AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲ್ಮೆಟ್ ಇಲ್ಲದೇ ರೀಲ್ಸ್ ಮಾಡಲು ಯುವಕರ ಹೊಸ ಪ್ಲಾನ್: ಚುರುಕಾದ ಟ್ರಾಫಿಕ್ ಪೊಲೀಸ್

ಬ್ಲರ್ ಮಾಡುವ ಆಯ್ಕೆ ಬಳಸುತ್ತಿರುವ ಪುಂಡರು ರೀಲ್ಸ್​ಗಳಲ್ಲಿ ಬೈಕ್​ಗಳ ನಂಬರ್​ ಪ್ಲೇಟ್ ಕಾಣದಂತೆ ಎಚ್ಚರವಹಿಸುತ್ತಿದ್ದಾರೆ.

ಹೆಲ್ಮೆಟ್ ಇಲ್ಲದೇ ರೀಲ್ಸ್ ಮಾಡಲು ಯುವಕರ ಹೊಸ ಪ್ಲಾನ್: ಚುರುಕಾದ ಟ್ರಾಫಿಕ್ ಪೊಲೀಸ್
ನಂಬರ್ ಪ್ಲೇಟ್ ಬ್ಲರ್ ಮಾಡಿರುವ ರೀಲ್​ಗಳು
TV9 Web
| Edited By: |

Updated on:Oct 16, 2022 | 1:52 PM

Share

ಬೆಂಗಳೂರು: ಬೈಕ್​ ಮೇಲೆ ಸ್ಟಂಟ್ ಮಾಡಿ ರೀಲ್ಸ್​ ಮಾಡುತ್ತಿದ್ದ ಪುಂಡರನ್ನು ಟ್ರಾಫಿಕ್ ಪೊಲೀಸರು ಹುಡುಹುಡುಕಿ ದಂಡ ಹಾಕಲು ಶುರು ಮಾಡಿದ್ದಾರೆ. ಪೊಲೀಸರು ಚಾಪೆ ಕೆಳಗೆ ನುಸುಳಿದರೆ, ಪುಂಡರು ರಂಗೋಲಿ ಕೆಳಗೆ ನುಸುಳುವ ಚಾಣಾಕ್ಷತೆ ತೋರಿಸುತ್ತಾ ರೀಲ್ಸ್ ಮಾಡುತ್ತಿದ್ದಾರೆ. ಬ್ಲರ್ ಮಾಡುವ ಆಯ್ಕೆ ಬಳಸುತ್ತಿರುವ ಪುಂಡರು ರೀಲ್ಸ್​ಗಳಲ್ಲಿ ಬೈಕ್​ಗಳ ನಂಬರ್​ ಪ್ಲೇಟ್ ಕಾಣದಂತೆ ಎಚ್ಚರವಹಿಸುತ್ತಿದ್ದಾರೆ.

ಹೆಲ್ಮೆಟ್ ಧರಿಸದೇ ವಾಹನ ಸವಾರಿ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಫೋಟೊ, ವಿಡಿಯೊ ಹಾಕುವವರನ್ನು ಪೊಲೀಸರು ಎಚ್ಚರಿಕೆಯಿಂದ ಗಮನಿಸುತ್ತಿದ್ದಾರೆ. ನಂಬರ್​ ಪ್ಲೇಟ್ ಮೂಲಕ ವಾಹನಗಳ ಮಾಲೀಕರನ್ನು ಗುರುತಿಸಿ, ದಂಡದ ನೊಟೀಸ್​ಗಳನ್ನು ಕಳಿಸುತ್ತಿದ್ದಾರೆ. ಸಿಗ್ನಲ್ ಉಲ್ಲಂಘನೆ ಅಥವಾ ಬೇರೊಂದು ಸಂದರ್ಭದಲ್ಲಿ ಟ್ರಾಫಿಕ್ ಪೊಲೀಸರ ಕೈಗೆ ಸಿಕ್ಕಿ ಬೀಳುವ ವಾಹನ ಸವಾರರು ಹಳೆಯ ತಪ್ಪುಗಳ ದಂಡವನ್ನೂ ಸೇರಿಸಿ ಕಟ್ಟಬೇಕಾಗುತ್ತದೆ. ‘ದಚ್ಚು ದಿವು’ ಇನ್​ಸ್ಟಾಗ್ರಾಂ ಅಕೌಂಟ್​ನಲ್ಲಿ ರೀಲ್ಸ್​ ಮಾಡುತ್ತಿದ್ದವರಿಗೆ ಪೊಲೀಸರು ಇದೇ ರೀತಿ ದಂಡದ ಮೂಲಕ ಚುರುಕು ಮುಟ್ಟಿಸಿದ್ದರು.

ಪೊಲೀಸರ ಕ್ರಮದಿಂದ ತಪ್ಪಿಸಿಕೊಳ್ಳಲು ರೀಲ್ಸ್​ ಪುಂಡರು ಇದೀಗ ಮತ್ತೊಂದು ಉಪಾಯ ಕಂಡುಕೊಂಡಿದ್ದಾರೆ. ಅದೇ ‘ದಚ್ಚು ದಿವು’ ಇನ್​ಸ್ಟಾಗ್ರಾಂ ಅಕೌಂಟ್​ನಲ್ಲಿ ಹಲವು ರೀಲ್ಸ್​ಗಳು ಪತ್ತೆಯಾಗಿವೆ. ಸಂಚಾರ ಪೊಲೀಸರಿಗೆ ಈ ಹಿಂದೆ ₹ 17,500 ದಂಡವನ್ನು ಪಾವತಿಸಿದ್ದರು. ಆದರೆ ಈಗ ಹೊಸ ಉಪಾಯದಿಂದ ರೀಲ್ಸ್​ ಮಾಡುತ್ತಿದ್ದು, ನಂಬರ್ ಪ್ಲೇಟ್ ಕಾಣಿಸದ ರೀತಿಯಲ್ಲಿ ಎಚ್ಚರ ವಹಿಸುತ್ತಿದ್ದಾರೆ. ಇದನ್ನು ಮಟ್ಟ ಹಾಕುವುದು ಹೇಗೆ ಎಂದು ಪೊಲೀಸರು ಚಿಂತನೆ ನಡೆಸಿದ್ದಾರೆ.

Published On - 1:52 pm, Sun, 16 October 22

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!