AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿಯರ ಲವ್ ಸ್ಟೋರಿ, ಬಾಸ್​ಗೆ ಬಿತ್ತು ಪಂಗನಾಮ! ಕಂಪನಿ ಫೋನ್ ಪೇಯಿಂದ ಲವರ್​ ಅಕೌಂಟ್​ಗೆ ಹಣ ಟ್ರಾನ್ಸ್​ಫರ್; ಪೊಲೀಸ್ ಠಾಣೆ ಮೆಟ್ಟಿಲೇರಿದ ಮಾಲೀಕ

ಕೆಲಸ ಕೊಟ್ಟ ಬಾಸ್ ಅಕೌಂಟ್​ನಿಂದ ತನ್ನ ಬಾಯ್ ಫ್ರೆಂಡ್​ಗೆ ಹಣ ಟ್ರಾನ್ಸಫರ್ ಮಾಡುವ ಮೂಲಕ ಕಂಪನಿ ಮಾಲೀಕನಿಗೆ ಪಂಗನಾಮ ಹಾಕಿದ ಘಟನೆ ಕೇಳಿಬಂದಿದೆ. ಈ ಕುರಿತು ಮಾಲೀಕ ವಿದ್ಯಾರಣ್ಯಪುರ ಠಾಣೆಗೆ ದೂರು ನೀಡಿದ್ದಾನೆ. ಲವರ್​ಗೋಸ್ಕರ ಫೋನ್​ ಪೇ ಯೂಸ್ ಮಾಡಿದ ಕ್ರೇಜಿ ಸ್ಟೋರಿ ಇಲ್ಲಿದೆ ನೋಡಿ.

ಯುವತಿಯರ ಲವ್ ಸ್ಟೋರಿ, ಬಾಸ್​ಗೆ ಬಿತ್ತು ಪಂಗನಾಮ! ಕಂಪನಿ ಫೋನ್ ಪೇಯಿಂದ ಲವರ್​ ಅಕೌಂಟ್​ಗೆ ಹಣ ಟ್ರಾನ್ಸ್​ಫರ್; ಪೊಲೀಸ್ ಠಾಣೆ ಮೆಟ್ಟಿಲೇರಿದ ಮಾಲೀಕ
ಪ್ರಾತಿನಿಧಿಕ ಚಿತ್ರ
ಕಿರಣ್ ಹನುಮಂತ್​ ಮಾದಾರ್
|

Updated on: May 18, 2023 | 8:09 AM

Share

ಬೆಂಗಳೂರು: ಕೆಲಸ ಕೊಟ್ಟ ಬಾಸ್ ಅಕೌಂಟ್​ನಿಂದ ತನ್ನ ಬಾಯ್ ಫ್ರೆಂಡ್​ಗೆ ಹಣ ಟ್ರಾನ್ಸಫರ್ ಮಾಡುವ ಮೂಲಕ ಕಂಪನಿ ಮಾಲೀಕನಿಗೆ ಪಂಗನಾಮ ಹಾಕಿದ ಘಟನೆ ಕೇಳಿಬಂದಿದೆ. ಈ ಕುರಿತು ಮಾಲೀಕ ವಿದ್ಯಾರಣ್ಯಪುರ(Vidyaranyapura) ಠಾಣೆಗೆ ದೂರು ನೀಡಿದ್ದಾನೆ. ಹೌದು ವಿದ್ಯಾರಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ಬರುವ ಖಾಸಗಿ ಕಂಪನಿ ನಡೆಸುತ್ತಿರುವ ವೆಂಕಟೇಶ ರೆಡ್ಡಿ ಎಂಬುವವರು ರೀತು ಎಂಬಾಕೆಯನ್ನ ರಿಸಪ್ಷನಿಸ್ಟ್(receptionist)ಆಗಿ ಸೇರಿಸಿಕೊಂಡಿದ್ದರು. ಆದರೆ, ಈ ಯುವತಿ ಇದೀಗ ಅದೇ ಕಂಪನಿ ಓನರ್​ನನ್ನು ಠಾಣೆ ಮೆಟ್ಟಿಲೇರುವಂತೆ ಮಾಡಿದ್ದಾಳೆ. ಹೌದು ಮಾಲೀಕನ ಮೊಬೈಲ್​ನಿಂದಲೇ ತನ್ನ ತಂಗಿ, ಲವರ್​ ಖರ್ಚಿಗೆಂದು ಹಣ ಕಳಿಸಿದ್ದಾಳೆ. ಇವಳಷ್ಟೇ ಅಲ್ಲ, ಇವಳು ಸೇರಿ ಒಟ್ಟು ಮೂವರು ಯುವತಿಯರು ತಮ್ಮ ತಮ್ಮ ಬಾಯ್ ಫ್ರೆಂಡ್​ಗಳ ಅಕೌಂಟ್​ಗೆ ಹಣ ಕಳಿಸಿದ್ದಾರೆ.

ಕಂಪನಿಗೆ ಸಂಬಂಧಿಸಿದ ಅಕೌಂಟ್​ಗಳ ಪೋನ್ ಪೇ, ಗೂಗಲ್ ಪೇ ಆ್ಯಡ್ ಮಾಡಿಸಿದ್ದ ಮಾಲೀಕ

ಮಾಲೀಕ ತನ್ನ ಕಂಪನಿಗೆ ಸಂಬಂಧಿಸಿದ ಅಕೌಂಟ್​ಗಳ ಪೋನ್ ಪೇ, ಗೂಗಲ್ ಪೇ ಆ್ಯಡ್ ಮಾಡಿಸಿದ್ದ. ಜೊತೆಗೆ ರೀತು ಎಂಬಾಕೆಯ ಮೂಲಕ ಪಾಸ್​ವರ್ಡ್ ಕೂಡ ಸೆಟ್ ಮಾಡಿಸಿದ್ದ ಮಾಲೀಕ ವೆಂಕಟೇಶ ರೆಡ್ಡಿ. ನಂತರ ಹಣದ ವ್ಯವಹಾರದಲ್ಲೂ ರೀತು ವರ್ಗಾವಣೆ ಮಾಡುತ್ತಿದ್ದಳು. ಇದೇ ವೇಳೆ ತನ್ನ ಹಾಗೂ ತನ್ನ ಸಹೋದರಿಯರ ಅಕೌಂಟ್ ಗೂ ಹಣ ವರ್ಗಾವಣೆ ಮಾಡಿದ್ದ ರಿಯಾ. ಬಳಿಕ ತನ್ನ ಬಾಯ್ ಫ್ರೆಂಡ್ ಸೇರಿ ಮೂವರಿಗೆ ಹಣ ಕಳಿಸಿದ್ದಾಳೆ. ಇದುವರೆಗೂ 2 ಲಕ್ಷ 70ಸಾವಿರ ಹಣ ವರ್ಗಾಯಿಸಿದ್ದಾಳೆ.

ಇದನ್ನೂ ಓದಿ:Banana Diet: ತೂಕ ನಷ್ಟಕ್ಕೆ ಬಾಳೆಹಣ್ಣು ಮಾತ್ರ ತಿನ್ನುವುದು ಸುರಕ್ಷಿತವೇ?

ಕೆಲ ದಿನದ ನಂತರ ವೆಂಕಟೇಶ್ ರೆಡ್ಡಿಗೆ ಡ್ಯೂ ಅಲರ್ಟ್ ಮೆಸೇಜ್

ಕೆಲ ದಿನದ ನಂತರ ವೆಂಕಟೇಶ್ ರೆಡ್ಡಿಗೆ ಡ್ಯೂ ಅಲರ್ಟ್ ಮೆಸೇಜ್ ಬಂದಿದೆ. ಅಕೌಂಟ್​ನಲ್ಲಿ ಹಣ ಇದ್ರೂ, ಡ್ಯೂ ಮೆಸೆಜ್ ಬಂದಿರೋದ್ರ ಬಗ್ಗೆ ವೆಂಕಟೇಶ್ ರೆಡ್ಡಿ ಪರಿಶೀಲಿಸಿದ್ದ. ಈ ವೇಳೆ ರೀತು ತನ್ನ ಲವರ್​ ಸೇರಿ ನಕ್ಷು, ಕುಶಾಲಪ್ಪ, ಮಾಲ್ತೇಶ್, ರಾಹುಲ್ ಎಂಬುವರಿಗೆ ಹಣ ವರ್ಗಾಯಿಸಿರೋದು ಬೆಳಕಿಗೆ ಬಂದಿದೆ. ಸದ್ಯ ಘಟನೆ ಸಂಬಂಧ ವಿದ್ಯಾರಣ್ಯಪುರ ಠಾಣೆಗೆ ದೂರು ನೀಡಿದ್ದು, ವಿದ್ಯಾರಣ್ಯಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆಫೀಸ್ ಉದ್ಯೋಗಿಯೊಬ್ಬಳ ಕೈಚಳಕದಿಂದ ಇದೀಗ ಕಂಪನಿ ಮಾಲೀಕ ಠಾಣೆ ಮೆಟ್ಟಿಲೇರಿದ್ದಾನೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ