AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಯಾವುದೇ ರೀತಿಯ ತನಿಖೆ ಮಾಡ್ಬೇಡಿ: ಡೆತ್​ನೋಟ್​ ಬರೆದಿಟ್ಟು ಯುವತಿ ಆತ್ಮಹತ್ಯೆ

ಆಂಧ್ರ ಪ್ರದೇಶದ ಕಡಪ ಮೂಲದ ಯುವತಿಯೊಬ್ಬರು ಪಿಜಿಯ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ(ಅ.03) ಸಂಜೆ ಏಳು ಗಂಟೆಯಲ್ಲಿ ವೈಟ್​ಫೀಲ್ಡ್​(Whitefield)ನ ಪ್ರಶಾಂತ್ ಲೇಔಟ್​ನಲ್ಲಿ ನಡೆದಿದೆ. ಮೃತ ಯುವತಿ ಆತ್ಮಹತ್ಯೆ ಮಾಡಿಕೊಳ್ಳವ ಮುನ್ನ ಡೆತ್​ನೋಟ್​ ಬರೆದಿಟ್ಟಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು: ಯಾವುದೇ ರೀತಿಯ ತನಿಖೆ ಮಾಡ್ಬೇಡಿ: ಡೆತ್​ನೋಟ್​ ಬರೆದಿಟ್ಟು ಯುವತಿ ಆತ್ಮಹತ್ಯೆ
ಗೌತಮಿ, ಆತ್ಮಹತ್ಯೆ ಮಾಡಿಕೊಂಡ ಯುವತಿ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on:Oct 04, 2024 | 4:55 PM

Share

ಬೆಂಗಳೂರು, ಅ.04: ಡೆತ್​​ನೋಟ್ ಬರೆದಿಟ್ಟು ಪಿಜಿಯ ಐದನೇ ಮಹಡಿಯಿಂದ ಹಾರಿ ಆಂಧ್ರ ಪ್ರದೇಶದ ಕಡಪ ಮೂಲದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ(ಅ.03) ಸಂಜೆ ಏಳು ಗಂಟೆಯಲ್ಲಿ ವೈಟ್​ಫೀಲ್ಡ್​(Whitefield)ನ ಪ್ರಶಾಂತ್ ಲೇಔಟ್​ನಲ್ಲಿ ನಡೆದಿದೆ. ಗೌತಮಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ಬೆಂಗಳೂರಿನಲ್ಲಿ ನೆಲಸಿದ್ದ ಮೃತ ಯುವತಿ, ಟಿಸಿಎಸ್​ನಲ್ಲಿ ಕೆಲಸ ಮಾಡುತ್ತಿದ್ದರು.

ಡೆತ್​ನೋಟ್​ನಲ್ಲಿ ಏನಿದೆ?

ಇನ್ನು ಸಾಯುವ ಮುನ್ನ ಡೆತ್​ನೋಟ್​ ಬರೆದಿಟ್ಟಿರುವ ಯುವತಿ, ‘ನನ್ನ ಮೃತ ದೇಹವನ್ನು ಪಿಎಂ(ಪೋಸ್ಟ್​ ಮಾರ್ಟಂ) ಮಾಡಬೇಡಿ. ಯಾವುದೇ ರೀತಿಯ ತನಿಖೆ ಸಹ ನಡೆಸಬೇಡಿ. ನನ್ನ ಪೋಷಕರಿಗೆ‌ ನನ್ನ ಮೃತ ದೇಹ ನೀಡಿ ಎಂದು ಡೆತ್ ನೋಟ್​ನಲ್ಲಿ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಸೋದರತ್ತೆ ಬೆದರಿಕೆಗೆ ಹೆದರಿ ಅಳಿಯ ಆತ್ಮಹತ್ಯೆ! 17 ಗುಂಟೆ ಸೈಟ್ ವಿವಾದ, ಡೆತ್ ನೋಟ್​ನಲ್ಲಿತ್ತು ರಹಸ್ಯ

ಟಿಪ್ಪರ್ ಹರಿದು ಸ್ಕೂಟಿ ಸವಾರ ಸ್ಥಳದಲ್ಲಿಯೇ ಸಾವು

ಹಾವೇರಿ: ಟಿಪ್ಪರ್ ಹರಿದು ಸ್ಕೂಟಿ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದಲ್ಲಿ ನಡೆದಿದೆ. 60 ವರ್ಷದ ನಾಗರಾಜ್ ಮುದೋಳಮಠ  ಮೃತ ಸ್ಕೂಟಿ ಸವಾರ. ರಸ್ತೆ ಕ್ರಾಸ್ ಮಾಡುವಾಗ ಈ ದುರ್ಘಟನೆ ನಡೆದಿದ್ದು, ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ ದೇಹದ ಭಾಗವು ಛಿದ್ರವಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ಡಾ.ಗಿರೇಶ ಬೋಜಣ್ಣನವರ್ ಭೇಟಿ ನೀಡಿ ಪರಿಶೀಲನೆ ‌ನಡೆಸಿದ್ದಾರೆ. ಈ ಕುರಿತು ರಾಣೇಬೆನ್ನೂರು ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:51 pm, Fri, 4 October 24

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ