AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತಾಂತರ ನಿಷೇಧ ಕಾಯ್ದೆಯಡಿ ಅರೆಸ್ಟ್ ಆದ ಮೊದಲ ಆರೋಪಿ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಲು ಯಶವಂತಪುರ ಪೊಲೀಸರ ಸಿದ್ಧತೆ

ಮತಾಂತರ ನಿಷೇಧ ಕಾಯ್ದೆ ಜಾರಿ ಬಳಿಕ ಪೊಲೀಸರು ಮೊದಲ ಆರೋಪಿಯನ್ನು ಅರೆಸ್ಟ್ ಮಾಡಿದ್ದು ಈ ಸಂಬಂಧ ಚಾರ್ಜ್ ಶೀಟ್ ಸಲ್ಲಿಸಲು ತಯಾರಿ ನಡೆಸಿದ್ದಾರೆ.

ಮತಾಂತರ ನಿಷೇಧ ಕಾಯ್ದೆಯಡಿ ಅರೆಸ್ಟ್ ಆದ ಮೊದಲ ಆರೋಪಿ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಲು ಯಶವಂತಪುರ ಪೊಲೀಸರ ಸಿದ್ಧತೆ
ಸೈಯದ್ ಮೊಹಿನ್
TV9 Web
| Edited By: |

Updated on: Nov 17, 2022 | 12:28 PM

Share

ಬೆಂಗಳೂರು: ಬಲವಂತದ ಮತಾಂತರ ಗಂಭೀರ ವಿಷಯ. ಬಲವಂತದ ಮತಾಂತರ ನಿಲ್ಲದೆ ಹೋದರೆ ದೇಶಕ್ಕೆ ಭಾರಿ ಅಪಾಯದ ದಿನಗಳು ಎದುರಾಗಲಿದೆ ಅಂತ ಸುಪ್ರೀಂಕೋರ್ಟ್ ಆತಂಕ ವ್ಯಕ್ತಪಡಿಸಿದೆ. ಇದ್ರ ಬೆನ್ನಲ್ಲೇ ರಾಜ್ಯದಲ್ಲಿ ಮತಾಂತರ ಹೆಚ್ಚು ಸದ್ದು ಮಾಡ್ತಿದೆ. ಮತಾಂತರ ನಿಷೇಧ ಕಾಯ್ದೆ(Anti Conversion Bill) ಜಾರಿ ಬಳಿಕ ಪೊಲೀಸರು(Yeshwanthpur police) ಮೊದಲ ಆರೋಪಿಯನ್ನು ಅರೆಸ್ಟ್ ಮಾಡಿದ್ದು ಈ ಸಂಬಂಧ ಚಾರ್ಜ್ ಶೀಟ್ ಸಲ್ಲಿಸಲು ತಯಾರಿ ನಡೆಸಿದ್ದಾರೆ.

ಯಶವಂತಪುರದಲ್ಲಿ ಮತಾಂತರ ಮಾಡಿದ ಆರೋಪದಲ್ಲಿ ಪೊಲೀಸರು ಯುವಕನನ್ನು ಅರೆಸ್ಟ್ ಮಾಡಿದ್ದರು. ಇದು ಮತಾಂತರ ನಿಷೇಧ ಕಾಯ್ದೆ ಜಾರಿ ಬಳಿಕ ಅರೆಸ್ಟ್ ಆದ ಮೊದಲ ಪ್ರಕರಣ. ಆದ್ರೆ ಆರೋಪಿಯನ್ನು ಅರೆಸ್ಟ್ ಮಾಡಿ 15 ದಿನಗಳ ಬಳಿಕ ಪೊಲೀಸರು ಆರೋಪಿಯನ್ನು ಬಿಟ್ಟು ಕಳಿಸಿದ್ದಾರೆ. ಸೈಯದ್ ಮೊಹಿನ್(24) ಎಂಬ ಆರೋಪಿ ಯುವತಿಯನ್ನು ಬಲವಂತವಾಗಿ ಮತಾಂತರ ಮಾಡಲು ಯತ್ನಿಸಿದ್ದ. ಈ ಸಂಗತಿ ತಿಳಿಯುತ್ತಿದ್ದಂತೆ ಯುವತಿಯ ಪೋಷಕರು ತಮ್ಮ ಮಗಳನ್ನು ಕರೆದುಕೊಂಡು ಊರು ಬಿಟ್ಟಿದ್ದರು. ಉತ್ತರ ಪ್ರದೇಶಕ್ಕೆ ಹೋಗಿ ತಮ್ಮ ಕುಟುಂಬ ಕಟ್ಟಿಕೊಂಡಿದ್ದರು. ಮತ್ತೊಂದೆಡೆ ಈ ಪ್ರಕರಣ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿ ಬಳಿಕ 15 ದಿನಗಳ ನಂತರ ಬಿಡುಗಡೆ ಮಾಡಿದ್ದಾರೆ.

ಸದ್ಯ ಪ್ರಕರಣ ಸಂಬಂಧ ಯಶವಂತಪುರ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಮತಾಂತರದಲ್ಲಿ ಯುವಕನ ಹೊರತು ಬೇರೆಯವರ ಪಾತ್ರ ಕಂಡು ಬಂದಿಲ್ಲ. ಈ ನಡುವೆ ತನಿಖೆ ನಡೆಸಿ 24ನೇ ಎಸಿಎಂಎಂ ಕೋರ್ಟ್​ಗೆ ಚಾರ್ಜ್ ಶೀಟ್ ಸಲ್ಲಿಸಲು ಪೊಲೀಸರು ತಯಾರಿ ನಡೆಸಿದ್ದಾರೆ. ಪ್ರಕರಣ ಸಂಬಂಧ ಒಂದು ತಿಂಗಳಲ್ಲಿ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಮತ್ತೆ ಮುನ್ನೆಲೆಗೆ ಬಂದ ಮತಾಂತರ ವಿವಾದ; ಮತಾಂತರವಾಗುವಂತೆ ಪತ್ನಿಯಿಂದ ಪತಿಗೆ ಒತ್ತಡ

ಘಟನೆ ವಿವರ

ಪ್ರೀತಿ ಹೆಸರಲ್ಲಿ 19 ವರ್ಷದ ಯುವತಿಯನ್ನ ಮದುವೆಯಾಗಲು ಮುಂದಾಗಿದ್ದ ಸೈಯದ್ ಮೊಯಿನ್, ಮದುವೆಯಾಗಲು ಮತಾಂತರ ಆಗಬೇಕು ಎಂದು ಯುವತಿಯನ್ನ ಮತಾಂತರ ಮಾಡಿದ್ದ. ಮದುವೆ ಮಾಡಿಕೊಳ್ಳಲೆಂದೆ ಯುವತಿ ಅಕ್ಟೋಬರ್ 5 ರಂದು ಮನೆಯಿಂದ ಕಾಣೆಯಾಗಿದ್ದಳು. ಮಗಳು ಕಾಣೆಯಾದ ಬಗ್ಗೆ ಮರುದಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪೋಷಕರು ಮಿಸ್ಸಿಂಗ್ ಕೇಸ್ ದಾಖಲಿಸಿದ್ದರು. ಬಳಿಕ ಯುವತಿ ಪೋಷಕರು ತಮ್ಮ ಮಗಳಿಗೆ ಪೇನುಕೊಂಡದಲ್ಲಿ ಮತಾಂತರ ಮಾಡಿದ್ದಾರೆ ಎಂದು ದೂರು ನೀಡಿದರು. ಕರ್ನಾಟಕ ಮತಾಂತರ ನಿಷೇಧ ಕಾಯ್ದೆಯಡಿ ಪೊಲೀಸರು ಆರೋಪಿ ಸೈಯದ್​ನನ್ನು ಬಂಧಿಸಿ ಜೈಲಿಗಟ್ಟಿದ್ದರು.

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್