Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಯುವಕ ಸಾವು; ಕೆಪಿ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲು

ಜ.8ರಂದು ಕುಡಿದ ಮತ್ತಿನಲ್ಲಿ ಬಿದ್ದು ಸತೀಶ್ ಕೈಗೆ ಗಾಜು ತಗುಲಿ ಗಾಯವಾಗಿದ್ದು, ಮಾಗಡಿ ರಸ್ತೆಯ ದಾಸರಹಳ್ಳಿಯ ಮಧು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಯುವಕ ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಯುವಕ ಸಾವು; ಕೆಪಿ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on:Jan 11, 2023 | 7:04 AM

ಬೆಂಗಳೂರು: ಜ.8 ರಂದು ಶರತ್​(24) ಎಂಬಾತನು ಕುಡಿದು ಬಿದ್ದಾಗ ಗಾಜು ತಗುಲಿ ಕೈಗೆ ಗಾಯವಾಗಿದೆ. ತೀವ್ರ ರಕ್ತ ಸುರಿಯುತ್ತಿದ್ದರಿಂದ ದಾಸರಹಳ್ಳಿಯ ಮಧು ಆಸ್ಪತ್ರೆಗೆ ಸೇರಿಸಿದ್ದು, ಸರ್ಜರಿ ಮಾಡಲಾಗಿತ್ತು. ಚೆನ್ನಾಗಿ ಇದ್ದ ಶರತ್​ ನಿನ್ನೆ(ಜ.10) ಸಾವನ್ನಪ್ಪಿದ್ದಾನೆ. ವೈದ್ಯರ ನಿರ್ಲಕ್ಷದಿಂದ ಯುವಕ ಬಲಿಯಾಗಿದ್ದಾನೆ ಎಂದು ಮೃತ ಯುವಕನ ಸಂಬಂಧಿಕರು ಆರೋಪಿಸಿ ಕೆಪಿ ಅಗ್ರಹಾರ ಠಾಣೆಗೆ ದೂರು ನೀಡಿದ್ದಾರೆ.

ಕಳೆದ ಭಾನುವಾರ(ಜ.8) ದಂದು ಕುಡಿದು ನೆಲಕ್ಕೆ ಬಿದ್ದಿದ್ದ ಸತೀಶ್ ಕೈಗೆ ಗಾಜು ಚುಚ್ಚಿ ನರ ಕಟ್ ಆಗಿತ್ತು. ರಕ್ತಸ್ರಾವ ಆಗಿ ಹೆಚ್ಚಿನ ರಕ್ತ ಹೋಗಿತ್ತು. ಹೀಗಾಗಿ ಕುಟುಂಬಸ್ಥರು ಸತೀಶ್​ನನ್ನು ಭಾನುವಾರ ರಾತ್ರಿ ಮಾಗಡಿ ರಸ್ತೆ ದಾಸರಹಳ್ಳಿಯ ಮಧು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ವೈದ್ಯರು ಸರ್ಜರಿ ಮಾಡಬೇಕು ಎಂದಿದ್ದು ಸೋಮವಾರ(ಜ.9) ಸರ್ಜರಿ ಕೂಡ ಮಾಡಿದ್ದಾರೆ. ಸತೀಶ್​ ಸರ್ಜರಿಯಾದ ಬಳಿಕ ಕುಟುಂಬಸ್ಥರೊಂದಿಗೆ ಚೆನ್ನಾಗಿ ಮಾತನಾಡಿದ್ದು, ಇದ್ದಕ್ಕಿದ್ದಂತೆ ನಿನ್ನೆ(ಜ.10) ಮಧ್ಯಾಹ್ನ ಆಸ್ಪತ್ರೆಯಲ್ಲಿ ಸತೀಶ್ ಸಾವನ್ನಪ್ಪಿದ್ದಾನೆ.

ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಅವಘಡ; 15ಕುರಿಗಳು ಬೆಂಕಿಗಾಹುತಿ

ಬೆಂಗಳೂರು: ಬ್ಯಾಟರಾಯನಪುರದ ಶಾಮಣ್ಣ ಗಾರ್ಡನ್ ಬಳಿ ಇಂದು(ಜ.11) ಬೆಳಗಿನ ಜಾವ 4.50 ರ ಸುಮಾರಿಗೆ ಶಾರ್ಟ್​ ಸರ್ಕ್ಯೂಟ್​ನಿಂದ ಕುರಿಗಳಿರುವ ಶೆಡ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಅಗ್ನಿಶಾಮಕ ಸಿಬ್ಬಂದಿಗಳಿಗೆ ಕರೆ ಮಾಡಿದ್ದಾರೆ. ಅಷ್ಟೋತ್ತಿಗಾಗಲೇ ಬೆಂಕಿ ಆವರಿಸಿದ್ದು, ಬೆಂಕಿ ನಂದಿಸುವಷ್ಟರಲ್ಲಿ 15 ಕುರಿಗಳು ಸಾವನ್ನಪ್ಪಿದ್ದಾವೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ ಮಾಡಿ

Published On - 6:52 am, Wed, 11 January 23

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್