬನ್​ಪೇಟೆ, ಗಾಣಿಗರಪೇಟೆ, ಅವೆನ್ಯೂ ರಸ್ತೆ ಮೂಲಕ ಸಂಚಾರ.
  • ಕೆಆರ್ ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇಗುಲಕ್ಕೆ ಆಗಮನ
  • ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ರಾಣಾಸಿಂಗ್​ಪೇಟೆ
  • ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ, ಮಸ್ತಾನ್ ಸಾಹೇಬ್ ದರ್ಗಾ
  • ಬಳೆಪೇಟೆ ಮುಖ್ಯ ರಸ್ತೆ, ಕೆ.ಜಿ.ರಸ್ತೆ, ಎಸ್​ಪಿ ರಸ್ತೆ ಮೂಲಕ ಸಾಗಿ ಅಣ್ಣಮ್ಮ ದೇಗುಲಕ್ಕೆ ಬಂದು ಅದೇ ಮಾರ್ಗದಲ್ಲಿ ವಾಪಸ್
  • ಕಿಲ್ಲಾರಿ ರಸ್ತೆ, ಮೈಸೂರು ಬ್ಯಾಂಕ್ ವೃತ್ತ, ಅವೆನ್ಯೂ ರಸ್ತೆ ಕ್ರಾಸ್
  • ಆರ್.ಟಿ.ರಸ್ತೆ, ಕುಂಬಾರಪೇಟೆ, ಗೊಲ್ಲರಪೇಟೆ, ತಿಗಳರಪೇಟೆ
  • ಸುಣಕಲ್ ಪೇಟೆ ಮೂಲಕ ಬೆಳಗ್ಗೆ 6 ಗಂಟೆಗೆ ಧರ್ಮರಾಯಸ್ವಾಮಿ ದೇವಾಲಯ ಸೇರಲಿರುವ ಕರಗ

ಕರಗಕ್ಕಾಗಿ ಎಲ್ಲೆಲ್ಲಿ ಸಂಚಾರ ನಿಷೇಧ?

  • ಸಿಟಿ ಮಾರುಕಟ್ಟೆ ವೃತ್ತದಿಂದ ಅವೆನ್ಯೂ ರಸ್ತೆ ಮೂಲಕ ಮೈಸೂರು ಬ್ಯಾಂಕ್ ವೃತ್ತದವರೆಗೆ ಎಲ್ಲಾ ವಾಹನ ಸಂಚಾರ ನಿಷೇಧ
  • ಕರಗ ಅವೆನ್ಯೂ ರಸ್ತೆ ಪ್ರವೇಶಿಸುತ್ತಿದ್ದಂತೆ ಎ.ಎಸ್.ಚಾರ್ ರಸ್ತೆಯಿಂದ, ಸಿಟಿ ಮಾರುಕಟ್ಟೆ ವೃತ್ತದ ಕಡೆ ವಾಹನ ಸಂಚಾರ ಸಂಪೂರ್ಣ ನಿರ್ಬಂಧ
  • ಎಸ್​ಜೆಪಿ ರಸ್ತೆಯಿಂದ ಎನ್.ಆರ್.ವೃತ್ತದ ಕಡೆ ತೆರಳುವ ಸವಾರರು ಪಿ.ಕೆ.ಲೇನ್ ಬಳಿ ಎಡತಿರುವು ಪಡೆಯುವುದನ್ನು ನಿರ್ಬಂಧಿಸಲಾಗಿದೆ

ಪರ್ಯಾಯ ಮಾರ್ಗಗಳು

  • ಎಸ್‌ಜೆಪಿ ರಸ್ತೆ-ಟೌನ್​ಹಾಲ್, ಕೆಂಪೇಗೌಡರಸ್ತೆ ಮಾರ್ಗವಾಗಿ ತೆರಳಬಹುದು.
  • ಮೈಸೂರು ರಸ್ತೆಯ ಎ.ಎಸ್.ಚಾರ್ ರಸ್ತೆಯಲ್ಲಿ ಬಲ ರಾಯನ್ ವೃತ್ತದ ಮೂಲಕ ಸಂಚರಿಸಬಹುದು.
  • ಚಾಮರಾಜಪೇಟೆ ಕಡೆಯಿಂದ ಬರುವ ವಾಹನಗಳು ಪ್ರೋ. ಶಿವಶಂಕರ ವೃತ್ತದ ಮೂಲಕ ದೆ.ಸಿ ರಸ್ತೆಯನ್ನು ಪ್ರವೇಶಿಸಿ ಟೌನ್ ಹಾಲ್ ಕಡೆಗೆ ಸಂಚರಿಸಬಹುದು.

ಪಾರ್ಕಿಂಗ್ ಸ್ಥಳಗಳು

  • ಕರಗ ಉತ್ಸವಕ್ಕೆ ಬರುವ ಸಾರ್ವಜನಿಕರು ತಮ್ಮ ವಾಹನಗಳನ್ನು ಬನ್ನಪ್ಪ ಪಾರ್ಕ್​​​ ಹಾಗೂ ಪುರಭವನ, ಬಿಬಿಎಂಪಿ ಮಾರ್ಕೆಟ್ ಕಾಂಪ್ಲೆಕ್ಸ್ ಇಲ್ಲಿ ವಾಹನ ನಿಲುಗಡೆ ಮಾಡಬಹುದಾಗಿರುತ್ತದೆ.

ಇದನ್ನೂ ಓದಿ: ಐತಿಹಾಸಿಕ ಬೆಂಗಳೂರು ಕರಗ ಬಗ್ಗೆ ನಿಮಗೆಷ್ಟು ಗೊತ್ತು? ಮೆರವಣಿಗೆ ವೇಳೆ ಕರಗ ದರ್ಗಾಗೆ ಹೋಗುವುದೇಕೆ?

ಪಾರ್ಕಿಂಗ್ ನಿಷೇಧಿತ ಸ್ಥಳಗಳು

ಪಿ.ಕೆ ಲೈನ್, ಓ.ಟಿ.ಸಿ ರಸ್ತೆ, ಎಸ್‌ಪಿ ರಸ್ತೆ, ಕಬ್ಬನ್‌ಪೇಟೆ ರಸ್ತೆ, ಸುಣ್ಣಕಲ್ ಪೇಟೆ ರಸ್ತೆ, ಎಸ್.ಜೆ.ಪಿ. ಸಿಟಿ ಮಾರ್ಕೆಟ್ ಸರ್ಕಲ್, ಎಸ್.ಜೆ.ಪಿ ರಸ್ತೆ, ಅವೆನ್ಯೂ ರಸ್ತೆ, ಎ.ಎಸ್.ಚಾರ್ ಸ್ಟ್ರೀಟ್ ನಿಂದ ಮಾರ್ಕೆಟ್ ಸರ್ಕಲ್ ವರೆಗೆ ರಸ್ತೆಗಳಲ್ಲಿ ಎಲ್ಲಾ ಮಾದರಿಯ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:53 am, Tue, 23 April 24