AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಫೋಟೋಶೂಟ್​​ಗೆ ಹೋಗಬೇಡ ಎಂದಿದಕ್ಕೆ ಮನನೊಂದು ಯುವತಿ ಆತ್ಮಹತ್ಯೆ

ವರ್ಷಿಣಿ ನಿನ್ನೆ ಮಾಲ್​ಗೆ ಹೋಗಿ ಫೋಟೋಶೂಟ್​​ ಮಾಡಿಸಬೇಕು ಎಂದು ರೆಡಿಯಾಗಿದ್ದಳು. ಆದರೆ ಪೋಷಕರು ಮಾಲ್​ಗೆ ಹೋಗಬೇಡ ಎಂದು ಬುದ್ಧಿವಾದ ಹೇಳಿದ್ದಾರೆ. ಇಷ್ಟಕ್ಕೆ ನೊಂದ ವರ್ಷಿಣಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಫೋಟೋಶೂಟ್​​ಗೆ ಹೋಗಬೇಡ ಎಂದಿದಕ್ಕೆ ಮನನೊಂದು ಯುವತಿ ಆತ್ಮಹತ್ಯೆ
ವರ್ಷಿಣಿ
TV9 Web
| Updated By: ಆಯೇಷಾ ಬಾನು|

Updated on: Jan 01, 2024 | 1:46 PM

Share

ಬೆಂಗಳೂರು, ಜ.01: ಎಲ್ಲರೂ ನ್ಯೂ ಇಯರ್ (New Year 2024) ಸಂಭ್ರಮದಲ್ಲಿದ್ರು. ಹೊಸ ವರ್ಷವನ್ನ ಕುಡಿದು ಕುಪ್ಪಳಿಸಿ ಸ್ವಾಗತಿಸಿದ್ರು. ಆದರೆ ಇಲ್ಲೊಂದು ಯುವತಿ ಚಿಕ್ಕದೊಂದು ವಿಚಾರಕ್ಕೆ ಕೋಪಗೊಂಡು ನೇಣಿಗೆ ಶರಣಾಗಿದ್ದಾಳೆ. ನ್ಯೂ ಇಯರ್ ಸಂಭ್ರಮದ ಹೊತ್ತಲ್ಲೇ ಆತುರದ ನಿರ್ಧಾರಕ್ಕೆ ಪ್ರಾಣ ಬಿಟ್ಟಿದ್ದಾಳೆ (Death). ಫೋಟೋಶೂಟ್​​ಗೆ (PhotoShoot) ಹೋಗಬೇಡ ಎಂದು ಪೋಷಕರು ಬುದ್ಧಿ ಹೇಳಿದಕ್ಕೆ ನೊಂದ ವರ್ಷಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬೆಂಗಳೂರಿನ ಸುಧಾಮನಗರದ ಮನೆಯಲ್ಲಿ ಬಿಬಿಎ ಜೊತೆಗೆ ಫೋಟೋಗ್ರಫಿ ಸಹ ಓದುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಿನ್ನೆ ರಾತ್ರಿ ತಮ್ಮ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು 21ವರ್ಷದ ವರ್ಷಿಣಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸುಧಾಮನಗರದಲ್ಲಿ ಕುಟುಂಬದೊಂದಿಗೆ ವಾಸವಿದ್ದ ವರ್ಷಿಣಿ, ಜಯನಗರದ ಕಮ್ಯೂನಿಟಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. ಬಿಬಿಎ ಜೊತೆಗೆ ಫೋಟೋಗ್ರಫಿ ಸಹ ಓದುತ್ತಿದ್ದಳು. ವರ್ಷಿಣಿ ನಿನ್ನೆ ಮಾಲ್​ಗೆ ಹೋಗಿ ಫೋಟೋಶೂಟ್​​ ಮಾಡಿಸಬೇಕು ಎಂದು ರೆಡಿಯಾಗಿದ್ದಳು. ಆದರೆ ಪೋಷಕರು ಮಾಲ್​ಗೆ ಹೋಗಬೇಡ ಎಂದು ಬುದ್ಧಿವಾದ ಹೇಳಿದ್ದಾರೆ. ಇಷ್ಟಕ್ಕೆ ನೊಂದ ವರ್ಷಿಣಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಯುವತಿ ಮೃತದೇಹ ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ವಿಲ್ಸನ್ ಗಾರ್ಡನ್ ಪೊಲೀಸರು ಹೆಚ್ಚಿನ ತನಿಖೆ ನಡೆಸ್ತಿದ್ದಾರೆ.

ಇದನ್ನೂ ಓದಿ: ಡೆತ್ ನೋಟ್ ಬರೆದಿಟ್ಟು ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆ

ಹೊಸ ವರ್ಷದಂದೇ ಯುವಕನ ಕೊಲೆ

ಹೊಸ ವರ್ಷದ ಮೊದಲನೇ ದಿನವೇ ರಾಜಧಾನಿಯಲ್ಲಿ ನೆತ್ತರು ಹರಿದಿದೆ. ರಾತ್ರಿ 1 ಗಂಟೆಗೆ ದುಷ್ಕರ್ಮಿಗಳ ದಾಳಿಗೆ ಯುವಕ ಉಸಿರು ಚೆಲ್ಲಿದ್ದಾನೆ. ನ್ಯೂ ಇಯರ್ ಸಂಭ್ರಮದ ದಿನವೇ ಬೆಂಗಳೂರಿನ ಹನುಮಂತನಗರದ 80 ಅಡಿ ರಸ್ತೆಯಲ್ಲಿ ಯುವಕನ ಹತ್ಯೆಯಾಗಿದೆ. ಬನಶಂಕರಿ ನಿವಾಸಿ ವಿಜಯ್ ಎಂಬಾತನನ್ನ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿಕೊಂದಿದ್ದಾರೆ. ಆಟೋದಲ್ಲಿ ಬಂದು ಹತ್ಯೆಗೈದು ಶವ ರಸ್ತೆಬದಿ ಎಸೆದು ಆರೋಪಿಗಳು ಎಸ್ಕೇಪ್​ ಆಗಿದ್ದಾರೆ.​ ಹನುಮಂತನಗರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ