AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur Incident: ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ ವಾಪಸ್ ಆಗುತ್ತಿದ್ದ ಯುವತಿಗೆ ರ್ಯಾಪಿಡೋ ಬೈಕ್ ಚಾಲಕನಿಂದ ಲೈಂಗಿಕ ಕಿರುಕುಳ

ಮಣಿಪುರದಲ್ಲಿ ನಡೆದ ಮಹಿಳೆಯ ಬೆತ್ತಲೆ ಮೆರವಣಿಗೆ ಖಂಡಿಸಿ ಬೆಂಗಳೂರಿನ ಟೌನ್​ಹಾಲ್​ನಲ್ಲಿ ಪ್ರತಿಭಟನೆ ನಡೆಸಲಾಯಿತು. ಇದರಲ್ಲಿ ಭಾಗಿಯಾಗಿ ಮನೆಗೆ ವಾಪಸ್ ಆಗುತ್ತಿದ್ದಾಗ ರ್ಯಾಪಿಡೋ ಬೈಕ್ ಚಾಲಕ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಯುವತಿ ಟ್ವೀಟ್ ಮಾಡಿದ್ದಾಳೆ.

Manipur Incident: ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ ವಾಪಸ್ ಆಗುತ್ತಿದ್ದ ಯುವತಿಗೆ ರ್ಯಾಪಿಡೋ ಬೈಕ್ ಚಾಲಕನಿಂದ ಲೈಂಗಿಕ ಕಿರುಕುಳ
ಯುವತಿಗೆ ಮೆಸೆಜ್ ಮಾಡಿದ ರ್ಯಾಪಿಡೋ ಬೈಕ್ ಚಾಲಕ (ಎಡಚಿತ್ರ) ಮತ್ತು ಸಾಂದರ್ಭಿಕ ಚಿತ್ರ (ಬಲಚಿತ್ರ)
Shivaprasad B
| Edited By: |

Updated on: Jul 22, 2023 | 7:12 PM

Share

ಬೆಂಗಳೂರು, ಜುಲೈ 22: ಮಣಿಪುರದಲ್ಲಿ (Manipur) ನಡೆದ ಮಹಿಳೆಯ ಬೆತ್ತಲೆ ಮೆರವಣಿಗೆ ಖಂಡಿಸಿ ನಗರದ ಟೌನ್​ಹಾಲ್​ನಲ್ಲಿ ನಡೆದ ಪ್ರತಿಘಟನೆಯಲ್ಲಿ ಭಾಗಿಯಾದ ಯುವತಿಯೊಬ್ಬಳಿಗೆ ರ್ಯಾಪಿಡೋ ಬೈಕ್ ಚಾಲಕ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಡ್ರಾಪ್ ನಂತರ ಲವ್ ಯು ಅಂತ ಮೆಸೆಜ್ ಮಾಡಿದ ಘಟನೆ ನಡೆದಿದೆ. ಈ ಬಗ್ಗೆ ನೊಂದ ಯುವತಿ ಟ್ವೀಟ್ ಮಾಡಿದ್ದು, ಪೊಲೀಸರು ಪರಿಶೀಲನೆಗೆ ಮುಂದಾಗಿದ್ದಾರೆ.

ಮಣಿಪುರ ಘಟನೆ ಖಂಡಿಸಿ ಟೌನ್​ಹಾಲ್​ ಮುಂಭಾಗ ನಡೆದ ಪ್ರತಿಭಟನೆ ನಂತರ ಮನೆಗೆ ವಾಪಸ್ ಆಗಲು ಯುವತಿಯೊಬ್ಬಳು ರ್ಯಾಪಿಡೊ ಆಟೋ ಬುಕ್ ಮಾಡಿದ್ದಾಳೆ. ಇದು ಕ್ಯಾನ್ಸಲ್ ಆದ ಹಿನ್ನೆಲೆ ರ್ಯಾಪಿಡೊ ಬೈಕ್ ಬುಕ್ ಮಾಡಿದ್ದಾಳೆ. ಆದರೆ ಚಾಲಕ ರ್ಯಾಪಿಡೋ ಬೈಕ್ ಬದಲು ಬೇರೆ ಬೈಕ್ ತಂದಿದ್ದಾನೆ. ಆದರೂ ಬೈಕ್ ಹತ್ತಿದ ಯುವತಿಗೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ಗ ಮಧ್ಯ ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ.

ಇದನ್ನೂ ಓದಿ: ಕಾರ್ಗಿಲ್ ಯುದ್ದದಲ್ಲಿ ಹೋರಾಡಿದ್ದೆ, ಆದರೆ ಮಣಿಪುರದಲ್ಲಿ ನನ್ನ ಪತ್ನಿಯನ್ನು ವಿವಸ್ತ್ರಗೊಳಿಸಿದಾಗ ಕಾಪಾಡಲು ನನ್ನಿಂದಾಗಲಿಲ್ಲ: ಕಣ್ಣೀರಿಟ್ಟ ಮಾಜಿ ಯೋಧ

ಅಷ್ಟೇ ಅಲ್ಲದೆ, ಡ್ರಾಪ್ ಮಾಡಿದ ನಂತರ ಬೈಕ್ ಚಾಲಕ ಯುವತಿಯ ಮೊಬೈಲ್​ಗೆ ಕರೆ ಮಾಡಿದ್ದಾನೆ. ನಂತರ ವಾಟ್ಸ್​ಆ್ಯಪ್​ಗೆ ಮೆಸೆಜ್ ಮಾಡಿದ್ದಾನೆ. ಯಾಕೆ ಕಾಲ್ ಮಾಡುತ್ತೀಯಾ? ಹಣ ಪಾವತಿಸಿದ್ದೇನೆ, ಆ್ಯಪ್ ಪರಿಶೀಲನೆ ನಡೆಸುವಂತೆ ಯುವತಿ ಸೂಚಿಸಿದ್ದಾಳೆ. ಈ ವೇಳೆ ಲವ್ ಯು ಅಂತ ಮೆಸೇಜ್ ಮಾಡಿದ್ದಾನೆ.

ರ್ಯಾಪಿಡೊ ಬೈಕ್ ಚಾಲಕ ಮಾಡಿದ ಮೆಜೆಜ್​ಗಳನ್ನು ಯುವತಿ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡು ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಆರೋಪಿಸಿದ್ದಾಳೆ. ಇದನ್ನು ಗಮನಿಸಿದ ಬೆಂಗಳೂರು ಪೊಲೀಸರು, ಟ್ವಿಟ್ ಮಾಡಿದ ಯುವತಿಯನ್ನು ಸಂಪರ್ಕ ಮಾಡಲು ಮುಂದಾಗಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!