AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Crime: ಬಂಡವಾಳ ಇಲ್ಲದೆ ಹಣ್ಣಿನ ವ್ಯಾಪಾರ ಮಾಡಿ ಹಣ ಸಂಪಾದನೆ ಮಾಡಿದ ವ್ಯಕ್ತಿಯನ್ನು ಅರೆಸ್ಟ್ ಮಾಡಿದ ಪೊಲೀಸ್

ದುಡ್ಡಿಲ್ಲದೆ ಹಣ್ಣಿನ ವ್ಯಾಪಾರ ಮಾಡಬೇಕೆಂದು ವ್ಯಾಪಾರಕ್ಕೆ ಇಳಿದಿದ್ದ ಖದೀಮ ಹಣ್ಣುಗಳನ್ನು ಕದ್ದು, ಮಾರಾಟಕ್ಕೆ ಹಣ್ಣಿಡಲು ಗಾಡಿಯನ್ನೂ ಕದ್ದಿದ್ದ. ಸದ್ಯ ಕಳ್ಳನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Bengaluru Crime: ಬಂಡವಾಳ ಇಲ್ಲದೆ ಹಣ್ಣಿನ ವ್ಯಾಪಾರ ಮಾಡಿ ಹಣ ಸಂಪಾದನೆ ಮಾಡಿದ ವ್ಯಕ್ತಿಯನ್ನು ಅರೆಸ್ಟ್ ಮಾಡಿದ ಪೊಲೀಸ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 18, 2022 | 12:24 PM

Share

ಬೆಂಗಳೂರು: ಆಟೋ ಮತ್ತು ಹಣ್ಣುಗಳನ್ನು ಕದಿಯುತ್ತಿದ್ದ ಡಿಜೆ ಹಳ್ಳಿ ನಿವಾಸಿಯಾದ ಮೊಹಮ್ಮದ್ ಅಝರ್​ನನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ. ದುಡ್ಡಿಲ್ಲದೆ ಹಣ್ಣಿನ ವ್ಯಾಪಾರ ಮಾಡಬೇಕೆಂದು ವ್ಯಾಪಾರಕ್ಕೆ ಇಳಿದಿದ್ದ ಖದೀಮ ಹಣ್ಣುಗಳನ್ನು ಕದ್ದು, ಮಾರಾಟಕ್ಕೆ ಹಣ್ಣಿಡಲು ಗಾಡಿಯನ್ನೂ ಕದ್ದಿದ್ದ. ಸದ್ಯ ಪೊಲೀಸರು ಕಳ್ಳನನ್ನು ಬಂಧಿಸಿದ್ದಾರೆ. ಆರೋಪಿ ಅಝರ್ ಮೊದಲಿಗೆ ರಾಮಮೂರ್ತಿನಗರದಲ್ಲಿ ಮಾನಪ್ಪ ಎಂಬುವವರ ಆಪೆ ಆಟೋ ಕದ್ದು ಬಳಿಕ ಮೊಹಮ್ಮದ್ ನೌಷಾದ್ ಎಂಬುವವರ ತಳ್ಳುವ ಗಾಡಿಯಲ್ಲಿದ್ದ 5 ಬಾಕ್ಸ್ ಸೇಬು ಮೂರು ಚೀಲ‌ ಮೂಸಂಬಿಯನ್ನ ಕದ್ದು ಎಸ್ಕೇಪ್ ಆಗಿದ್ದ. ನಂತರ ಮಾನಪ್ಪನವರ ಕದ್ದ ಆಟೋದಲ್ಲಿಯೇ ಸೇಬುಗಳನ್ನ ಇಟ್ಟು ವ್ಯಾಪಾರ ಶುರು ಮಾಡಿ ಹಣ ಸಂಪಾದಿಸಿದ್ದ. ಇಷ್ಟೆಲ್ಲ ಆದ ಮೇಲೆ ಆಟೋವನ್ನ ಅಲ್ಲಿಯೇ ಬಿಟ್ಟು ಹಣ್ಣು ಮಾರಿದ ಹಣದಿಂದ ಎಸ್ಕೇಪ್ ಆಗಿದ್ದ. ದೂರು ದಾಖಲಾಗುತ್ತಿದ್ದಂತೆ ತನಿಖೆ ನಡೆಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ವಿಆರ್​ಎಲ್ ಹೆಸರಿನಲ್ಲಿ ನಕಲಿ ವೆಬ್ ಸೈಟ್ ತೆರೆದು ವಂಚನೆ

ಬೆಂಗಳೂರು: ಪ್ರತಿಷ್ಠಿತ ಕಂಪನಿಯ ಹೆಸರಿನಲ್ಲಿ ನಕಲಿ ವೆಬ್ ಸೈಟ್ ತೆರೆದು ವಂಚನೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರಾಮರಾಜು ಮತ್ತು ದಿನೇಶ್ ಬಂಧಿತ ಅರೋಪಿಗಳು. ವಿಆರ್​ಎಲ್ ಪ್ಯಾಕರ್ಸ್ ಅಂಡ್ ಮೂವರ್ಸ್ ಹೆಸರಿನಲ್ಲಿ ವೆಬ್ ಸೈಟ್ ತೆರೆದು ತಮ್ಮದೇ ಫೋನ್ ನಂಬರ್ ಕೊಟ್ಟು ವಂಚನೆ ಮಾಡುತ್ತಿದ್ದ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: Bidar Earthquake: ಪ್ರತಿದಿನವೂ ಭೂಮಿಯೊಳಗಿಂದ ಕೇಳಿಬರುತ್ತಿದೆ ಶಬ್ದ, ಜನರಲ್ಲಿ ಮನೆಮಾಡಿದ ಆತಂಕ

ತಡರಾತ್ರಿ ವ್ಯಕ್ತಿಗೆ ಚಾಕು ಇರಿತ

ಬೆಂಗಳೂರು: ಈಜಿಪುರದ ಚಾರ್ವಿ ಚರ್ಚ್​ ಬಳಿ ಯೋಗೇಶ್​(30) ಎಂಬಾತನಿಗೆ ಚಾಕು ಇರಿಯಲಾಗಿದೆ. ಕುಡಿದ ಮತ್ತಿನಲ್ಲಿ ಮೃತ ಯೋಗೇಶ್ ಗಲಾಟೆ ಮಾಡಿಕೊಂಡಿದ್ದರು. ಈ ವೇಳೆ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ. ಹಲ್ಲೆಗೊಳಗಾದ ಯೋಗೇಶ್ ನನ್ನ ಸೇಂಟ್ ಜೋಸೆಫ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ವಿವೇಕನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Published On - 12:22 pm, Tue, 18 October 22

Follow Us
Web contact
Web contact

TV9 Kannada

Read More
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?