AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋದಲ್ಲಿ ಫ್ರೀ ಪ್ರಯಾಣ ಹೇಗೆಂದು ತೋರಿಸಿಕೊಟ್ಟ ವಿದೇಶಿ ಯೂಟ್ಯೂಬರ್ ವಿಡಿಯೋ ವೈರಲ್, ಕೇಸ್ ದಾಖಲಿಸಲು ಮುಂದಾದ BMRCL

ಮೆಟ್ರೋದಲ್ಲಿ ಪ್ರಯಾಣಿಸಲು ಟೋಕನ್​ ಅಥವಾ ಮೆಟ್ರೋ ಕಾರ್ಡ್‌ ​ಕಡ್ಡಾಯವಾಗಿದೆ. ಆದರೆ ಇಲ್ಲೊಬ್ಬ ವಿದೇಶಿ ಯೂಟ್ಯೂಬರ್ ಉಚಿತವಾಗಿ ಮೆಟ್ರೋ ಪ್ರಯಾಣ ಮಾಡುವ ಬಗ್ಗೆ ವಿಡಿಯೋ ಮಾಡಿ ವೈರಲ್ ಆಗಿದ್ದಾನೆ. ಹಾಗೂ ಬಿಎಂಆರ್​ಸಿಎಲ್ ಆಕ್ರೋಶಕ್ಕೆ ಕಾರಣನಾಗಿದ್ದಾನೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಎಂಆರ್‌ಸಿಎಲ್‌, ಯೂಟ್ಯೂಬರ್ ವಿರುದ್ಧ ಕ್ರಿಮಿನಲ್‌ ಕೇಸ್‌ ಹಾಕುವುದಾಗಿ ಹೇಳಿದೆ.

ಮೆಟ್ರೋದಲ್ಲಿ ಫ್ರೀ ಪ್ರಯಾಣ ಹೇಗೆಂದು ತೋರಿಸಿಕೊಟ್ಟ ವಿದೇಶಿ ಯೂಟ್ಯೂಬರ್ ವಿಡಿಯೋ ವೈರಲ್, ಕೇಸ್ ದಾಖಲಿಸಲು ಮುಂದಾದ BMRCL
ಫಿಡಿಯಾಸ್ ಪನಾಯೊಟೌ
ಆಯೇಷಾ ಬಾನು
ಆಯೇಷಾ ಬಾನು|

Updated on: Sep 24, 2023 | 3:06 PM

Share

ಬೆಂಗಳೂರು, ಸೆ.24: ಬಿಲಿಯನೇರ್ ಎಲೋನ್ ಮಸ್ಕ್ ಅವರನ್ನು ಅಪ್ಪಿಕೊಂಡ ನಂತರ ಫೇಮರ್​ ಆಗಿದ್ದ ಯೂಟ್ಯೂಬರ್ ಮತ್ತು ಸಾಮಾಜಿಕ ಮಾಧ್ಯಮದ ಕಾಮಿಡಿ ಸ್ಟಾರ್ ಫಿಡಿಯಾಸ್ ಪನಾಯೊಟೌ (Fidias Panayiotou) ಅವರು ಈಗ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಹಾಗೂ ಬಿಎಂಆರ್​ಸಿಎಲ್ (BMRCL) ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಟ್ರಾಫಿಕ್​​ ಕಿರಿಕಿರಿ ಇಲ್ಲದೆ ಬಹುಬೇಗ ಪ್ರಯಾಣಿಸುವ ಉದ್ದೇಶದಿಂದ ಸಾವಿರಾರು ಜನರು ಮೆಟ್ರೋ (Namma Metro) ಮೊರೆ ಹೋಗುತ್ತಾರೆ. ಮೆಟ್ರೋದಲ್ಲಿ ಪ್ರಯಾಣಿಸಲು ಟೋಕನ್​ ಅಥವಾ ಮೆಟ್ರೋ ಕಾರ್ಡ್‌ ​ಕಡ್ಡಾಯವಾಗಿದೆ. ಆದರೆ ಇಲ್ಲೊಬ್ಬ ವಿದೇಶಿ ಯೂಟ್ಯೂಬರ್ ಉಚಿತವಾಗಿ ಮೆಟ್ರೋ ಪ್ರಯಾಣ ಮಾಡುವ ಬಗ್ಗೆ ವಿಡಿಯೋ ಮಾಡಿ ವೈರಲ್ ಆಗಿದ್ದಾನೆ.

ಯೂಟ್ಯೂಬರ್ ಮತ್ತು ಸಾಮಾಜಿಕ ಮಾಧ್ಯಮದ ಕಾಮಿಡಿ ಸ್ಟಾರ್ ಫಿಡಿಯಾಸ್ ಪನಾಯೊಟೌ ಅವರು ಇತ್ತೀಚೆಗೆ ಯಾವುದೇ ಟಿಕೆಟ್‌ ಅಥವಾ ಮೆಟ್ರೋ ಕಾರ್ಡ್‌ ಇಲ್ಲದೆ ಬೆಂಗಳೂರು ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ. ಹಾಗೂ ಉಚಿತ ಮೆಟ್ರೋ ಪ್ರಯಾಣ ಮಾಡುವುದು ಹೇಗೆ ಎಂಬ ಬಗ್ಗೆ ವಿಡಿಯೋ ಅಪ್ಲೋಡ್ ಮಾಡಿದ್ದಾರೆ. ಇವರ ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಎಂಆರ್‌ಸಿಎಲ್‌, ಯೂಟ್ಯೂಬರ್ ವಿರುದ್ಧ ಕ್ರಿಮಿನಲ್‌ ಕೇಸ್‌ ಹಾಕುವುದಾಗಿ ಹೇಳಿದೆ.

ಇದನ್ನೂ ಓದಿ: ಬೈಯ್ಯಪ್ಪನಹಳ್ಳಿಯಿಂದ ಕೆಆರ್​ ಪುರಂ ನಡುವೆ ಮೆಟ್ರೋ ಮಾರ್ಗ ಸುರಕ್ಷತಾ ತಪಾಸಣೆ ಯಶಸ್ವಿ: ಬಿಎಂಆರ್​ಸಿಎಲ್

2.26 ಮಿಲಿಯನ್ ಚಂದಾದಾರರನ್ನು ಹೊಂದಿರುವ ಫಿಡಿಯಾಸ್ ಪನಾಯೊಟೌ ಅವರು, ಭಾರತದಲ್ಲಿ ಮೆಟ್ರೋವನ್ನು ಉಚಿತವಾಗಿ ಪಡೆಯುವುದು ಹೇಗೆ ಎಂದು ನಾನು ನಿಮಗೆ ಕಲಿಸುತ್ತೇನೆಂದು ವಿಡಿಯೋ ಮಾಡಿದ್ದಾರೆ. ಮೆಟ್ರೋ ಎಂಟ್ರಿ ಗೇಟ್​ ಓಪನ್ ಆಗಲು ಯಾವುದೇ ಕಾರ್ಡ್ ಬಳಸದೆ ಅಥವಾ ಕಾಯಿನ್ ಇಲ್ಲದೆ ಗೇಟ್ ಅನ್ನು ಜಿಗಿದು ಪ್ಲಾಟ್‌ಫಾರ್ಮ್‌ಗೆ ಪ್ರವೇಶ ಮಾಡಿದ್ದಾರೆ. ಇದೆಲ್ಲವನ್ನು ವಿಡಿಯೋ ಮಾಡಿ ‘ಭಾರತೀಯ ಮೆಟ್ರೋಲ್ಲಿ ಹೇಗೆ ನುಸುಳುವುದು’ ಎಂಬ ಶೀರ್ಷಿಕೆಯಡಿ ವಿಡಿಯೋವನ್ನು ಅಪ್ಲೋಡ್ ಮಾಡಿದ್ದಾರೆ. ಈ ವಿಡಿಯೋಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ.

View this post on Instagram

A post shared by Fidias Panayiotou (@fidias0)

ಮತ್ತೊಂದೆಡೆ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಿಎಂಆರ್‌ಸಿಎಲ್‌ನ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಪ್ರತಿಕ್ರಿಯೆ ನೀಡಿದ್ದು, ಒಬ್ಬ ವ್ಯಕ್ತಿಯು ಟಿಕೆಟ್ ಇಲ್ಲದೆ ಪ್ಲಾಟ್‌ಫಾರ್ಮ್‌ಗೆ ಪ್ರವೇಶಿಸಿ ಮೆಟ್ರೋದಲ್ಲಿ ಪ್ರಯಾಣಿಸುವ ವಿಡಿಯೋವನ್ನು ನಾನು ನೋಡಿದ್ದೇನೆ. ಅಂತಹ ನಡವಳಿಕೆಯು ಸ್ವೀಕಾರಾರ್ಹವಲ್ಲ. ಆ ವ್ಯಕ್ತಿಯ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ನಾನು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಈ ವಿಡಿಯೋ ಕ್ಲಿಪ್‌ನಲ್ಲಿ ಫಿಡಿಯಾಸ್ ಪ್ರಯಾಣಿಕರು ಪ್ಲಾಟ್‌ಫಾರ್ಮ್‌ಗೆ ಪ್ರವೇಶ ಪಡೆಯುವ ಮೊದಲು ಮತ್ತು ನಿಲ್ದಾಣದಿಂದ ನಿರ್ಗಮಿಸುವ ಮೊದಲು ತೆರವುಗೊಳಿಸಬೇಕಾದ ಗೇಟ್ ಅನ್ನು ಜಿಗಿಯುವುದನ್ನು ಕಾಣಬಹುದು. ಸ್ಮಾರ್ಟ್‌ಕಾರ್ಡ್ ಅಥವಾ ಟೋಕನ್ ಅನ್ನು ಟ್ಯಾಪ್ ಮಾಡದೆ ಪ್ರಯಾಣಿಸಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ