AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಸಚಿವರ ಹೇಳಿಕೆ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ; ‘ತೀರ್ಥಹಳ್ಳಿ ಕ್ಷೇತ್ರಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಕಳಂಕ’ ಎಂದ ಕಿಮ್ಮನೆ ರತ್ನಾಕರ್

ಕಾಂಗ್ರೆಸ್ ಭವನದಲ್ಲಿ ಗೃಹ ಸಚಿವ ಅರಗ ಜ್ಙಾನೇಂದ್ರ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಮೊಹಮ್ಮದ್ ಹ್ಯಾರಿಸ್ ನಲಪಾಡ್ ನೇತೃತ್ವದಲ್ಲಿ ಕಾಂಗ್ರೆಸ್ ಭವನದಿಂದ ಫ್ರೀಡಂ ಪಾರ್ಕ್ಗೆ ಹೊರಟಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಗೃಹ ಸಚಿವರ ಹೇಳಿಕೆ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ; ‘ತೀರ್ಥಹಳ್ಳಿ ಕ್ಷೇತ್ರಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಕಳಂಕ’ ಎಂದ ಕಿಮ್ಮನೆ ರತ್ನಾಕರ್
ಗೃಹ ಸಚಿವರ ಹೇಳಿಕೆ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ
TV9 Web
| Edited By: |

Updated on: Apr 07, 2022 | 1:11 PM

Share

ಬೆಂಗಳೂರು: ಜೆ.ಜೆ.ನಗರದಲ್ಲಿ ಯುವಕ ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಉರ್ದು ಮಾತಾಡದ್ದಕ್ಕೆ ಕೊಲೆಯಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಪ್ಪು ಹೇಳಿಕೆ ನೀಡಿದ್ದರು. ಬಳಿಕ ತಮ್ಮ ತಪ್ಪು ಅರಿವಾಗಿ ಬೈಕ್ ಡಿಕ್ಕಿಯಾಗಿ ಗಲಾಟೆಯಾಗಿ ಚಂದ್ರುಗೆ ಚೂರಿ ಇರಿತ ಆಗಿದೆ. ಆಸ್ಪತ್ರೆಗೆ ಹೋಗುವಷ್ಟರಲ್ಲಿ ರಕ್ತಸ್ರಾವವಾಗಿ ಚಂದ್ರು ಸಾವನ್ನಪ್ಪಿದ್ದಾರೆ ಎಂದು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದರು. ಗೃಹ ಸಚಿವರ ಈ ಬೇಜವಾಬ್ದಾರಿ ಹೇಳಿಕೆಗೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಈಗ ಇದೇ ಕಾರಣದಿಂದಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.

ಕಾಂಗ್ರೆಸ್ ಭವನದಲ್ಲಿ ಗೃಹ ಸಚಿವ ಅರಗ ಜ್ಙಾನೇಂದ್ರ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಮೊಹಮ್ಮದ್ ಹ್ಯಾರಿಸ್ ನಲಪಾಡ್ ನೇತೃತ್ವದಲ್ಲಿ ಕಾಂಗ್ರೆಸ್ ಭವನದಿಂದ ಫ್ರೀಡಂ ಪಾರ್ಕ್ಗೆ ಹೊರಟಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರನ್ನ ಪೋಲಿಸರು ತಡೆದಿದ್ದಾರೆ. ಹೈಗ್ರೌಂಡ್ ಪೋಲಿಸರು ಪ್ರತಿಭಟನಾ ನಿರತರನ್ನ ವಶಕ್ಕೆ ಪಡೆದಿದ್ದಾರೆ.

ಪ್ರತಿಭಟನೆ ವೇಳೆ ನಲಪಾಡ್, ಗೃಹ ಸಚಿವರನ್ನ ಅವಿವೇಕಿ ಎಂದಿದ್ದಾರೆ. ಕೋಮುಗಲಭೆಯನ್ನ ಸೃಷ್ಟಿಸಲು ಈ ರೀತಿ ಹೇಳಿದ್ದಾರೆ. ಗೃಹಸಚಿವರು ರಾಜೀನಾಮೆ ಕೊಡಲೇ ಬೇಕು ಎಂದು ಮೊಹಮ್ಮದ್ ಹ್ಯಾರಿಸ್ ನಲಪಾಡ್ ಒತ್ತಾಯ ಮಾಡಿದ್ದು ಗೃಹಸಚಿವರ ವಿರುದ್ದ ಯೂತ್ ಕಾಂಗ್ರೆಸ್ ಆಕ್ರೋಶ ಹೊರ ಹಾಕಿದೆ. ಇನ್ನು ಗೃಹ ಸಚಿವರ ಹೇಳಿಕೆ ಖಂಡಿಸಿ ಕಾಂಗ್ರೆಸ್ನಿಂದ ಮುತ್ತಿಗೆ ಹಿನ್ನೆಲೆ ಆರಗ ಜ್ಞಾನೇಂದ್ರ ಸರ್ಕಾರಿ ನಿವಾಸಕ್ಕೆ ಪೊಲೀಸ್ ಭದ್ರತೆ ನೀಡಿದೆ. ಬೆಂಗಳೂರಿನ ಜಯಮಹಲ್ನಲ್ಲಿರುವ ಆರಗ ಜ್ಞಾನೇಂದ್ರ ಮನೆಗೆ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಆಡಳಿತ ಪಕ್ಷದಿಂದ ಕೋಮುಗಲಭೆ ಸೃಷ್ಟಿ ದುರದೃಷ್ಟಕರ ಸಂಗತಿ ‘ತೀರ್ಥಹಳ್ಳಿ ಕ್ಷೇತ್ರಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಕಳಂಕ’ ಎಂದು ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಕಿಮ್ಮನೆ ರತ್ನಾಕರ್ ಆಕ್ರೋಶ ಹೊರ ಹಾಕಿದ್ದಾರೆ. ಸಚಿವ ಆರಗ ಜ್ಞಾನೇಂದ್ರ ಕೂಡಲೇ ರಾಜೀನಾಮೆ ನೀಡಬೇಕು. ಆಡಳಿತ ಪಕ್ಷದಿಂದ ಕೋಮುಗಲಭೆ ಸೃಷ್ಟಿ ದುರದೃಷ್ಟಕರ ಸಂಗತಿ. ಸಚಿವ ಆರಗ ಜ್ಞಾನೇಂದ್ರರನ್ನು ಸಿಎಂ, ರಾಜ್ಯಪಾಲರು ಕೂಡಲೇ ವಜಾ ಮಾಡಬೇಕು. ಗೃಹ ಸಚಿವರಾದವರು ಎಚ್ಚರಿಕೆಯಿಂದ ಹೇಳಿಕೆ ನೀಡಬೇಕಿತ್ತು. ಗೃಹ ಸಚಿವರೇ ಕೋಮು ಪ್ರಚೋದನೆ ಹೇಳಿಕೆ ನೀಡಿದ್ದಾರೆ. ಗೃಹ ಸಚಿವರ ವಿರುದ್ಧ ಪ್ರಕರಣ ದಾಖಲು ಮಾಡಬೇಕು. ಆರಗ ಜ್ಞಾನೇಂದ್ರ 2 ಜ್ಞಾನಪೀಠ ಪ್ರಶಸ್ತಿ ಪಡೆದ ಕ್ಷೇತ್ರದ ಶಾಸಕ. ತೀರ್ಥಹಳ್ಳಿ ಕ್ಷೇತ್ರದ ಗೌರವ ಉಳಿಸಲು ರಾಜೀನಾಮೆ ನೀಡಬೇಕು ಎಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಉರ್ದು ಮಾತಾಡದ್ದಕ್ಕೆ ಕೊಲೆ ಎಂಬ ಹೇಳಿಕೆ ತಪ್ಪಾಗಿದೆ; ಇದೀಗ ಪೊಲೀಸರು ವಿಸ್ತೃತ ವರದಿ ನೀಡಿದ್ದಾರೆ ಎಂದ ಆರಗ ಜ್ಞಾನೇಂದ್ರ

ಹಿಂದೂ ಯುವಕನೊಬ್ಬನ ಕೊಲೆಯಾದರೆ ಸಿದ್ದರಾಮಯ್ಯನವರ ಬಾಯಲ್ಲಿ ಒಂದು ಸಂತಾಪದ ಮಾತು ಕೂಡ ಬರಲ್ಲ: ಸಿಟಿ ರವಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ