AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಜನೋತ್ಸವ ಸ್ಪರ್ಧೆಗಳ ಬಹುಮಾನ ಮೊತ್ತ ಹೆಚ್ಚಳ: ವೈಯಕ್ತಿಕ ಸ್ಪರ್ಧೆಗೆ 15 ಸಾವಿರ, ಗುಂಪು ಸ್ಪರ್ಧೆಗೆ 20 ಸಾವಿರ ಮೊದಲ ಬಹುಮಾನ

ವೈಯಕ್ತಿಕ ಸ್ಪರ್ಧೆಗಳಿಗೆ ಮೊದಲ ಬಹುಮಾನ ₹ 15 ಸಾವಿರ, ಎರಡನೇ ಬಹುಮಾನ ₹ 10 ಸಾವಿರ, ಮೂರನೇ ಬಹುಮಾನ ₹ 5 ಸಾವಿರ ನಿಗದಿಪಡಿಸಲಾಗಿದೆ

ಯುವಜನೋತ್ಸವ ಸ್ಪರ್ಧೆಗಳ ಬಹುಮಾನ ಮೊತ್ತ ಹೆಚ್ಚಳ: ವೈಯಕ್ತಿಕ ಸ್ಪರ್ಧೆಗೆ 15 ಸಾವಿರ, ಗುಂಪು ಸ್ಪರ್ಧೆಗೆ 20 ಸಾವಿರ ಮೊದಲ ಬಹುಮಾನ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ನಾರಾಯಣಗೌಡ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Feb 03, 2022 | 3:58 PM

Share

ಬೆಂಗಳೂರು: ಯುವ ಜನೋತ್ಸವ ಸ್ಪರ್ಧೆಗಳ ವಿಜೇತರ ಬಹುಮಾನ ಮೊತ್ತವನ್ನು ಹೆಚ್ಚಿಸಿ ಕರ್ನಾಟಕ ಸರ್ಕಾರ (Govt of Karnataka) ಆದೇಶ ಹೊರಡಿಸಿದೆ. ವೈಯಕ್ತಿಕ ಮತ್ತು ಗುಂಪು ಸ್ಪರ್ಧೆಗಳ ವಿಜೇತರಿಗೆ ನೀಡಲಾಗುವ ಬಹುಮಾನದ ಮೊತ್ತ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವೈಯಕ್ತಿಕ ಸ್ಪರ್ಧೆಗಳಿಗೆ ಮೊದಲ ಬಹುಮಾನ ₹ 15 ಸಾವಿರ, ಎರಡನೇ ಬಹುಮಾನ ₹ 10 ಸಾವಿರ, ಮೂರನೇ ಬಹುಮಾನ ₹ 5 ಸಾವಿರ ನಿಗದಿಪಡಿಸಲಾಗಿದೆ. ಗುಂಪುಗಳಿಗೆ ನೀಡುವ ಮೊದಲ ಬಹುಮಾನ ₹ 25 ಸಾವಿರ, ಎರಡನೇ ಬಹುಮಾನ ₹ 15 ಸಾವಿರ ರೂಪಾಯಿಗೆ ಹೆಚ್ಚಳ ಮಾಡಿ ಸರ್ಕಾರವು ಆದೇಶ ಹೊರಡಿಸಿದೆ. ಯುವ ಸಬಲೀಕರಣ ಇಲಾಖೆ ಸಚಿವ ನಾರಾಯಣ ಗೌಡ ಅವರ ಸೂಚನೆ ಮೇರೆಗೆ ಬಹುಮಾನಗಳ ಮೊತ್ತ ಪರಿಷ್ಕರಿಸಲಾಗಿದೆ.

ಗ್ರಾಮೀಣ ಮಟ್ಟದಿಂದಲೇ ಸಬಲೀಕರಣಕ್ಕೆ ಯೋಜನೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಾರ್ಯಕ್ರಮಗಳನ್ನು ಗ್ರಾಮೀಣ ಮಟ್ಟದಿಂದಲೇ ಯಶಸ್ವಿಗೊಳಿಸಲು ಗ್ರಾಮೀಣಾಭಿವೃದ್ಧಿ ಇಲಾಖೆಯ ಜೊತೆಗೂಡಿ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಸಚಿವ ನಾರಾಯಣಗೌಡ ಹೇಳಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳು ನೇರವಾಗಿ ಪಂಚಾಯತ್ ರಾಜ್ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡುತ್ತಿವೆ. ಮುಂದಿನ ದಿನಗಳಲ್ಲಿ ಸ್ಥಳೀಯ ಆಡಳಿತ ಸಂಸ್ಥೆಗಳ ಸಹಯೋಗದಲ್ಲಿ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

ಸ್ಥಳೀಯರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳ ಸಹಭಾಗಿತ್ವದಲ್ಲಿ ಮುಂದಿನ ದಿನಗಳಲ್ಲಿ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಗ್ರಾಮೀಣ ಕ್ರೀಡೋತ್ಸವಗಳನ್ನು ಆಯೋಜಿಸುವ ಮೂಲಕ ದೇಸೀ ಕಲೆಗಳು ಹಾಗೂ ಜಾನಪದ ಕ್ರೀಡೆಗಳಿಗೆ ಉತ್ತೇಜನ ನೀಡಲಾಗುವುದು. ಶಾಲೆಗಾಗಿ ಗಣನೀಯ ಕೊಡುಗೆ ನೀಡಿದ ಯುವ ಸಂಘಗಳನ್ನು ಗುರುತಿಸಿ ಪುರಸ್ಕರಿಸಲು ‘ನಮ್ಮೂರ ಶಾಲೆಗೆ ನಮ್ಮ ಯುವಜನರು’ ಕಾರ್ಯಕ್ರಮ ರೂಪಿಸಲಾಗಿದೆ ಎಂದರು. ಇದರ ಜೊತೆಗೆ ಧಾರ್ಮಿಕ ಸಾಮರಸ್ಯಕ್ಕಾಗಿಯೂ ಕೆಲ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: Fact Check: ಕೊರೊನಾ ಚಿಕಿತ್ಸೆಗೆ ಸರ್ಕಾರದಿಂದ ಯುವಜನರಿಗೆ ರೂ. 4000 ಕೊಡ್ತಾರಂತೆ! ಇದರಲ್ಲಿ ನಿಜ ಇದೆಯಾ? ಇದನ್ನೂ ಓದಿ: Gold investments: ಭಾರತದ ಯುವಜನತೆಗೆ ಚಿನ್ನದ ಹೂಡಿಕೆ ಮೇಲಿನ ವ್ಯಾಮೋಹ ಉಳಿದಿದೆಯಾ?

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!