AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗೆ ಬಿಎಂಟಿಸಿ ಕಂಡಕ್ಟರ್ ಕಪಾಳ ಮೋಕ್ಷ, ಪ್ರಕರಣ ಫುಲ್ ಗೊಂದಲಮಯ

ಸೆ.15ರಂದು ರಾಮಗೊಂಡನಹಳ್ಳಿ ಸರ್ಕಾರಿ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಶಾಲೆ ಮುಗಿಸಿ ಮನೆಗೆ ತೆರಳಲು ಬಿಎಂಟಿಸಿ ಬಸ್‌ ಹತ್ತಿದ್ದ. ತೂಬರಹಳ್ಳಿಗೆ ಹೋಗಲು ಟಿಕೆಟ್​ ಪಡೆಯಲು ತಲಾ 10ರೂ. ನಂತೆ ಇಬ್ಬರು ವಿದ್ಯಾರ್ಥಿಗಳು ಕಂಡಕ್ಟರ್​ಗೆ ದುಡ್ಡು ನೀಡಿದ್ದರು. ಆದರೆ ಕಂಡಕ್ಟರ್ ಒಬ್ಬರಿಗೆ ಮಾತ್ರ ಟಿಕೆಟ್ ನೀಡಿದ್ದಾರೆ ಎನ್ನಲಾಗಿದೆ. ಮತ್ತೊಬ್ಬ ವಿದ್ಯಾರ್ಥಿ ಟಿಕೆಟ್ ಕೇಳಿದಾಗ ಕಂಡಕ್ಟರ್ ಮತ್ತೆ ಹಣ ಕೊಡುವಂತೆ ಕೇಳಿದ್ದಾರೆ. ಆಗ ವಿದ್ಯಾರ್ಥಿ ಹಣ ನೀಡಿರುವಾಗಿ ಹೇಳಿದಾಗ ವಾದ ಆಗಿ ಕಂಡಕ್ಟರ್, ವಿದ್ಯಾರ್ಥಿ ಮುಖಕ್ಕೆ ಕಪಾಳಮೋಕ್ಷ ಮಾಡಿದ್ದರು.

ವಿದ್ಯಾರ್ಥಿಗೆ ಬಿಎಂಟಿಸಿ ಕಂಡಕ್ಟರ್ ಕಪಾಳ ಮೋಕ್ಷ, ಪ್ರಕರಣ ಫುಲ್ ಗೊಂದಲಮಯ
ಬಿಎಂಟಿಸಿ
TV9 Web
| Edited By: |

Updated on: Sep 20, 2023 | 2:37 PM

Share

ಬೆಂಗಳೂರು, ಸೆ.20: ಕಳೆದ ವಾರ ಬಿಎಂಟಿಸಿ(BMTC) ಬಸ್ ಕಂಡಕ್ಟರ್ 11 ವರ್ಷದ ವಿದ್ಯಾರ್ಥಿಗೆ ಕಪಾಳಮೋಕ್ಷ(Assault) ಮಾಡಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಕಂಡಕ್ಟರ್(Conductor) ನಿರಪರಾಧಿ ಎಂದು ಹೇಳಲಾದ ಸಿಸಿಟಿವಿ ದೃಶ್ಯಾವಳಿಗಳು ಬೇರೆ ಬಸ್ಸಿನ ಸಿಸಿಟಿವಿ ದೃಶ್ಯಗಳಾಗಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಸೆ.15ರಂದು ರಾಮಗೊಂಡನಹಳ್ಳಿ ಸರ್ಕಾರಿ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಶಾಲೆ ಮುಗಿಸಿ ಮನೆಗೆ ತೆರಳಲು ಬಿಎಂಟಿಸಿ ಬಸ್‌ ಹತ್ತಿದ್ದ. ತೂಬರಹಳ್ಳಿಗೆ ಹೋಗಲು ಟಿಕೆಟ್​ ಪಡೆಯಲು ತಲಾ 10ರೂ. ನಂತೆ ಇಬ್ಬರು ವಿದ್ಯಾರ್ಥಿಗಳು ಕಂಡಕ್ಟರ್​ಗೆ ದುಡ್ಡು ನೀಡಿದ್ದರು. ಆದರೆ ಕಂಡಕ್ಟರ್ ಒಬ್ಬರಿಗೆ ಮಾತ್ರ ಟಿಕೆಟ್ ನೀಡಿದ್ದಾರೆ ಎನ್ನಲಾಗಿದೆ. ಮತ್ತೊಬ್ಬ ವಿದ್ಯಾರ್ಥಿ ಟಿಕೆಟ್ ಕೇಳಿದಾಗ ಕಂಡಕ್ಟರ್ ಮತ್ತೆ ಹಣ ಕೊಡುವಂತೆ ಕೇಳಿದ್ದಾರೆ. ಆಗ ವಿದ್ಯಾರ್ಥಿ ಹಣ ನೀಡಿರುವಾಗಿ ಹೇಳಿದಾಗ ವಾದ ಆಗಿ ಕಂಡಕ್ಟರ್, ವಿದ್ಯಾರ್ಥಿ ಮುಖಕ್ಕೆ ಕಪಾಳಮೋಕ್ಷ ಮಾಡಿದ್ದರು.

ಇನ್ನು ಘಟನೆ ಸಂಬಂಧ ವೈಟ್‌ಫೀಲ್ಡ್ ರೈಸಿಂಗ್ ಎಂಬ ಸಿವಿಕ್ ಗ್ರೂಪ್ ಈ ವಿಚಾರವನ್ನು ಎಕ್ಸ್ (ಟ್ವಿಟರ್)ನಲ್ಲಿ ಹಂಚಿಕೊಂಡಿತ್ತು. ವಿಚಾರ ತಿಳಿಯುತ್ತಿದ್ದಂತೆ BMTC ಸೆಪ್ಟೆಂಬರ್ 16 ರಂದು ಬಸ್‌ನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿತು. ಮತ್ತು ಕಂಡಕ್ಟರ್ ನಿರಪರಾಧಿ ಎಂದು ಹೇಳಿತ್ತು. ವಿದ್ಯಾರ್ಥಿಗಳು ಮೂಲ ಟಿಕೆಟ್ ಕಳೆದುಕೊಂಡಿರುವ ಸಾಧ್ಯತೆ ಇದೆ ಎಂದು ಈಗ ತಿಳಿದುಬಂದಿದೆ.

ಇದನ್ನೂ ಓದಿ: ಬೆಂಗಳೂರು: ರಾತ್ರಿ ಪ್ರಯಾಣಿಸುವವರಿಗೆ ಸಿಹಿಸುದ್ದಿ ನೀಡಿದ ಬಿಎಂಟಿಸಿ; ಏನು ಗೊತ್ತಾ?

ಮಂಗಳವಾರ, ವಿದ್ಯಾರ್ಥಿ, ಆತನ ತಾಯಿ ಮತ್ತು ಮೂವರು ಸ್ನೇಹಿತರು ಬಿಎಂಟಿಸಿ ಕೇಂದ್ರ ಕಚೇರಿಗೆ ಭೇಟಿ ನೀಡಿದ್ದು, ಹಿರಿಯ ಅಧಿಕಾರಿಗಳು ಕಚೇರಿಗೆ ಬಂದವರಿಗೆ ಸಿಸಿಟಿವಿ ದೃಶ್ಯಾವಳಿ ಮತ್ತು ಬಸ್ ಕಂಡಕ್ಟರ್ ಅನ್ನು ತೋರಿಸಿ ಘಟನೆಯ ಕುರಿತು ಮರು ತನಿಖೆ ನಡೆಸಿದರು. ಈ ವೇಳೆ ವಿದ್ಯಾರ್ಥಿ ಇದು ಬೇರೆ ಕಂಡಕ್ಟರ್, ಸಿಸಿಟಿವಿ ದೃಶ್ಯಗಳು ಸಹ ಬೇರೆ ಬಸ್ಸಿನವು ಎಂದು ತಿಳಿಸಿದ್ದಾರೆ. ಹೀಗಾಗಿ ಮಕ್ಕಳು ಮೂಲ ಟಿಕೆಟ್ ಕಳೆದುಕೊಂಡಿರುವ ಸಾಧ್ಯತೆ ಇದೆ ಎಂದು ಈಗ ತಿಳಿದುಬಂದಿದೆ.

ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ವೇಲೆ ಬಿಎಂಟಿಸಿ ಗುರುತಿಸಿದ್ದ ಬಸ್ ಮತ್ತು ಕಂಡಕ್ಟರ್ ತಪ್ಪಾಗಿದೆ ಎಂದು ಸ್ಪಷ್ಟವಾಗಿ ತಿಳಿದು ಬಂದಿದೆ. ಹೀಗಾಗಿ ತನ್ನದೇ ಆದ ನೀತಿ ಸಂಹಿತೆಯ ಪ್ರಕಾರ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ನಾವು BMTC ಯನ್ನು ಒತ್ತಾಯಿಸುತ್ತೇವೆ ಎಂದು ವೈಟ್‌ಫೀಲ್ಡ್ ರೈಸಿಂಗ್ ಹೇಳಿದೆ. “

ನಾವು ಮಕ್ಕಳನ್ನು ಅನುಮಾನಿಸುವುದಿಲ್ಲ. ಸೆ.15ರ ಮಧ್ಯಾಹ್ನ 3.55ರಿಂದ 4.25ರವರೆಗೆ ಆ ಮಾರ್ಗದಲ್ಲಿ ಸಂಚರಿಸಿದ ಎಲ್ಲ ಬಸ್‌ಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಎಂಟಿಸಿ ಪರಿಶೀಲಿಸುತ್ತಿದೆ. “ಆದರೆ ಇದು ಕಷ್ಟಕರವಾದ ಕೆಲಸ ಮತ್ತು ನಮಗೆ ಇನ್ನೊಂದೆರಡು ದಿನದ ಅವಶ್ಯಕತೆ ಇದೆ. ಕಂಡಕ್ಟರ್​ ತಪ್ಪಿತಸ್ಥರೆಂದು ಕಂಡು ಬಂದರೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಬಿಎಂಟಿಸಿಯ ಉಪ ಮುಖ್ಯ ಸಂಚಾರ ವ್ಯವಸ್ಥಾಪಕ ಜಿ ಟಿ ಪ್ರಭಾಕರ ರೆಡ್ಡಿ ಅವರು ಭರವಸೆ ನೀಡಿದರು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?