AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲ್ಮೆಟ್ ಇಲ್ಲದೇ ರೀಲ್ಸ್ ಮಾಡಲು ಯುವಕರ ಹೊಸ ಪ್ಲಾನ್: ಚುರುಕಾದ ಟ್ರಾಫಿಕ್ ಪೊಲೀಸ್

ಬ್ಲರ್ ಮಾಡುವ ಆಯ್ಕೆ ಬಳಸುತ್ತಿರುವ ಪುಂಡರು ರೀಲ್ಸ್​ಗಳಲ್ಲಿ ಬೈಕ್​ಗಳ ನಂಬರ್​ ಪ್ಲೇಟ್ ಕಾಣದಂತೆ ಎಚ್ಚರವಹಿಸುತ್ತಿದ್ದಾರೆ.

ಹೆಲ್ಮೆಟ್ ಇಲ್ಲದೇ ರೀಲ್ಸ್ ಮಾಡಲು ಯುವಕರ ಹೊಸ ಪ್ಲಾನ್: ಚುರುಕಾದ ಟ್ರಾಫಿಕ್ ಪೊಲೀಸ್
ನಂಬರ್ ಪ್ಲೇಟ್ ಬ್ಲರ್ ಮಾಡಿರುವ ರೀಲ್​ಗಳು
TV9 Web
| Edited By: |

Updated on:Oct 16, 2022 | 1:52 PM

Share

ಬೆಂಗಳೂರು: ಬೈಕ್​ ಮೇಲೆ ಸ್ಟಂಟ್ ಮಾಡಿ ರೀಲ್ಸ್​ ಮಾಡುತ್ತಿದ್ದ ಪುಂಡರನ್ನು ಟ್ರಾಫಿಕ್ ಪೊಲೀಸರು ಹುಡುಹುಡುಕಿ ದಂಡ ಹಾಕಲು ಶುರು ಮಾಡಿದ್ದಾರೆ. ಪೊಲೀಸರು ಚಾಪೆ ಕೆಳಗೆ ನುಸುಳಿದರೆ, ಪುಂಡರು ರಂಗೋಲಿ ಕೆಳಗೆ ನುಸುಳುವ ಚಾಣಾಕ್ಷತೆ ತೋರಿಸುತ್ತಾ ರೀಲ್ಸ್ ಮಾಡುತ್ತಿದ್ದಾರೆ. ಬ್ಲರ್ ಮಾಡುವ ಆಯ್ಕೆ ಬಳಸುತ್ತಿರುವ ಪುಂಡರು ರೀಲ್ಸ್​ಗಳಲ್ಲಿ ಬೈಕ್​ಗಳ ನಂಬರ್​ ಪ್ಲೇಟ್ ಕಾಣದಂತೆ ಎಚ್ಚರವಹಿಸುತ್ತಿದ್ದಾರೆ.

ಹೆಲ್ಮೆಟ್ ಧರಿಸದೇ ವಾಹನ ಸವಾರಿ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಫೋಟೊ, ವಿಡಿಯೊ ಹಾಕುವವರನ್ನು ಪೊಲೀಸರು ಎಚ್ಚರಿಕೆಯಿಂದ ಗಮನಿಸುತ್ತಿದ್ದಾರೆ. ನಂಬರ್​ ಪ್ಲೇಟ್ ಮೂಲಕ ವಾಹನಗಳ ಮಾಲೀಕರನ್ನು ಗುರುತಿಸಿ, ದಂಡದ ನೊಟೀಸ್​ಗಳನ್ನು ಕಳಿಸುತ್ತಿದ್ದಾರೆ. ಸಿಗ್ನಲ್ ಉಲ್ಲಂಘನೆ ಅಥವಾ ಬೇರೊಂದು ಸಂದರ್ಭದಲ್ಲಿ ಟ್ರಾಫಿಕ್ ಪೊಲೀಸರ ಕೈಗೆ ಸಿಕ್ಕಿ ಬೀಳುವ ವಾಹನ ಸವಾರರು ಹಳೆಯ ತಪ್ಪುಗಳ ದಂಡವನ್ನೂ ಸೇರಿಸಿ ಕಟ್ಟಬೇಕಾಗುತ್ತದೆ. ‘ದಚ್ಚು ದಿವು’ ಇನ್​ಸ್ಟಾಗ್ರಾಂ ಅಕೌಂಟ್​ನಲ್ಲಿ ರೀಲ್ಸ್​ ಮಾಡುತ್ತಿದ್ದವರಿಗೆ ಪೊಲೀಸರು ಇದೇ ರೀತಿ ದಂಡದ ಮೂಲಕ ಚುರುಕು ಮುಟ್ಟಿಸಿದ್ದರು.

ಪೊಲೀಸರ ಕ್ರಮದಿಂದ ತಪ್ಪಿಸಿಕೊಳ್ಳಲು ರೀಲ್ಸ್​ ಪುಂಡರು ಇದೀಗ ಮತ್ತೊಂದು ಉಪಾಯ ಕಂಡುಕೊಂಡಿದ್ದಾರೆ. ಅದೇ ‘ದಚ್ಚು ದಿವು’ ಇನ್​ಸ್ಟಾಗ್ರಾಂ ಅಕೌಂಟ್​ನಲ್ಲಿ ಹಲವು ರೀಲ್ಸ್​ಗಳು ಪತ್ತೆಯಾಗಿವೆ. ಸಂಚಾರ ಪೊಲೀಸರಿಗೆ ಈ ಹಿಂದೆ ₹ 17,500 ದಂಡವನ್ನು ಪಾವತಿಸಿದ್ದರು. ಆದರೆ ಈಗ ಹೊಸ ಉಪಾಯದಿಂದ ರೀಲ್ಸ್​ ಮಾಡುತ್ತಿದ್ದು, ನಂಬರ್ ಪ್ಲೇಟ್ ಕಾಣಿಸದ ರೀತಿಯಲ್ಲಿ ಎಚ್ಚರ ವಹಿಸುತ್ತಿದ್ದಾರೆ. ಇದನ್ನು ಮಟ್ಟ ಹಾಕುವುದು ಹೇಗೆ ಎಂದು ಪೊಲೀಸರು ಚಿಂತನೆ ನಡೆಸಿದ್ದಾರೆ.

Published On - 1:52 pm, Sun, 16 October 22

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್