AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಮುಗಳೂರು ಹೊಳೆಯಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಮಹಿಳೆ ಮೇಲೆ ಇಬ್ಬರಿಗೆ ಪ್ರೀತಿ

ಆನೇಕಲ್ ಮುಗಳೂರು ಹೊಳೆಯಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಒಂದೇ ಮಹಿಳೆಯನ್ನು ಇಬ್ಬರು ಪ್ರೀತಿ ಮಾಡಿದ್ದೇ ಕೊಲೆಗೆ ಕಾರಣ ಎಂದು ತಿಳಿದುಬಂದಿದೆ. ಅಕ್ಟೋಬರ್ 26 ರಂದು ದಕ್ಷಿಣ ಪಿನಾಕಿನಿ ಹೊಳೆಯಲ್ಲಿ ಶವ ಪತ್ತೆಯಾಗಿದ್ದು, ಸರ್ಜಾಪುರ ಪೊಲೀಸರು ಮೂರು ಆರೋಪಿಗಳನ್ನು ಬಂಧಿಸಿದ್ದಾರೆ.

ಆನೇಕಲ್: ಮುಗಳೂರು ಹೊಳೆಯಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಮಹಿಳೆ ಮೇಲೆ ಇಬ್ಬರಿಗೆ ಪ್ರೀತಿ
ಕೊಲೆಯಾದ ಚೇತನ್ ಮತ್ತು ಆರೋಪಿ ಸತೀಶ್
ರಾಮು, ಆನೇಕಲ್​
| Edited By: Rakesh Nayak Manchi|

Updated on: Nov 04, 2023 | 11:40 AM

Share

ಆನೇಕಲ್, ನ.4: ಬೆಂಗಳೂರು (Bengaluru) ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮುಗಳೂರು ಹೊಳೆಯಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಒಂದೇ ಮಹಿಳೆಯನ್ನು ಇಬ್ಬರು ಪ್ರೀತಿ ಮಾಡಿದ್ದೇ ಕೊಲೆಗೆ ಕಾರಣ ಎಂದು ತಿಳಿದುಬಂದಿದೆ. ಅಕ್ಟೋಬರ್ 26 ರಂದು ದಕ್ಷಿಣ ಪಿನಾಕಿನಿ ಹೊಳೆಯಲ್ಲಿ ಶವ ಪತ್ತೆಯಾಗಿದ್ದು, ಸರ್ಜಾಪುರ ಪೊಲೀಸರು ಮೂರು ಆರೋಪಿಗಳನ್ನು ಬಂಧಿಸಿದ್ದಾರೆ.

ಕೋಲಾರ ಮಾಲೂರು ತಾಲೂಕಿನ ಅಯ್ಯಪ್ಪನಗರದ ಪ್ರಕಾಶ್ ರೆಡ್ಡಿ ಮಗ ಚೇತನ್ ಕೊಲೆಯಾದ ಯುವಕನಾಗಿದ್ದು, ಮಾಲೂರು ಸೊನ್ನಾಪುರ ಗ್ರಾಮದ ಸತೀಶ್ ಕೊಲೆ ಅರೋಪಿಯಾಗಿದ್ದಾನೆ. ಪ್ರಕರಣ ಸಂಬಂಧ ಸತೀಶ್, ಶಶಿ ಮತ್ತು ಶೋಭಾ ಅವರನ್ನು ಪೊಲೀಸರು ಬಂಧಿಸಿದ್ದು, ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.

ಇದನ್ನೂ ಓದಿ: ಹಾವೇರಿ: ಅತ್ತಿಗೆ, ಇಬ್ಬರು ಮಕ್ಕಳನ್ನು ಕೊಚ್ಚಿ ಕೊಲೆ ಮಾಡಿ ಮೈದುನ ಪರಾರಿ

ಶವ ಪತ್ತೆಯಾದ ದಕ್ಷಿಣ ಪಿನಾಕಿನಿ ಹೊಳೆಯ ಬ್ರಿಡ್ಜ್​ನ ತಡೆಗೋಡೆ ಮೇಲೆ ರಕ್ತದ ಕಲೆಗಳ ಪತ್ತೆಯಾಗಿತ್ತು. ಮಧ್ಯರಾತ್ರಿ 2 ಗಂಟೆಗೆ ಮಚ್ಚಿನಿಂದ ಹೊಡೆದು ಮೇಲಿಂದ ಕೆಳಗೆ ಎಸೆದಿದ್ದರು. ಈ ಬಗ್ಗೆ ಪೊಲೀಸ್ ತನಿಖೆ ವೇಳೆ ಆರೋಪಿಗಳು ಬಾಯಿಬಿಟ್ಟಿದ್ದಾರೆ.

ಅಕ್ಟೋಬರ್ 7 ರಂದು ಶೋಭಾ ಮೂಲಕ ಚೇತನ್ ಹಾಗೂ ಸತೀಶ್ ಪರಿಚಯವಾಗಿದೆ. ಪರಿಚಯದ ನಂತರ ಅ.26 ರಂದು ಹೊಸಕೋಟೆ ಐಶ್ವರ್ಯ ಬಾರ್​ನಲ್ಲಿ ಮದ್ಯದ ಪಾರ್ಟಿ ಮಾಡಿದ್ದರು. ಪಾರ್ಟಿ ಮುಗಿಸಿ ಮಧ್ಯರಾತ್ರಿ ಎರಡು ಗಂಟೆಗೆ ಮುಗಳೂರು ಬಳಿ ಚೇತನ್​ನನ್ನು ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದರು.

ಪ್ರಕರಣ ಸಂಬಂಧ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದ ಸರ್ಜಾಪುರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಕೊಲೆ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಹಿಂದೆ ಅತ್ತಿಬೆಲೆ ಕೊಲೆ ಪ್ರಕರಣದಲ್ಲಿ ಶೋಭಾ ಜೈಲಿಗೆ ಹೋಗಿದ್ದಳು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ramu Ram
Ramu Ram

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More