AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾಸ್​ ಗೀಸರ್​ ಸೋರಿಕೆ: ಒಟ್ಟಿಗೆ ಸ್ನಾನಕ್ಕೆ ಹೋಗಿದ್ದ ಯುವಕ-ಯುವತಿ ಬಾತ್​ರೂಮ್​ನಲ್ಲೇ ಉಸಿರುಗಟ್ಟಿ ಸಾವು

ಇನ್ನೇನು ಗೃಹಸ್ಥಾಶ್ರಮ ಕಾಲಿಡಲು ತಯಾರಿಯಲ್ಲಿ ಜೋಡಿ ಬಾತ್​ರೂಮ್​ನಲ್ಲಿ ದುರಂತ ಅಂತ್ಯಕಂಡಿದೆ. ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಗ್ಯಾಸ್​ ಗೀಸರ್​ ಸೋರಿಕೆ: ಒಟ್ಟಿಗೆ ಸ್ನಾನಕ್ಕೆ ಹೋಗಿದ್ದ ಯುವಕ-ಯುವತಿ ಬಾತ್​ರೂಮ್​ನಲ್ಲೇ ಉಸಿರುಗಟ್ಟಿ ಸಾವು
ಮೃತಪಟ್ಟ ಜೋಡಿ
ರಮೇಶ್ ಬಿ. ಜವಳಗೇರಾ
|

Updated on: Jun 12, 2023 | 11:11 AM

Share

ಮುಖ್ಯಾಂಶಗಳು

  • ಗ್ಯಾಸ್ ಗೀಸರ್​​ನಿಂದ ವಿಷಾನಿಲ ಸೋರಿಕೆಯಾಗಿ ಇಬ್ಬರು ಸಾವು
  • ಬೆಂಗಳೂರಿನ ಚಿಕ್ಕಜಾಲದ ತರಬನಹಳ್ಳಿಯಲ್ಲಿ ನಡೆದಿರುವ ಘಟನೆ
  • ಸ್ನಾನ ಮಾಡುತ್ತಲೇ ಪ್ರಜ್ಞೆ ತಪ್ಪಿ ಕುಸಿದು ಬಿದ್ದು ಮೃತಪಟ್ಟ ಜೋಡಿ

ಬೆಂಗಳೂರು: ಸ್ನಾನಕ್ಕೆಂದು ಒಟ್ಟಿಗೆ ಹೋಗಿದ್ದಾಗ ಬಾತ್​ರೂಮ್​ನಲ್ಲಿ ಗ್ಯಾಸ್​ ಗೀಸರ್(gas geyser)​ ಸೋರಿಕೆಯಾಗಿ ಯುವಕ-ಯುವತಿ ಉಸಿರುಗಟ್ಟಿ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಚಿಕ್ಕಜಾಲದ ತರಬನಹಳ್ಳಿಯಲ್ಲಿ ನಡೆದಿದೆ. ಗುಂಡ್ಲುಪೇಟೆ ಮೂಲದ ಚಂದ್ರಶೇಖರ್ ಹಾಗೂ ಗೋಕಾಕ್​​ನ ಸುಧಾರಾಣಿ ಮೃತ ದುರ್ವೈವಿಗಳು. ಇನ್ನೇನು ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಈ ಜೋಡಿ ದುರಂತ ಅಂತ್ಯ ಕಂಡಿದೆ. ಜೂನ್ 10ರಂದು ಈ ದುರ್ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ತರಬನಹಳ್ಳಿಯಲ್ಲಿ ವಾಸವಿದ್ದ ಚಂದ್ರಶೇಖರ್ ಬಾಡಿಗೆ ಮನೆಗೆ ಜೂನ್ 10ರಂದು ಸಂಜೆ ಸುಧಾರಾಣಿ ಆಗಮಿಸಿದ್ದಳು. ರಾತ್ರಿ ಸ್ನಾನಕ್ಕೆಂದು ಗ್ಯಾಸ್​ ಗೀಸರ್​ ಆನ್ ಮಾಡಿ ಬಾತ್​ರೂಮ್​ಗೆ ಹೋಗಿದ್ದಾರೆ. ದುರದೃಷ್ಟವಶಾತ್ ಆ ವೇಳೆ ಗ್ಯಾಸ್​ ಗೀಸರ್​ನಿಂದ ವಿಷಾನಿಲ ಸೋರಿಕೆಯಾಗಿದೆ. ಇದರಿಂದ ಸ್ನಾನ ಮಾಡುತ್ತಿರುವಾಗಲೇ ಉಸಿರುಗಟ್ಟಿ ಬಾತ್​ರೂಮ್​ನ್ಲಲೇ ಪ್ರಜ್ಞೆ ತಪ್ಪಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಬಳಿಕ ಮನೆಯಿಂದ ಹೊರಗೆ ಬಾರದೆ ಇದ್ದಾಗ ಬೆಳಗ್ಗೆ ಮನೆ ಮಾಲೀಕ ಅನುಮಾನಗೊಂಡು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಮನೆ ಮಾಲೀಕ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮೃತದೇಹಗಳನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿದ್ದು, ಈ ಬಗ್ಗೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಬ್ಬರೂ ನಂದಿಹಿಲ್ಸ್ ಬಳಿಯ ಗಾಲ್ಪ್ ಹೋಟೆಲ್ ನಲ್ಲಿ ಒಟ್ಟಿಗೆ ಕೆಲಸ ಮಾಡಿಕೊಂಡಿದ್ದರು. ಅಲ್ಲದೇ ಇಬ್ಬರು ಮದುವೆಯಾಗಲು ತಯಾರಿಯಾಗಿದ್ದರು. ಆದ್ರೆ, ಹೊಸ ಜೀವನ ಆರಂಭಿಸಬೇಕೆನ್ನುವಷ್ಟರಲ್ಲೇ ವಿಧಿ ಬಿಟ್ಟಿಲ್ಲ. ಮದುವೆಗೆ ಮುಂಚೆಯೇ ಜೋಡಿ ಮಸಣ ಸೇರಿದೆ.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ