AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿಯರ ಲವ್ ಸ್ಟೋರಿ, ಬಾಸ್​ಗೆ ಬಿತ್ತು ಪಂಗನಾಮ! ಕಂಪನಿ ಫೋನ್ ಪೇಯಿಂದ ಲವರ್​ ಅಕೌಂಟ್​ಗೆ ಹಣ ಟ್ರಾನ್ಸ್​ಫರ್; ಪೊಲೀಸ್ ಠಾಣೆ ಮೆಟ್ಟಿಲೇರಿದ ಮಾಲೀಕ

ಕೆಲಸ ಕೊಟ್ಟ ಬಾಸ್ ಅಕೌಂಟ್​ನಿಂದ ತನ್ನ ಬಾಯ್ ಫ್ರೆಂಡ್​ಗೆ ಹಣ ಟ್ರಾನ್ಸಫರ್ ಮಾಡುವ ಮೂಲಕ ಕಂಪನಿ ಮಾಲೀಕನಿಗೆ ಪಂಗನಾಮ ಹಾಕಿದ ಘಟನೆ ಕೇಳಿಬಂದಿದೆ. ಈ ಕುರಿತು ಮಾಲೀಕ ವಿದ್ಯಾರಣ್ಯಪುರ ಠಾಣೆಗೆ ದೂರು ನೀಡಿದ್ದಾನೆ. ಲವರ್​ಗೋಸ್ಕರ ಫೋನ್​ ಪೇ ಯೂಸ್ ಮಾಡಿದ ಕ್ರೇಜಿ ಸ್ಟೋರಿ ಇಲ್ಲಿದೆ ನೋಡಿ.

ಯುವತಿಯರ ಲವ್ ಸ್ಟೋರಿ, ಬಾಸ್​ಗೆ ಬಿತ್ತು ಪಂಗನಾಮ! ಕಂಪನಿ ಫೋನ್ ಪೇಯಿಂದ ಲವರ್​ ಅಕೌಂಟ್​ಗೆ ಹಣ ಟ್ರಾನ್ಸ್​ಫರ್; ಪೊಲೀಸ್ ಠಾಣೆ ಮೆಟ್ಟಿಲೇರಿದ ಮಾಲೀಕ
ಪ್ರಾತಿನಿಧಿಕ ಚಿತ್ರ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: May 18, 2023 | 8:09 AM

Share

ಬೆಂಗಳೂರು: ಕೆಲಸ ಕೊಟ್ಟ ಬಾಸ್ ಅಕೌಂಟ್​ನಿಂದ ತನ್ನ ಬಾಯ್ ಫ್ರೆಂಡ್​ಗೆ ಹಣ ಟ್ರಾನ್ಸಫರ್ ಮಾಡುವ ಮೂಲಕ ಕಂಪನಿ ಮಾಲೀಕನಿಗೆ ಪಂಗನಾಮ ಹಾಕಿದ ಘಟನೆ ಕೇಳಿಬಂದಿದೆ. ಈ ಕುರಿತು ಮಾಲೀಕ ವಿದ್ಯಾರಣ್ಯಪುರ(Vidyaranyapura) ಠಾಣೆಗೆ ದೂರು ನೀಡಿದ್ದಾನೆ. ಹೌದು ವಿದ್ಯಾರಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ಬರುವ ಖಾಸಗಿ ಕಂಪನಿ ನಡೆಸುತ್ತಿರುವ ವೆಂಕಟೇಶ ರೆಡ್ಡಿ ಎಂಬುವವರು ರೀತು ಎಂಬಾಕೆಯನ್ನ ರಿಸಪ್ಷನಿಸ್ಟ್(receptionist)ಆಗಿ ಸೇರಿಸಿಕೊಂಡಿದ್ದರು. ಆದರೆ, ಈ ಯುವತಿ ಇದೀಗ ಅದೇ ಕಂಪನಿ ಓನರ್​ನನ್ನು ಠಾಣೆ ಮೆಟ್ಟಿಲೇರುವಂತೆ ಮಾಡಿದ್ದಾಳೆ. ಹೌದು ಮಾಲೀಕನ ಮೊಬೈಲ್​ನಿಂದಲೇ ತನ್ನ ತಂಗಿ, ಲವರ್​ ಖರ್ಚಿಗೆಂದು ಹಣ ಕಳಿಸಿದ್ದಾಳೆ. ಇವಳಷ್ಟೇ ಅಲ್ಲ, ಇವಳು ಸೇರಿ ಒಟ್ಟು ಮೂವರು ಯುವತಿಯರು ತಮ್ಮ ತಮ್ಮ ಬಾಯ್ ಫ್ರೆಂಡ್​ಗಳ ಅಕೌಂಟ್​ಗೆ ಹಣ ಕಳಿಸಿದ್ದಾರೆ.

ಕಂಪನಿಗೆ ಸಂಬಂಧಿಸಿದ ಅಕೌಂಟ್​ಗಳ ಪೋನ್ ಪೇ, ಗೂಗಲ್ ಪೇ ಆ್ಯಡ್ ಮಾಡಿಸಿದ್ದ ಮಾಲೀಕ

ಮಾಲೀಕ ತನ್ನ ಕಂಪನಿಗೆ ಸಂಬಂಧಿಸಿದ ಅಕೌಂಟ್​ಗಳ ಪೋನ್ ಪೇ, ಗೂಗಲ್ ಪೇ ಆ್ಯಡ್ ಮಾಡಿಸಿದ್ದ. ಜೊತೆಗೆ ರೀತು ಎಂಬಾಕೆಯ ಮೂಲಕ ಪಾಸ್​ವರ್ಡ್ ಕೂಡ ಸೆಟ್ ಮಾಡಿಸಿದ್ದ ಮಾಲೀಕ ವೆಂಕಟೇಶ ರೆಡ್ಡಿ. ನಂತರ ಹಣದ ವ್ಯವಹಾರದಲ್ಲೂ ರೀತು ವರ್ಗಾವಣೆ ಮಾಡುತ್ತಿದ್ದಳು. ಇದೇ ವೇಳೆ ತನ್ನ ಹಾಗೂ ತನ್ನ ಸಹೋದರಿಯರ ಅಕೌಂಟ್ ಗೂ ಹಣ ವರ್ಗಾವಣೆ ಮಾಡಿದ್ದ ರಿಯಾ. ಬಳಿಕ ತನ್ನ ಬಾಯ್ ಫ್ರೆಂಡ್ ಸೇರಿ ಮೂವರಿಗೆ ಹಣ ಕಳಿಸಿದ್ದಾಳೆ. ಇದುವರೆಗೂ 2 ಲಕ್ಷ 70ಸಾವಿರ ಹಣ ವರ್ಗಾಯಿಸಿದ್ದಾಳೆ.

ಇದನ್ನೂ ಓದಿ:Banana Diet: ತೂಕ ನಷ್ಟಕ್ಕೆ ಬಾಳೆಹಣ್ಣು ಮಾತ್ರ ತಿನ್ನುವುದು ಸುರಕ್ಷಿತವೇ?

ಕೆಲ ದಿನದ ನಂತರ ವೆಂಕಟೇಶ್ ರೆಡ್ಡಿಗೆ ಡ್ಯೂ ಅಲರ್ಟ್ ಮೆಸೇಜ್

ಕೆಲ ದಿನದ ನಂತರ ವೆಂಕಟೇಶ್ ರೆಡ್ಡಿಗೆ ಡ್ಯೂ ಅಲರ್ಟ್ ಮೆಸೇಜ್ ಬಂದಿದೆ. ಅಕೌಂಟ್​ನಲ್ಲಿ ಹಣ ಇದ್ರೂ, ಡ್ಯೂ ಮೆಸೆಜ್ ಬಂದಿರೋದ್ರ ಬಗ್ಗೆ ವೆಂಕಟೇಶ್ ರೆಡ್ಡಿ ಪರಿಶೀಲಿಸಿದ್ದ. ಈ ವೇಳೆ ರೀತು ತನ್ನ ಲವರ್​ ಸೇರಿ ನಕ್ಷು, ಕುಶಾಲಪ್ಪ, ಮಾಲ್ತೇಶ್, ರಾಹುಲ್ ಎಂಬುವರಿಗೆ ಹಣ ವರ್ಗಾಯಿಸಿರೋದು ಬೆಳಕಿಗೆ ಬಂದಿದೆ. ಸದ್ಯ ಘಟನೆ ಸಂಬಂಧ ವಿದ್ಯಾರಣ್ಯಪುರ ಠಾಣೆಗೆ ದೂರು ನೀಡಿದ್ದು, ವಿದ್ಯಾರಣ್ಯಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆಫೀಸ್ ಉದ್ಯೋಗಿಯೊಬ್ಬಳ ಕೈಚಳಕದಿಂದ ಇದೀಗ ಕಂಪನಿ ಮಾಲೀಕ ಠಾಣೆ ಮೆಟ್ಟಿಲೇರಿದ್ದಾನೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ