AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur Incident: ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ ವಾಪಸ್ ಆಗುತ್ತಿದ್ದ ಯುವತಿಗೆ ರ್ಯಾಪಿಡೋ ಬೈಕ್ ಚಾಲಕನಿಂದ ಲೈಂಗಿಕ ಕಿರುಕುಳ

ಮಣಿಪುರದಲ್ಲಿ ನಡೆದ ಮಹಿಳೆಯ ಬೆತ್ತಲೆ ಮೆರವಣಿಗೆ ಖಂಡಿಸಿ ಬೆಂಗಳೂರಿನ ಟೌನ್​ಹಾಲ್​ನಲ್ಲಿ ಪ್ರತಿಭಟನೆ ನಡೆಸಲಾಯಿತು. ಇದರಲ್ಲಿ ಭಾಗಿಯಾಗಿ ಮನೆಗೆ ವಾಪಸ್ ಆಗುತ್ತಿದ್ದಾಗ ರ್ಯಾಪಿಡೋ ಬೈಕ್ ಚಾಲಕ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಯುವತಿ ಟ್ವೀಟ್ ಮಾಡಿದ್ದಾಳೆ.

Manipur Incident: ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ ವಾಪಸ್ ಆಗುತ್ತಿದ್ದ ಯುವತಿಗೆ ರ್ಯಾಪಿಡೋ ಬೈಕ್ ಚಾಲಕನಿಂದ ಲೈಂಗಿಕ ಕಿರುಕುಳ
ಯುವತಿಗೆ ಮೆಸೆಜ್ ಮಾಡಿದ ರ್ಯಾಪಿಡೋ ಬೈಕ್ ಚಾಲಕ (ಎಡಚಿತ್ರ) ಮತ್ತು ಸಾಂದರ್ಭಿಕ ಚಿತ್ರ (ಬಲಚಿತ್ರ)
Follow us
Shivaprasad
| Updated By: Rakesh Nayak Manchi

Updated on: Jul 22, 2023 | 7:12 PM

ಬೆಂಗಳೂರು, ಜುಲೈ 22: ಮಣಿಪುರದಲ್ಲಿ (Manipur) ನಡೆದ ಮಹಿಳೆಯ ಬೆತ್ತಲೆ ಮೆರವಣಿಗೆ ಖಂಡಿಸಿ ನಗರದ ಟೌನ್​ಹಾಲ್​ನಲ್ಲಿ ನಡೆದ ಪ್ರತಿಘಟನೆಯಲ್ಲಿ ಭಾಗಿಯಾದ ಯುವತಿಯೊಬ್ಬಳಿಗೆ ರ್ಯಾಪಿಡೋ ಬೈಕ್ ಚಾಲಕ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಡ್ರಾಪ್ ನಂತರ ಲವ್ ಯು ಅಂತ ಮೆಸೆಜ್ ಮಾಡಿದ ಘಟನೆ ನಡೆದಿದೆ. ಈ ಬಗ್ಗೆ ನೊಂದ ಯುವತಿ ಟ್ವೀಟ್ ಮಾಡಿದ್ದು, ಪೊಲೀಸರು ಪರಿಶೀಲನೆಗೆ ಮುಂದಾಗಿದ್ದಾರೆ.

ಮಣಿಪುರ ಘಟನೆ ಖಂಡಿಸಿ ಟೌನ್​ಹಾಲ್​ ಮುಂಭಾಗ ನಡೆದ ಪ್ರತಿಭಟನೆ ನಂತರ ಮನೆಗೆ ವಾಪಸ್ ಆಗಲು ಯುವತಿಯೊಬ್ಬಳು ರ್ಯಾಪಿಡೊ ಆಟೋ ಬುಕ್ ಮಾಡಿದ್ದಾಳೆ. ಇದು ಕ್ಯಾನ್ಸಲ್ ಆದ ಹಿನ್ನೆಲೆ ರ್ಯಾಪಿಡೊ ಬೈಕ್ ಬುಕ್ ಮಾಡಿದ್ದಾಳೆ. ಆದರೆ ಚಾಲಕ ರ್ಯಾಪಿಡೋ ಬೈಕ್ ಬದಲು ಬೇರೆ ಬೈಕ್ ತಂದಿದ್ದಾನೆ. ಆದರೂ ಬೈಕ್ ಹತ್ತಿದ ಯುವತಿಗೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ಗ ಮಧ್ಯ ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ.

ಇದನ್ನೂ ಓದಿ: ಕಾರ್ಗಿಲ್ ಯುದ್ದದಲ್ಲಿ ಹೋರಾಡಿದ್ದೆ, ಆದರೆ ಮಣಿಪುರದಲ್ಲಿ ನನ್ನ ಪತ್ನಿಯನ್ನು ವಿವಸ್ತ್ರಗೊಳಿಸಿದಾಗ ಕಾಪಾಡಲು ನನ್ನಿಂದಾಗಲಿಲ್ಲ: ಕಣ್ಣೀರಿಟ್ಟ ಮಾಜಿ ಯೋಧ

ಅಷ್ಟೇ ಅಲ್ಲದೆ, ಡ್ರಾಪ್ ಮಾಡಿದ ನಂತರ ಬೈಕ್ ಚಾಲಕ ಯುವತಿಯ ಮೊಬೈಲ್​ಗೆ ಕರೆ ಮಾಡಿದ್ದಾನೆ. ನಂತರ ವಾಟ್ಸ್​ಆ್ಯಪ್​ಗೆ ಮೆಸೆಜ್ ಮಾಡಿದ್ದಾನೆ. ಯಾಕೆ ಕಾಲ್ ಮಾಡುತ್ತೀಯಾ? ಹಣ ಪಾವತಿಸಿದ್ದೇನೆ, ಆ್ಯಪ್ ಪರಿಶೀಲನೆ ನಡೆಸುವಂತೆ ಯುವತಿ ಸೂಚಿಸಿದ್ದಾಳೆ. ಈ ವೇಳೆ ಲವ್ ಯು ಅಂತ ಮೆಸೇಜ್ ಮಾಡಿದ್ದಾನೆ.

ರ್ಯಾಪಿಡೊ ಬೈಕ್ ಚಾಲಕ ಮಾಡಿದ ಮೆಜೆಜ್​ಗಳನ್ನು ಯುವತಿ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡು ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಆರೋಪಿಸಿದ್ದಾಳೆ. ಇದನ್ನು ಗಮನಿಸಿದ ಬೆಂಗಳೂರು ಪೊಲೀಸರು, ಟ್ವಿಟ್ ಮಾಡಿದ ಯುವತಿಯನ್ನು ಸಂಪರ್ಕ ಮಾಡಲು ಮುಂದಾಗಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ