AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲ್ಮೆಟ್ ಇಲ್ಲದೇ ರೀಲ್ಸ್ ಮಾಡಲು ಯುವಕರ ಹೊಸ ಪ್ಲಾನ್: ಚುರುಕಾದ ಟ್ರಾಫಿಕ್ ಪೊಲೀಸ್

ಬ್ಲರ್ ಮಾಡುವ ಆಯ್ಕೆ ಬಳಸುತ್ತಿರುವ ಪುಂಡರು ರೀಲ್ಸ್​ಗಳಲ್ಲಿ ಬೈಕ್​ಗಳ ನಂಬರ್​ ಪ್ಲೇಟ್ ಕಾಣದಂತೆ ಎಚ್ಚರವಹಿಸುತ್ತಿದ್ದಾರೆ.

ಹೆಲ್ಮೆಟ್ ಇಲ್ಲದೇ ರೀಲ್ಸ್ ಮಾಡಲು ಯುವಕರ ಹೊಸ ಪ್ಲಾನ್: ಚುರುಕಾದ ಟ್ರಾಫಿಕ್ ಪೊಲೀಸ್
ನಂಬರ್ ಪ್ಲೇಟ್ ಬ್ಲರ್ ಮಾಡಿರುವ ರೀಲ್​ಗಳು
TV9 Web
| Edited By: |

Updated on:Oct 16, 2022 | 1:52 PM

Share

ಬೆಂಗಳೂರು: ಬೈಕ್​ ಮೇಲೆ ಸ್ಟಂಟ್ ಮಾಡಿ ರೀಲ್ಸ್​ ಮಾಡುತ್ತಿದ್ದ ಪುಂಡರನ್ನು ಟ್ರಾಫಿಕ್ ಪೊಲೀಸರು ಹುಡುಹುಡುಕಿ ದಂಡ ಹಾಕಲು ಶುರು ಮಾಡಿದ್ದಾರೆ. ಪೊಲೀಸರು ಚಾಪೆ ಕೆಳಗೆ ನುಸುಳಿದರೆ, ಪುಂಡರು ರಂಗೋಲಿ ಕೆಳಗೆ ನುಸುಳುವ ಚಾಣಾಕ್ಷತೆ ತೋರಿಸುತ್ತಾ ರೀಲ್ಸ್ ಮಾಡುತ್ತಿದ್ದಾರೆ. ಬ್ಲರ್ ಮಾಡುವ ಆಯ್ಕೆ ಬಳಸುತ್ತಿರುವ ಪುಂಡರು ರೀಲ್ಸ್​ಗಳಲ್ಲಿ ಬೈಕ್​ಗಳ ನಂಬರ್​ ಪ್ಲೇಟ್ ಕಾಣದಂತೆ ಎಚ್ಚರವಹಿಸುತ್ತಿದ್ದಾರೆ.

ಹೆಲ್ಮೆಟ್ ಧರಿಸದೇ ವಾಹನ ಸವಾರಿ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಫೋಟೊ, ವಿಡಿಯೊ ಹಾಕುವವರನ್ನು ಪೊಲೀಸರು ಎಚ್ಚರಿಕೆಯಿಂದ ಗಮನಿಸುತ್ತಿದ್ದಾರೆ. ನಂಬರ್​ ಪ್ಲೇಟ್ ಮೂಲಕ ವಾಹನಗಳ ಮಾಲೀಕರನ್ನು ಗುರುತಿಸಿ, ದಂಡದ ನೊಟೀಸ್​ಗಳನ್ನು ಕಳಿಸುತ್ತಿದ್ದಾರೆ. ಸಿಗ್ನಲ್ ಉಲ್ಲಂಘನೆ ಅಥವಾ ಬೇರೊಂದು ಸಂದರ್ಭದಲ್ಲಿ ಟ್ರಾಫಿಕ್ ಪೊಲೀಸರ ಕೈಗೆ ಸಿಕ್ಕಿ ಬೀಳುವ ವಾಹನ ಸವಾರರು ಹಳೆಯ ತಪ್ಪುಗಳ ದಂಡವನ್ನೂ ಸೇರಿಸಿ ಕಟ್ಟಬೇಕಾಗುತ್ತದೆ. ‘ದಚ್ಚು ದಿವು’ ಇನ್​ಸ್ಟಾಗ್ರಾಂ ಅಕೌಂಟ್​ನಲ್ಲಿ ರೀಲ್ಸ್​ ಮಾಡುತ್ತಿದ್ದವರಿಗೆ ಪೊಲೀಸರು ಇದೇ ರೀತಿ ದಂಡದ ಮೂಲಕ ಚುರುಕು ಮುಟ್ಟಿಸಿದ್ದರು.

ಪೊಲೀಸರ ಕ್ರಮದಿಂದ ತಪ್ಪಿಸಿಕೊಳ್ಳಲು ರೀಲ್ಸ್​ ಪುಂಡರು ಇದೀಗ ಮತ್ತೊಂದು ಉಪಾಯ ಕಂಡುಕೊಂಡಿದ್ದಾರೆ. ಅದೇ ‘ದಚ್ಚು ದಿವು’ ಇನ್​ಸ್ಟಾಗ್ರಾಂ ಅಕೌಂಟ್​ನಲ್ಲಿ ಹಲವು ರೀಲ್ಸ್​ಗಳು ಪತ್ತೆಯಾಗಿವೆ. ಸಂಚಾರ ಪೊಲೀಸರಿಗೆ ಈ ಹಿಂದೆ ₹ 17,500 ದಂಡವನ್ನು ಪಾವತಿಸಿದ್ದರು. ಆದರೆ ಈಗ ಹೊಸ ಉಪಾಯದಿಂದ ರೀಲ್ಸ್​ ಮಾಡುತ್ತಿದ್ದು, ನಂಬರ್ ಪ್ಲೇಟ್ ಕಾಣಿಸದ ರೀತಿಯಲ್ಲಿ ಎಚ್ಚರ ವಹಿಸುತ್ತಿದ್ದಾರೆ. ಇದನ್ನು ಮಟ್ಟ ಹಾಕುವುದು ಹೇಗೆ ಎಂದು ಪೊಲೀಸರು ಚಿಂತನೆ ನಡೆಸಿದ್ದಾರೆ.

Published On - 1:52 pm, Sun, 16 October 22

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್