AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮಾಜಿಕ ಜಾಲತಾಣ ಬಳಸೋ ಯುವತಿಯರೇ ಎಚ್ಚರ! ಫೇಸ್ ಬುಕ್​ನಲ್ಲಿ ಹಿಂದೂ ಹೆಸರು ಇಟ್ಟುಕೊಂಡು ಯುವತಿಗೆ ವಂಚನೆ

ಸಾಮಾಜಿಕ ಜಾಲತಾಣ ಬಳಸುವ ಯುವತಿಯರೇ ಎಚ್ಚರವಾಗಿರುವುದು ಒಳಿತು. ಹೌದು, ಫೇಸ್​ಬುಕ್(Facebook)​ನಲ್ಲಿ  ಹಿಂದೂ ಎಂಬ ಹೆಸರು ಹಾಕಿಕೊಂಡು ಚಂದದ ಯುವತಿಯನ್ನು ಟಾರ್ಗೆಟ್ ಮಾಡಿ ಪರಿಚಯ ಮಾಡಿಕೊಂಡು ಖೆಡ್ಡಾಗೆ ಕೆಡವಿದ್ದ ಆಸಾಮಿಯೊಬ್ಬ, ಕಾಲೇಜು ಯುವತಿಗೆ ವಂಚಿಸಿದ್ದು, ಈ ಘಟನೆ ಇದೀಗ ಬೆಳಕಿಗೆ ಬಂದಿದೆ.

ಸಾಮಾಜಿಕ ಜಾಲತಾಣ ಬಳಸೋ ಯುವತಿಯರೇ ಎಚ್ಚರ! ಫೇಸ್ ಬುಕ್​ನಲ್ಲಿ ಹಿಂದೂ ಹೆಸರು ಇಟ್ಟುಕೊಂಡು ಯುವತಿಗೆ ವಂಚನೆ
ಪ್ರಾತಿನಿಧಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on: Sep 28, 2023 | 10:54 AM

Share

ಬೆಂಗಳೂರು, ಸೆ.28: ಕಾಲಾಮಾನ ಬದಲಾದಂತೆ ಇಂದಿನ ದಿನಮಾನಕ್ಕೆ ಹೊಂದಿಕೊಳ್ಳುವುದು ಸರ್ವೇಸಾಮಾನ್ಯ. ಅದರಂತೆ ಇಂದು ಸಾಮಾಜಿಕ ಜಾಲತಾಣ(Social Media) ದಲ್ಲಿಯೇ ಎಲ್ಲೂರು ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಹಾಗಾಗಿ ಸಾಮಾಜಿಕ ಜಾಲತಾಣ ಬಳಸುವ ಯುವತಿಯರೇ ಎಚ್ಚರವಾಗಿರುವುದು ಒಳಿತು. ಹೌದು, ಫೇಸ್​ಬುಕ್(Facebook)​ನಲ್ಲಿ  ಹಿಂದೂ ಎಂಬ ಹೆಸರು ಹಾಕಿಕೊಂಡು ಚಂದದ ಯುವತಿಯನ್ನು ಟಾರ್ಗೆಟ್ ಮಾಡಿ ಪರಿಚಯ ಮಾಡಿಕೊಂಡು ಖೆಡ್ಡಾಗೆ ಕೆಡವಿದ್ದ ಆಸಾಮಿಯೊಬ್ಬ, ಕಾಲೇಜು ಯುವತಿಗೆ ವಂಚಿಸಿದ್ದು, ಈ ಘಟನೆ ಇದೀಗ ಬೆಳಕಿಗೆ ಬಂದಿದೆ. ಆತನಿಂದ ಬೇಸೆತ್ತು ಗಿರಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

ಹೌದು, ಅನ್ಯಕೋಮಿನ ವ್ಯಕ್ತಿಯೊಬ್ಬ ಕಾಲೇಜು ಯುವತಿಯ ಜೊತೆ ಐದು ವರ್ಷ ಲಿವಿಂಗ್ ಟುಗೆದರ್ ನಡೆಸಿದ್ದಾನೆ. ಕೆಲ ದಿನಗಳ ಬಳಿಕ ಆತನ ಅಸಲಿಯತ್ತು ಬಯಲಿಗೆ ಬಂದಿದೆ. ಇತ ಫೇಸ್ ಬುಕ್ ನಲ್ಲಿ ‘ಗುರುಪ್ರಸಾದ್’ ಹೆಸರು ಹಾಕಿಕೊಂಡಿದ್ದ. ಆದರೆ, ಆತನ ನಿಜವಾದ ಹೆಸರು ರಫೀಕ್ ಬಾದ್ ಶಾ. ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ. ಇದಾದ ಬಳಿಕ ಆತ ಅನ್ಯ ಕೋಮಿನವನು ಎಂದು ಗೊತ್ತಾಗಿಯೂ ಆತನ ಜೊತೆಗೆ ಯುವತಿ ವಾಸವಿದ್ದಳು. ಸದ್ಯ ಎಂಎನ್ ಸಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಯುವತಿಗೆ ಇತ್ತೀಚೆಗೆ ಕಿರುಕುಳ ಕೊಡಲು ಆರಂಭಿಸಿದ್ದ. ಈ ಹಿನ್ನಲೆ ಯುವತಿ ತನ್ನ ತಂದೆ ಮನೆಗೆ ಹೋಗಿ ವಾಸವಿದ್ದಳು. ಆದರೂ ರಫೀಕ್ ಯುವತಿಯ ಬೆನ್ನು ಬಿದ್ದು, ಪ್ರತಿದಿನ ಕಿರುಕುಳ ನೀಡುತ್ತದ್ದನಂತೆ. ಹೀಗಾಗಿ ಆತನಿಂದ ಬೇಸತ್ತು ಗಿರಿನಗರ ಪೊಲೀಸ್ ಠಾಣೆಗೆ ದೂರು ನೀಡಿರುವುದಾಗಿ ನೊಂದ ಯುವತಿ ದೂರಿನಲ್ಲಿ ಉಲ್ಲೇಖ ಮಾಡಿದ್ದಾಳೆ.

ಇದನ್ನೂ ಓದಿ:Cyber Crime: ಪೊಲೀಸರ ಹೆಸರಿನಲ್ಲಿ ಕರೆ ಮಾಡಿ ಮಹಿಳೆಗೆ ವಂಚನೆ, ಪೊಲೀಸರು ಹೇಳಿದ ಕಿವಿ ಮಾತೇನು?

ಇನ್ನು ಬೆಂಗಳೂರಿನಲ್ಲಿ ಆಗಸ್ಟ್​ 10 ರಂದು ವಿದೇಶದಿಂದ ಉಡುಗೊರೆಗಳನ್ನು ಕಳುಹಿಸುವುದಾಗಿ ಯಾಮಾರಿಸಿ ವ್ಯಕ್ತಿಯೋರ್ವನಿಂದ 5 ಲಕ್ಷ ರೂಪಾಯಿ ಪಡೆದು ವಂಚಿಸಿದ ಘಟನೆ ನಡೆದಿತ್ತು. ಬೆಂಗಳೂರಿನ ಪೀಣ್ಯ ನಿವಾಸಿಯಾದ ಪ್ಯಾಟ್ರಿಕ್ ರೋಹನ್​ ಎಂಬುವವರು ವಂಚನೆಗೊಳಗಾದ ವ್ಯಕ್ತಿ. ಇವರು ಫೇಸ್​ ಬುಕ್​ನಲ್ಲಿ ನಾಲ್ವರು ಅಪರಿಚಿತರ ಜೊತೆ ಸ್ನೇಹ ಬೆಳೆಸಿ  ಲಕ್ಷಾಂತರ ರೂ. ಕಳೆದುಕೊಂಡಿದ್ದರು. ಈ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ 2000 (ಯು/ಎಸ್-66(ಸಿ), 66(ಡಿ)) ಐಪಿಸಿ 1860 (ಯು/ಎಸ್-420) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಇಂತಹ ಹತ್ತಾರು ಪ್ರಕರಣಗಳು ಬೆಳಕಿಗೆ ಬಂದರೂ, ಎಚ್ಚರವಾಗದೇ ಪುನಃ ಎಡವುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್