AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಯಾವುದೇ ರೀತಿಯ ತನಿಖೆ ಮಾಡ್ಬೇಡಿ: ಡೆತ್​ನೋಟ್​ ಬರೆದಿಟ್ಟು ಯುವತಿ ಆತ್ಮಹತ್ಯೆ

ಆಂಧ್ರ ಪ್ರದೇಶದ ಕಡಪ ಮೂಲದ ಯುವತಿಯೊಬ್ಬರು ಪಿಜಿಯ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ(ಅ.03) ಸಂಜೆ ಏಳು ಗಂಟೆಯಲ್ಲಿ ವೈಟ್​ಫೀಲ್ಡ್​(Whitefield)ನ ಪ್ರಶಾಂತ್ ಲೇಔಟ್​ನಲ್ಲಿ ನಡೆದಿದೆ. ಮೃತ ಯುವತಿ ಆತ್ಮಹತ್ಯೆ ಮಾಡಿಕೊಳ್ಳವ ಮುನ್ನ ಡೆತ್​ನೋಟ್​ ಬರೆದಿಟ್ಟಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು: ಯಾವುದೇ ರೀತಿಯ ತನಿಖೆ ಮಾಡ್ಬೇಡಿ: ಡೆತ್​ನೋಟ್​ ಬರೆದಿಟ್ಟು ಯುವತಿ ಆತ್ಮಹತ್ಯೆ
ಗೌತಮಿ, ಆತ್ಮಹತ್ಯೆ ಮಾಡಿಕೊಂಡ ಯುವತಿ
TV9 Web
| Edited By: |

Updated on:Oct 04, 2024 | 4:55 PM

Share

ಬೆಂಗಳೂರು, ಅ.04: ಡೆತ್​​ನೋಟ್ ಬರೆದಿಟ್ಟು ಪಿಜಿಯ ಐದನೇ ಮಹಡಿಯಿಂದ ಹಾರಿ ಆಂಧ್ರ ಪ್ರದೇಶದ ಕಡಪ ಮೂಲದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ(ಅ.03) ಸಂಜೆ ಏಳು ಗಂಟೆಯಲ್ಲಿ ವೈಟ್​ಫೀಲ್ಡ್​(Whitefield)ನ ಪ್ರಶಾಂತ್ ಲೇಔಟ್​ನಲ್ಲಿ ನಡೆದಿದೆ. ಗೌತಮಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ಬೆಂಗಳೂರಿನಲ್ಲಿ ನೆಲಸಿದ್ದ ಮೃತ ಯುವತಿ, ಟಿಸಿಎಸ್​ನಲ್ಲಿ ಕೆಲಸ ಮಾಡುತ್ತಿದ್ದರು.

ಡೆತ್​ನೋಟ್​ನಲ್ಲಿ ಏನಿದೆ?

ಇನ್ನು ಸಾಯುವ ಮುನ್ನ ಡೆತ್​ನೋಟ್​ ಬರೆದಿಟ್ಟಿರುವ ಯುವತಿ, ‘ನನ್ನ ಮೃತ ದೇಹವನ್ನು ಪಿಎಂ(ಪೋಸ್ಟ್​ ಮಾರ್ಟಂ) ಮಾಡಬೇಡಿ. ಯಾವುದೇ ರೀತಿಯ ತನಿಖೆ ಸಹ ನಡೆಸಬೇಡಿ. ನನ್ನ ಪೋಷಕರಿಗೆ‌ ನನ್ನ ಮೃತ ದೇಹ ನೀಡಿ ಎಂದು ಡೆತ್ ನೋಟ್​ನಲ್ಲಿ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಸೋದರತ್ತೆ ಬೆದರಿಕೆಗೆ ಹೆದರಿ ಅಳಿಯ ಆತ್ಮಹತ್ಯೆ! 17 ಗುಂಟೆ ಸೈಟ್ ವಿವಾದ, ಡೆತ್ ನೋಟ್​ನಲ್ಲಿತ್ತು ರಹಸ್ಯ

ಟಿಪ್ಪರ್ ಹರಿದು ಸ್ಕೂಟಿ ಸವಾರ ಸ್ಥಳದಲ್ಲಿಯೇ ಸಾವು

ಹಾವೇರಿ: ಟಿಪ್ಪರ್ ಹರಿದು ಸ್ಕೂಟಿ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದಲ್ಲಿ ನಡೆದಿದೆ. 60 ವರ್ಷದ ನಾಗರಾಜ್ ಮುದೋಳಮಠ  ಮೃತ ಸ್ಕೂಟಿ ಸವಾರ. ರಸ್ತೆ ಕ್ರಾಸ್ ಮಾಡುವಾಗ ಈ ದುರ್ಘಟನೆ ನಡೆದಿದ್ದು, ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ ದೇಹದ ಭಾಗವು ಛಿದ್ರವಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ಡಾ.ಗಿರೇಶ ಬೋಜಣ್ಣನವರ್ ಭೇಟಿ ನೀಡಿ ಪರಿಶೀಲನೆ ‌ನಡೆಸಿದ್ದಾರೆ. ಈ ಕುರಿತು ರಾಣೇಬೆನ್ನೂರು ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:51 pm, Fri, 4 October 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!