AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲ್ಮೆಟ್ ಇಲ್ಲದೇ ರೀಲ್ಸ್ ಮಾಡಲು ಯುವಕರ ಹೊಸ ಪ್ಲಾನ್: ಚುರುಕಾದ ಟ್ರಾಫಿಕ್ ಪೊಲೀಸ್

ಬ್ಲರ್ ಮಾಡುವ ಆಯ್ಕೆ ಬಳಸುತ್ತಿರುವ ಪುಂಡರು ರೀಲ್ಸ್​ಗಳಲ್ಲಿ ಬೈಕ್​ಗಳ ನಂಬರ್​ ಪ್ಲೇಟ್ ಕಾಣದಂತೆ ಎಚ್ಚರವಹಿಸುತ್ತಿದ್ದಾರೆ.

ಹೆಲ್ಮೆಟ್ ಇಲ್ಲದೇ ರೀಲ್ಸ್ ಮಾಡಲು ಯುವಕರ ಹೊಸ ಪ್ಲಾನ್: ಚುರುಕಾದ ಟ್ರಾಫಿಕ್ ಪೊಲೀಸ್
ನಂಬರ್ ಪ್ಲೇಟ್ ಬ್ಲರ್ ಮಾಡಿರುವ ರೀಲ್​ಗಳು
TV9 Web
| Edited By: |

Updated on:Oct 16, 2022 | 1:52 PM

Share

ಬೆಂಗಳೂರು: ಬೈಕ್​ ಮೇಲೆ ಸ್ಟಂಟ್ ಮಾಡಿ ರೀಲ್ಸ್​ ಮಾಡುತ್ತಿದ್ದ ಪುಂಡರನ್ನು ಟ್ರಾಫಿಕ್ ಪೊಲೀಸರು ಹುಡುಹುಡುಕಿ ದಂಡ ಹಾಕಲು ಶುರು ಮಾಡಿದ್ದಾರೆ. ಪೊಲೀಸರು ಚಾಪೆ ಕೆಳಗೆ ನುಸುಳಿದರೆ, ಪುಂಡರು ರಂಗೋಲಿ ಕೆಳಗೆ ನುಸುಳುವ ಚಾಣಾಕ್ಷತೆ ತೋರಿಸುತ್ತಾ ರೀಲ್ಸ್ ಮಾಡುತ್ತಿದ್ದಾರೆ. ಬ್ಲರ್ ಮಾಡುವ ಆಯ್ಕೆ ಬಳಸುತ್ತಿರುವ ಪುಂಡರು ರೀಲ್ಸ್​ಗಳಲ್ಲಿ ಬೈಕ್​ಗಳ ನಂಬರ್​ ಪ್ಲೇಟ್ ಕಾಣದಂತೆ ಎಚ್ಚರವಹಿಸುತ್ತಿದ್ದಾರೆ.

ಹೆಲ್ಮೆಟ್ ಧರಿಸದೇ ವಾಹನ ಸವಾರಿ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಫೋಟೊ, ವಿಡಿಯೊ ಹಾಕುವವರನ್ನು ಪೊಲೀಸರು ಎಚ್ಚರಿಕೆಯಿಂದ ಗಮನಿಸುತ್ತಿದ್ದಾರೆ. ನಂಬರ್​ ಪ್ಲೇಟ್ ಮೂಲಕ ವಾಹನಗಳ ಮಾಲೀಕರನ್ನು ಗುರುತಿಸಿ, ದಂಡದ ನೊಟೀಸ್​ಗಳನ್ನು ಕಳಿಸುತ್ತಿದ್ದಾರೆ. ಸಿಗ್ನಲ್ ಉಲ್ಲಂಘನೆ ಅಥವಾ ಬೇರೊಂದು ಸಂದರ್ಭದಲ್ಲಿ ಟ್ರಾಫಿಕ್ ಪೊಲೀಸರ ಕೈಗೆ ಸಿಕ್ಕಿ ಬೀಳುವ ವಾಹನ ಸವಾರರು ಹಳೆಯ ತಪ್ಪುಗಳ ದಂಡವನ್ನೂ ಸೇರಿಸಿ ಕಟ್ಟಬೇಕಾಗುತ್ತದೆ. ‘ದಚ್ಚು ದಿವು’ ಇನ್​ಸ್ಟಾಗ್ರಾಂ ಅಕೌಂಟ್​ನಲ್ಲಿ ರೀಲ್ಸ್​ ಮಾಡುತ್ತಿದ್ದವರಿಗೆ ಪೊಲೀಸರು ಇದೇ ರೀತಿ ದಂಡದ ಮೂಲಕ ಚುರುಕು ಮುಟ್ಟಿಸಿದ್ದರು.

ಪೊಲೀಸರ ಕ್ರಮದಿಂದ ತಪ್ಪಿಸಿಕೊಳ್ಳಲು ರೀಲ್ಸ್​ ಪುಂಡರು ಇದೀಗ ಮತ್ತೊಂದು ಉಪಾಯ ಕಂಡುಕೊಂಡಿದ್ದಾರೆ. ಅದೇ ‘ದಚ್ಚು ದಿವು’ ಇನ್​ಸ್ಟಾಗ್ರಾಂ ಅಕೌಂಟ್​ನಲ್ಲಿ ಹಲವು ರೀಲ್ಸ್​ಗಳು ಪತ್ತೆಯಾಗಿವೆ. ಸಂಚಾರ ಪೊಲೀಸರಿಗೆ ಈ ಹಿಂದೆ ₹ 17,500 ದಂಡವನ್ನು ಪಾವತಿಸಿದ್ದರು. ಆದರೆ ಈಗ ಹೊಸ ಉಪಾಯದಿಂದ ರೀಲ್ಸ್​ ಮಾಡುತ್ತಿದ್ದು, ನಂಬರ್ ಪ್ಲೇಟ್ ಕಾಣಿಸದ ರೀತಿಯಲ್ಲಿ ಎಚ್ಚರ ವಹಿಸುತ್ತಿದ್ದಾರೆ. ಇದನ್ನು ಮಟ್ಟ ಹಾಕುವುದು ಹೇಗೆ ಎಂದು ಪೊಲೀಸರು ಚಿಂತನೆ ನಡೆಸಿದ್ದಾರೆ.

Published On - 1:52 pm, Sun, 16 October 22

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್