AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ದೆಹಲಿಗೆ ಹೊರಟಿದ್ದ ಸ್ನೇಹಿತೆಗೆ ಬೈಬೈ ಹೇಳಲು ವಿಮಾನದ ನಕಲಿ ಟಿಕೆಟ್ ತಯಾರಿಸಿದ್ದ ಸ್ನೇಹಿತ ಅರೆಸ್ಟ್​

ಪ್ರಯಾಣದ ನಕಲಿ ಟಿಕೆಟ್​ ತಯಾರಿಸಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದೊಳಗೆ ಪ್ರವೇಶಿಸಿದ್ದ ಜಾರ್ಖಾಂಡ್​ ಮೂಲದ ಯುವಕನನ್ನು ಬೆಂಗಳೂರು ವಿಮಾನ ನಿಲ್ದಾಣ ಪೊಲೀಸರು ಬಂಧಿಸಿದ್ದಾರೆ. ಅಷ್ಟಕ್ಕೂ ಯುವಕ ನಕಲಿ ಟಿಕೆಟ್​ ತಯಾರಿಸಿದ್ದು ಏಕೆ? ಈ ಸ್ಟೋರಿ ಓದಿ..

ಬೆಂಗಳೂರು: ದೆಹಲಿಗೆ ಹೊರಟಿದ್ದ ಸ್ನೇಹಿತೆಗೆ ಬೈಬೈ ಹೇಳಲು ವಿಮಾನದ ನಕಲಿ ಟಿಕೆಟ್ ತಯಾರಿಸಿದ್ದ ಸ್ನೇಹಿತ ಅರೆಸ್ಟ್​
ಆರೋಪಿ ಪ್ರಖರ್​
Jagadisha B
| Edited By: ವಿವೇಕ ಬಿರಾದಾರ|

Updated on:Mar 13, 2024 | 9:34 AM

Share

ಬೆಂಗಳೂರು, ಮಾರ್ಚ್​ 13: ಸ್ನೇಹಿತೆಯನ್ನು ಬೀಳ್ಕೊಡಲು ನಕಲಿ ಟಿಕೆಟ್‌ನೊಂದಿಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದೊಳಗೆ (Kempegowda International Airport) ಪ್ರವೇಶಿಸಿದ್ದ ಯುವಕನನ್ನು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸಿಬ್ಬಂದಿ (Bengaluru Airport Police) ಬಂಧಿಸಿದ್ದಾರೆ. ಜಾರ್ಖಂಡ್‌ ಮೂಲದ ಪ್ರಖರ್ ಶ್ರೀವಾಸ್ತವ (24 ವರ್ಷ) ಬಂಧಿತ ಆರೋಪಿ. ಆರೋಪಿ ಪ್ರಖರ್ ಶ್ರೀವಾಸ್ತವ ಸ್ನೇಹಿತೆ ಸಂಸ್ಕೃತಿ ಬೆಂಗಳೂರಿನಿಂದ ದೆಹಲಿಗೆ ವಿಮಾನ ಮೂಲಕ ಪ್ರಯಾಣ ಬೆಳೆಸಲು ಬೆಂಗಳೂರು (Bengaluru) ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಸ್ನೇಹಿತೆಯನ್ನು ಕಳುಹಿಸಲು ಕೊಡಲು ಪ್ರಖರ್, ಪ್ರಯಾಣದ ನಕಲಿ ಟಿಕೆಟ್ ತಯಾರಿಸಿ ವಿಮಾನ ನಿಲ್ದಾಣಕ್ಕೆ ಬಂದಿದ್ದಾನೆ.

ನಕಲಿ ಟಿಕೆಟ್​​ ಅನ್ನು ತೋರಿಸಿ, ವಿಮಾನ ನಿಲ್ದಾಣದೊಳಗೆ ಪ್ರವೇಶಿಸಿದ್ದಾನೆ. ಆದರೆ ವಿಮಾನದಲ್ಲಿ ಪ್ರಯಾಣಿಸದೆ, ಸ್ನೇಹಿತೆಯನ್ನು ಕಳುಹಿಸಿ ವಾಪಸ್​ ಆಗಿದ್ದಾನೆ. ಆಗ ಗೇಟ್ ನಂ. 9ರ ಭದ್ರತಾ ಸಿಬ್ಬಂದಿ ಪ್ರಶ್ನಿಸಿದಾಗ, ನನಗೆ ತುರ್ತು ​ಕರೆ ಬಂದಿದೆ, ಹೀಗಾಗಿ ಮರಳಿ ಹೋಗುತ್ತಿದ್ದೇನೆ ಎಂದು ಹೇಳಿದ್ದಾನೆ. ಅನುಮಾನಗೊಂಡ ಭದ್ರತಾ ಸಿಬ್ಬಂದಿ ಪ್ರಖರ್​ನ ಪ್ರಯಾಣದ ಟಿಕೆಟ್​ ಅನ್ನು ಮತ್ತೊಮ್ಮೆ ಪರಿಶೀಲಿಸಿದಾಗ ನಕಲಿ ಎಂಬುವುದು ತಿಳಿದು ಬಂದಿದೆ.

ಇದನ್ನೂ ಓದಿ: ಬೆಂಗಳೂರು ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್​​

ಕೂಡಲೆ ಪ್ರಖರ್​ನನ್ನು ವಿಮಾನ ನಿಲ್ದಾಣದ ಪೊಲೀಸರು ವಶಕ್ಕೆ ಪಡೆದುಕೊಂಡು, ತೀವ್ರ ವಿಚಾರಣೆ ನಡೆಸಿದಾಗ ಸ್ನೇಹಿತೆಗೆ ಬೈ ಬೈ ಹೇಳಲು ವಿಮಾನ ಟಿಕೆಟ್ ಅನ್ನು ನಕಲಿ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ವಿಮಾನ ನಿಲ್ದಾಣದ ಒಳಗೆ ಅತಿಕ್ರಮಣ, ನಕಲಿ ಟಿಕೆಟ್​ ಮತ್ತು ವಂಚನೆಯ ಅಡಿಯಲ್ಲಿ ಆರೋಪಿ ವಿರುದ್ಧ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇತ್ತೀಚೆಗೆ ವರದಿಯಾದ ಎರಡನೇ ಪ್ರಕರಣ ಇದಾಗಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ಜಾರ್ಖಂಡ್ ಮೂಲದ 26 ವರ್ಷದ ಹರ್‌ಪ್ರೀತ್ ಕೌರ್ ಸೈನಿ ಎಂಬ ಟೆಕ್ಕಿಯು ಟಿಕೆಟ್​ ಇಲ್ಲದೆ ವಿಮಾನ ನಿಲ್ದಾಣದ ಒಳಗೆ ಪ್ರವೇಶಿಸಿದ್ದರು. ಕೂಡಲೆ ಅವರನ್ನು ಬಂಧಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:12 am, Wed, 13 March 24

Follow Us
Jagadisha B
Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ