AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮಾಜಿಕ ಜಾಲತಾಣ ಬಳಸೋ ಯುವತಿಯರೇ ಎಚ್ಚರ! ಫೇಸ್ ಬುಕ್​ನಲ್ಲಿ ಹಿಂದೂ ಹೆಸರು ಇಟ್ಟುಕೊಂಡು ಯುವತಿಗೆ ವಂಚನೆ

ಸಾಮಾಜಿಕ ಜಾಲತಾಣ ಬಳಸುವ ಯುವತಿಯರೇ ಎಚ್ಚರವಾಗಿರುವುದು ಒಳಿತು. ಹೌದು, ಫೇಸ್​ಬುಕ್(Facebook)​ನಲ್ಲಿ  ಹಿಂದೂ ಎಂಬ ಹೆಸರು ಹಾಕಿಕೊಂಡು ಚಂದದ ಯುವತಿಯನ್ನು ಟಾರ್ಗೆಟ್ ಮಾಡಿ ಪರಿಚಯ ಮಾಡಿಕೊಂಡು ಖೆಡ್ಡಾಗೆ ಕೆಡವಿದ್ದ ಆಸಾಮಿಯೊಬ್ಬ, ಕಾಲೇಜು ಯುವತಿಗೆ ವಂಚಿಸಿದ್ದು, ಈ ಘಟನೆ ಇದೀಗ ಬೆಳಕಿಗೆ ಬಂದಿದೆ.

ಸಾಮಾಜಿಕ ಜಾಲತಾಣ ಬಳಸೋ ಯುವತಿಯರೇ ಎಚ್ಚರ! ಫೇಸ್ ಬುಕ್​ನಲ್ಲಿ ಹಿಂದೂ ಹೆಸರು ಇಟ್ಟುಕೊಂಡು ಯುವತಿಗೆ ವಂಚನೆ
ಪ್ರಾತಿನಿಧಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on: Sep 28, 2023 | 10:54 AM

Share

ಬೆಂಗಳೂರು, ಸೆ.28: ಕಾಲಾಮಾನ ಬದಲಾದಂತೆ ಇಂದಿನ ದಿನಮಾನಕ್ಕೆ ಹೊಂದಿಕೊಳ್ಳುವುದು ಸರ್ವೇಸಾಮಾನ್ಯ. ಅದರಂತೆ ಇಂದು ಸಾಮಾಜಿಕ ಜಾಲತಾಣ(Social Media) ದಲ್ಲಿಯೇ ಎಲ್ಲೂರು ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಹಾಗಾಗಿ ಸಾಮಾಜಿಕ ಜಾಲತಾಣ ಬಳಸುವ ಯುವತಿಯರೇ ಎಚ್ಚರವಾಗಿರುವುದು ಒಳಿತು. ಹೌದು, ಫೇಸ್​ಬುಕ್(Facebook)​ನಲ್ಲಿ  ಹಿಂದೂ ಎಂಬ ಹೆಸರು ಹಾಕಿಕೊಂಡು ಚಂದದ ಯುವತಿಯನ್ನು ಟಾರ್ಗೆಟ್ ಮಾಡಿ ಪರಿಚಯ ಮಾಡಿಕೊಂಡು ಖೆಡ್ಡಾಗೆ ಕೆಡವಿದ್ದ ಆಸಾಮಿಯೊಬ್ಬ, ಕಾಲೇಜು ಯುವತಿಗೆ ವಂಚಿಸಿದ್ದು, ಈ ಘಟನೆ ಇದೀಗ ಬೆಳಕಿಗೆ ಬಂದಿದೆ. ಆತನಿಂದ ಬೇಸೆತ್ತು ಗಿರಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

ಹೌದು, ಅನ್ಯಕೋಮಿನ ವ್ಯಕ್ತಿಯೊಬ್ಬ ಕಾಲೇಜು ಯುವತಿಯ ಜೊತೆ ಐದು ವರ್ಷ ಲಿವಿಂಗ್ ಟುಗೆದರ್ ನಡೆಸಿದ್ದಾನೆ. ಕೆಲ ದಿನಗಳ ಬಳಿಕ ಆತನ ಅಸಲಿಯತ್ತು ಬಯಲಿಗೆ ಬಂದಿದೆ. ಇತ ಫೇಸ್ ಬುಕ್ ನಲ್ಲಿ ‘ಗುರುಪ್ರಸಾದ್’ ಹೆಸರು ಹಾಕಿಕೊಂಡಿದ್ದ. ಆದರೆ, ಆತನ ನಿಜವಾದ ಹೆಸರು ರಫೀಕ್ ಬಾದ್ ಶಾ. ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ. ಇದಾದ ಬಳಿಕ ಆತ ಅನ್ಯ ಕೋಮಿನವನು ಎಂದು ಗೊತ್ತಾಗಿಯೂ ಆತನ ಜೊತೆಗೆ ಯುವತಿ ವಾಸವಿದ್ದಳು. ಸದ್ಯ ಎಂಎನ್ ಸಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಯುವತಿಗೆ ಇತ್ತೀಚೆಗೆ ಕಿರುಕುಳ ಕೊಡಲು ಆರಂಭಿಸಿದ್ದ. ಈ ಹಿನ್ನಲೆ ಯುವತಿ ತನ್ನ ತಂದೆ ಮನೆಗೆ ಹೋಗಿ ವಾಸವಿದ್ದಳು. ಆದರೂ ರಫೀಕ್ ಯುವತಿಯ ಬೆನ್ನು ಬಿದ್ದು, ಪ್ರತಿದಿನ ಕಿರುಕುಳ ನೀಡುತ್ತದ್ದನಂತೆ. ಹೀಗಾಗಿ ಆತನಿಂದ ಬೇಸತ್ತು ಗಿರಿನಗರ ಪೊಲೀಸ್ ಠಾಣೆಗೆ ದೂರು ನೀಡಿರುವುದಾಗಿ ನೊಂದ ಯುವತಿ ದೂರಿನಲ್ಲಿ ಉಲ್ಲೇಖ ಮಾಡಿದ್ದಾಳೆ.

ಇದನ್ನೂ ಓದಿ:Cyber Crime: ಪೊಲೀಸರ ಹೆಸರಿನಲ್ಲಿ ಕರೆ ಮಾಡಿ ಮಹಿಳೆಗೆ ವಂಚನೆ, ಪೊಲೀಸರು ಹೇಳಿದ ಕಿವಿ ಮಾತೇನು?

ಇನ್ನು ಬೆಂಗಳೂರಿನಲ್ಲಿ ಆಗಸ್ಟ್​ 10 ರಂದು ವಿದೇಶದಿಂದ ಉಡುಗೊರೆಗಳನ್ನು ಕಳುಹಿಸುವುದಾಗಿ ಯಾಮಾರಿಸಿ ವ್ಯಕ್ತಿಯೋರ್ವನಿಂದ 5 ಲಕ್ಷ ರೂಪಾಯಿ ಪಡೆದು ವಂಚಿಸಿದ ಘಟನೆ ನಡೆದಿತ್ತು. ಬೆಂಗಳೂರಿನ ಪೀಣ್ಯ ನಿವಾಸಿಯಾದ ಪ್ಯಾಟ್ರಿಕ್ ರೋಹನ್​ ಎಂಬುವವರು ವಂಚನೆಗೊಳಗಾದ ವ್ಯಕ್ತಿ. ಇವರು ಫೇಸ್​ ಬುಕ್​ನಲ್ಲಿ ನಾಲ್ವರು ಅಪರಿಚಿತರ ಜೊತೆ ಸ್ನೇಹ ಬೆಳೆಸಿ  ಲಕ್ಷಾಂತರ ರೂ. ಕಳೆದುಕೊಂಡಿದ್ದರು. ಈ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ 2000 (ಯು/ಎಸ್-66(ಸಿ), 66(ಡಿ)) ಐಪಿಸಿ 1860 (ಯು/ಎಸ್-420) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಇಂತಹ ಹತ್ತಾರು ಪ್ರಕರಣಗಳು ಬೆಳಕಿಗೆ ಬಂದರೂ, ಎಚ್ಚರವಾಗದೇ ಪುನಃ ಎಡವುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ