AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಿ ಗಾಂಜಾ ಮಾರಾಟಕ್ಕೆ ಇಳಿದಿದ್ದ ಯುವಕ ಮೊದಲ ಪ್ರಯತ್ನದಲ್ಲೇ ಪೊಲೀಸರಿಗೆ ಸಿಕ್ಕಿ ಬಿದ್ದ!

ಹೋಟೆಲ್ ಮ್ಯಾನೇಜ್ಮೆಂಟ್ ಮಾಡಿಕೊಂಡಿದ್ದ ಸಚಿನ್, ಮಲೇಷ್ಯಾದಲ್ಲಿ ಇಂಟರ್ನ್ ಶಿಫ್ ಮುಗಿಸಿ ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ. ಆದ್ರೆ ಆಕ್ಸಿಡೆಂಟ್ನಲ್ಲಿ ಆರೋಪಿ ಸಚಿನ್ ಕಾಲು ಮುರಿದಿತ್ತು. ಆಕ್ಸಿಡೆಂಟ್ ಆದ ಬಳಿಕ ಇನ್ಶೂರೆನ್ಸ್ನಿಂದ ಒಂದಿಷ್ಟು ಹಣ ಬಂದಿತ್ತು.

ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಿ ಗಾಂಜಾ ಮಾರಾಟಕ್ಕೆ ಇಳಿದಿದ್ದ ಯುವಕ ಮೊದಲ ಪ್ರಯತ್ನದಲ್ಲೇ ಪೊಲೀಸರಿಗೆ ಸಿಕ್ಕಿ ಬಿದ್ದ!
ಪೊಲೀಸರು ವಶ ಪಡಿಸಿಕೊಂಡ ಗಾಂಜಾ
Follow us
TV9 Web
| Updated By: ಆಯೇಷಾ ಬಾನು

Updated on:Sep 01, 2021 | 12:43 PM

ಬೆಂಗಳೂರು: ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ ವ್ಯಕ್ತಿ ತನ್ನ ಮೊದಲ ಪ್ರಯತ್ನದಲ್ಲೇ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ಸಚಿನ್ ಬಂಧಿತ ಆರೋಪಿ. ಹೋಟೆಲ್ ಮ್ಯಾನೇಜ್ಮೆಂಟ್ ಮಾಡಿಕೊಂಡಿದ್ದ ಸಚಿನ್, ಮಲೇಷ್ಯಾದಲ್ಲಿ ಇಂಟರ್ನ್ ಶಿಫ್ ಮುಗಿಸಿ ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ. ಆದ್ರೆ ಆಕ್ಸಿಡೆಂಟ್ನಲ್ಲಿ ಆರೋಪಿ ಸಚಿನ್ ಕಾಲು ಮುರಿದಿತ್ತು. ಆಕ್ಸಿಡೆಂಟ್ ಆದ ಬಳಿಕ ಇನ್ಶೂರೆನ್ಸ್ನಿಂದ ಒಂದಿಷ್ಟು ಹಣ ಬಂದಿತ್ತು. ಅದೇ ಹಣವನ್ನು ಗಾಂಜಾಗೆ ಇನ್ವೆಸ್ಟ್ ಮಾಡಿ ವಿಶಾಖಪಟ್ಟಣಂನಿಂದ ಭಾರಿ ಮೊತ್ತದ ಗಾಂಜಾ ತಂದಿದ್ದ.

ಆಟೋ ಚಾಲಕ ಆನಂದ್ ಎಂಬುವವರ ಜೊತೆ ಸೇರಿ ಬರೊಬ್ಬರಿ 101 ಕೆಜಿ ಗಾಂಜಾವನ್ನು ಆರೋಪಿ ಸಚಿನ್ ತರಿಸಿದ್ದ. ಬಳಿಕ ನಂದಿ ಬೆಟ್ಟ ರಸ್ತೆಯಲ್ಲಿ ತೆರಳುವಾಗ ಐದು ಕೆಜಿ ಗಾಂಜಾ ಸಮೇತ ಪೊಲೀಸ ಬಳಿ ಲಾಕ್ ಆಗಿದ್ದಾನೆ. ಸದ್ಯ ಹೆಚ್ಚಿನ ವಿಚಾರಣೆ ನಡೆಸಿದಾಗ ಉಳಿದ ಗಾಂಜಾ ಮೂಟೆಗಳ ಬಗ್ಗೆ ಮಾಹಿತಿ ನೀಡಿದ್ದಾನೆ. ದೇವನಹಳ್ಳಿ ಪೊಲೀಸರ ಕಾರ್ಯಾಚರಣೆಯಿಂದ ಆರೋಪಿ ಸಚಿನ್ನನ್ನು ಬಂಧಿಸಲಾಗಿದೆ.

ಕೆಲಸ ಮಾಡುತ್ತಿದ್ದ ಹೋಟೆಲ್‌ನಲ್ಲಿ ಸಿಬ್ಬಂದಿಯಿಂದ ಕಳ್ಳತನ ಇನ್ನು ಮತ್ತೊಂದು ಕಡೆ ಕೆಲಸ ಮಾಡುತ್ತಿದ್ದ ಹೋಟೆಲ್‌ನಲ್ಲಿ ಸಿಬ್ಬಂದಿಯಿಂದಲೇ ಕಳ್ಳತನ ನಡೆದಿದೆ. ರಾತ್ರೋರಾತ್ರಿ ಹೋಟೆಲ್‌ನಲ್ಲಿದ್ದ ಹಣ ಎಗರಿಸಿ ಕಳ್ಳರು ಪರಾರಿಯಾಗಿದ್ದಾರೆ. ಕಳ್ಳತನ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಆನೇಕಲ್ ತಾಲೂಕಿನ ಹೆಬ್ಬಗೋಡಿ ಸಮೀಪದ ಶ್ರೀನಿಧಿ ಉಪಹಾರ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದ ಅಣ್ಣಪ್ಪ ಎಂಬ ವ್ಯಕ್ತಿ ರಾತ್ರೋರಾತ್ರಿ ಹೋಟೆಲ್‌ನಲ್ಲಿದ್ದ ಹಣ ಎಗರಿಸಿ ಪರಾರಿಯಾಗಿದ್ದಾನೆ. ಈ ಹಿಂದೆ ಎರಡು ಮೊಬೈಲ್ಗಳನ್ನು ಕೂಡ ಈತ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಎಕ್ಸೆಲ್ ಬ್ಲೇಡ್ನಿಂದ ಮುಂಭಾಗದ ಬೀಗ ಮುರಿದು ಒಳನುಗ್ಗಿದ ಕಳ್ಳ ಹೋಟೆಲ್ನ ಮೊದಲನೆಯ ಮಹಡಿಯಲ್ಲಿ ಸಿಬ್ಬಂದಿ ಮಲಗಿದ್ದನ್ನು ಗಮನಿಸಿ ಕೊಠಡಿಗೆ ಬೀಗ ಹಾಕಿ ನಂತರ ಹೋಟೆಲೊಳಗೆ ಟೇಬಲ್ನಲಿದ್ದ ಹಣ ಲೂಟಿ ಮಾಡಿದ್ದಾನೆ. ಚಿಲ್ಲರೆ ಸೇರಿ ಒಂದು ವರೆ ಲಕ್ಷ ರೂ ಹಣ ಕಳ್ಳತನ ಮಾಡಿದ್ದಾನೆ. ಬೆಳಿಗ್ಗೆ ಹೋಟೆಲ್ ಸಿಬ್ಬಂದಿ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: ಮ್ಯಾಟ್ರಿಮೋನಿಯಲ್ಲಿ ಮದುವೆಯಾಗುವುದಾಗಿ ನಂಬಿಸಿ ವಂಚನೆ; ಬೆಂಗಳೂರಿನಲ್ಲಿ ಆರೋಪಿ ಸೆರೆ

Published On - 12:41 pm, Wed, 1 September 21

ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
ನಮ್ಮ ಆಚರಣೆ ನಮ್ಮ ಹಕ್ಕು, ಎಲ್ಲಿದ್ದರೂ ಹಿಂದೂಗಳೇ ಎಂದ ಪಾಕ್​ ಹಿಂದೂಗಳು
ನಮ್ಮ ಆಚರಣೆ ನಮ್ಮ ಹಕ್ಕು, ಎಲ್ಲಿದ್ದರೂ ಹಿಂದೂಗಳೇ ಎಂದ ಪಾಕ್​ ಹಿಂದೂಗಳು
ಕಾನೂನು ಪ್ರಕ್ರಿಯೆ ಮೂಲಕ ಜನಾರ್ಧನ ರೆಡ್ಡಿಗೆ ರಿಲೀಫ್: ಶ್ರೀರಾಮುಲು
ಕಾನೂನು ಪ್ರಕ್ರಿಯೆ ಮೂಲಕ ಜನಾರ್ಧನ ರೆಡ್ಡಿಗೆ ರಿಲೀಫ್: ಶ್ರೀರಾಮುಲು
ವಿಡಿಯೋ ಮಾಡೋದು ನಿಲ್ಲಿಸು; ಡ್ರಗ್ ಪಾರ್ಟಿ ವೇಳೆ ಪೊಲೀಸರಿಗೆ ಮಂಗ್ಲಿ ಆವಾಜ್
ವಿಡಿಯೋ ಮಾಡೋದು ನಿಲ್ಲಿಸು; ಡ್ರಗ್ ಪಾರ್ಟಿ ವೇಳೆ ಪೊಲೀಸರಿಗೆ ಮಂಗ್ಲಿ ಆವಾಜ್