AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur Incident: ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ ವಾಪಸ್ ಆಗುತ್ತಿದ್ದ ಯುವತಿಗೆ ರ್ಯಾಪಿಡೋ ಬೈಕ್ ಚಾಲಕನಿಂದ ಲೈಂಗಿಕ ಕಿರುಕುಳ

ಮಣಿಪುರದಲ್ಲಿ ನಡೆದ ಮಹಿಳೆಯ ಬೆತ್ತಲೆ ಮೆರವಣಿಗೆ ಖಂಡಿಸಿ ಬೆಂಗಳೂರಿನ ಟೌನ್​ಹಾಲ್​ನಲ್ಲಿ ಪ್ರತಿಭಟನೆ ನಡೆಸಲಾಯಿತು. ಇದರಲ್ಲಿ ಭಾಗಿಯಾಗಿ ಮನೆಗೆ ವಾಪಸ್ ಆಗುತ್ತಿದ್ದಾಗ ರ್ಯಾಪಿಡೋ ಬೈಕ್ ಚಾಲಕ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಯುವತಿ ಟ್ವೀಟ್ ಮಾಡಿದ್ದಾಳೆ.

Manipur Incident: ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ ವಾಪಸ್ ಆಗುತ್ತಿದ್ದ ಯುವತಿಗೆ ರ್ಯಾಪಿಡೋ ಬೈಕ್ ಚಾಲಕನಿಂದ ಲೈಂಗಿಕ ಕಿರುಕುಳ
ಯುವತಿಗೆ ಮೆಸೆಜ್ ಮಾಡಿದ ರ್ಯಾಪಿಡೋ ಬೈಕ್ ಚಾಲಕ (ಎಡಚಿತ್ರ) ಮತ್ತು ಸಾಂದರ್ಭಿಕ ಚಿತ್ರ (ಬಲಚಿತ್ರ)
Shivaprasad B
| Updated By: Rakesh Nayak Manchi|

Updated on: Jul 22, 2023 | 7:12 PM

Share

ಬೆಂಗಳೂರು, ಜುಲೈ 22: ಮಣಿಪುರದಲ್ಲಿ (Manipur) ನಡೆದ ಮಹಿಳೆಯ ಬೆತ್ತಲೆ ಮೆರವಣಿಗೆ ಖಂಡಿಸಿ ನಗರದ ಟೌನ್​ಹಾಲ್​ನಲ್ಲಿ ನಡೆದ ಪ್ರತಿಘಟನೆಯಲ್ಲಿ ಭಾಗಿಯಾದ ಯುವತಿಯೊಬ್ಬಳಿಗೆ ರ್ಯಾಪಿಡೋ ಬೈಕ್ ಚಾಲಕ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಡ್ರಾಪ್ ನಂತರ ಲವ್ ಯು ಅಂತ ಮೆಸೆಜ್ ಮಾಡಿದ ಘಟನೆ ನಡೆದಿದೆ. ಈ ಬಗ್ಗೆ ನೊಂದ ಯುವತಿ ಟ್ವೀಟ್ ಮಾಡಿದ್ದು, ಪೊಲೀಸರು ಪರಿಶೀಲನೆಗೆ ಮುಂದಾಗಿದ್ದಾರೆ.

ಮಣಿಪುರ ಘಟನೆ ಖಂಡಿಸಿ ಟೌನ್​ಹಾಲ್​ ಮುಂಭಾಗ ನಡೆದ ಪ್ರತಿಭಟನೆ ನಂತರ ಮನೆಗೆ ವಾಪಸ್ ಆಗಲು ಯುವತಿಯೊಬ್ಬಳು ರ್ಯಾಪಿಡೊ ಆಟೋ ಬುಕ್ ಮಾಡಿದ್ದಾಳೆ. ಇದು ಕ್ಯಾನ್ಸಲ್ ಆದ ಹಿನ್ನೆಲೆ ರ್ಯಾಪಿಡೊ ಬೈಕ್ ಬುಕ್ ಮಾಡಿದ್ದಾಳೆ. ಆದರೆ ಚಾಲಕ ರ್ಯಾಪಿಡೋ ಬೈಕ್ ಬದಲು ಬೇರೆ ಬೈಕ್ ತಂದಿದ್ದಾನೆ. ಆದರೂ ಬೈಕ್ ಹತ್ತಿದ ಯುವತಿಗೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ಗ ಮಧ್ಯ ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ.

ಇದನ್ನೂ ಓದಿ: ಕಾರ್ಗಿಲ್ ಯುದ್ದದಲ್ಲಿ ಹೋರಾಡಿದ್ದೆ, ಆದರೆ ಮಣಿಪುರದಲ್ಲಿ ನನ್ನ ಪತ್ನಿಯನ್ನು ವಿವಸ್ತ್ರಗೊಳಿಸಿದಾಗ ಕಾಪಾಡಲು ನನ್ನಿಂದಾಗಲಿಲ್ಲ: ಕಣ್ಣೀರಿಟ್ಟ ಮಾಜಿ ಯೋಧ

ಅಷ್ಟೇ ಅಲ್ಲದೆ, ಡ್ರಾಪ್ ಮಾಡಿದ ನಂತರ ಬೈಕ್ ಚಾಲಕ ಯುವತಿಯ ಮೊಬೈಲ್​ಗೆ ಕರೆ ಮಾಡಿದ್ದಾನೆ. ನಂತರ ವಾಟ್ಸ್​ಆ್ಯಪ್​ಗೆ ಮೆಸೆಜ್ ಮಾಡಿದ್ದಾನೆ. ಯಾಕೆ ಕಾಲ್ ಮಾಡುತ್ತೀಯಾ? ಹಣ ಪಾವತಿಸಿದ್ದೇನೆ, ಆ್ಯಪ್ ಪರಿಶೀಲನೆ ನಡೆಸುವಂತೆ ಯುವತಿ ಸೂಚಿಸಿದ್ದಾಳೆ. ಈ ವೇಳೆ ಲವ್ ಯು ಅಂತ ಮೆಸೇಜ್ ಮಾಡಿದ್ದಾನೆ.

ರ್ಯಾಪಿಡೊ ಬೈಕ್ ಚಾಲಕ ಮಾಡಿದ ಮೆಜೆಜ್​ಗಳನ್ನು ಯುವತಿ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡು ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಆರೋಪಿಸಿದ್ದಾಳೆ. ಇದನ್ನು ಗಮನಿಸಿದ ಬೆಂಗಳೂರು ಪೊಲೀಸರು, ಟ್ವಿಟ್ ಮಾಡಿದ ಯುವತಿಯನ್ನು ಸಂಪರ್ಕ ಮಾಡಲು ಮುಂದಾಗಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ