AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮೆಟ್ರೋ ರೈಲು, ಎಸ್ಕಲೇಟರ್​​ ಮೇಲೆ ಯುವಕನಿಗೆ ಮೂರ್ಛೆ! ಪ್ರಾಂಕ್ ವಿಡಿಯೋಗೆ ಬೆಚ್ಚಿಬಿದ್ದ ಪ್ರಯಾಣಿಕರು

ಲೈಕ್ಸ್, ಕಮೆಂಟ್ಸ್​ಗಾಗಿ ಯೂಟ್ಯೂಬರ್​ಗಳು, ರೀಲ್ಸ್ ಸ್ಟಾರ್​ಗಳು ಪ್ರಾಂಕ್ ವಿಡಿಯೋಗಳನ್ನು ಮಾಡುವುದು ನೋಡಬಹುದು. ಒಂದು ರೀತಿಯಲ್ಲಿ ಇದು ಸಾರ್ವಜನಿಕರನ್ನು ಭೀತಿಗೊಳಿಸುವ ವಿಡಿಯೋ ಕೂಡ ಹೌದು. ಇದೀಗ, ಬೆಂಗಳೂರು ಮೆಟ್ರೋ ರೈಲು ಹಾಗೂ ಎಸ್ಕಲೇಟರ್​ನಲ್ಲಿ ಮೂರ್ಛೆ ಬಂದವರಂತೆ ನಟಿಸಿ ಪ್ರಯಾಣಿಕರನ್ನು ಭೀತಿಗೊಳಿಸಿದ ಯುವಕನ ವಿಡಿಯೋ ವೈರಲ್ ಆಗುತ್ತಿದೆ.

ಕಿರಣ್​ ಸೂರ್ಯ
| Edited By: Rakesh Nayak Manchi|

Updated on:Oct 06, 2023 | 1:06 PM

Share

ಬೆಂಗಳೂರು, ಅ.6: ಲೈಕ್ಸ್, ಕಮೆಂಟ್ಸ್​ಗಾಗಿ ಯೂಟ್ಯೂಬರ್​ಗಳು, ರೀಲ್ಸ್ ಸ್ಟಾರ್​ಗಳು ಪ್ರಾಂಕ್ ವಿಡಿಯೋಗಳನ್ನು ಮಾಡುವುದು ನೋಡಬಹುದು. ಒಂದು ರೀತಿಯಲ್ಲಿ ಇದು ಸಾರ್ವಜನಿಕರನ್ನು ಭೀತಿಗೊಳಿಸುವ ವಿಡಿಯೋ ಕೂಡ ಹೌದು. ಇದೀಗ, ಬೆಂಗಳೂರು ಮೆಟ್ರೋ (Bengaluru Metro) ರೈಲು ಹಾಗೂ ಎಸ್ಕಲೇಟರ್​ನಲ್ಲಿ ಯುವಕನೊಬ್ಬ ಮೂರ್ಛೆ ಬಂದವರಂತೆ ನಟಿಸಿ ಪ್ರಯಾಣಿಕರನ್ನು ಭೀತಿಗೊಳಿಸಿದ ವಿಡಿಯೋ ವೈರಲ್ ಆಗುತ್ತಿದೆ.

ವಿಜಯನಗರದಿಂದ ಮೆಜೆಸ್ಟಿಕ್​ ಕಡೆಗೆ ಬರುವ ನೇರಳೆ ಬಣ್ಣದ ಮೆಟ್ರೋ ರೈಲಿನಲ್ಲಿ ಯೂಟ್ಯೂಬರ್ ಹುಚ್ಚಾಟಕ್ಕೆ ಪ್ರಯಾಣಿಕರು ಗಾಬರಿಗೊಂಡಿದ್ದು, ನಿಲ್ದಾಣದ ಎಸ್ಕಲೇಟರ್​ನಲ್ಲೂ ಮೂರ್ಛೆ ಬಂದಂತೆ ನಟಿಸಿ ಭೀತಿಗೊಳಿಸಿದ್ದಾನೆ.

ಒಂದು ವಿಡಿಯೋದಲ್ಲಿ ನೋಡುವಂತೆ, ಚಲಿಸುತ್ತಿರುವ ಮೆಟ್ರೋದಲ್ಲಿ ಮೂರ್ಛೆ ಬಂದವರಂತೆ ಪ್ರಾಂಕ್ ಮಾಡಲಾಗಿದೆ. ಮತ್ತೊಂದು ವೀಡಿಯೋದಲ್ಲಿ, ಎಸ್ಕಲೇಟರ್​ನಲ್ಲಿ ಬರುವಾಗ ವಯಸ್ಸಾದ ವೃದ್ಧೆಯ ಮುಂದೆ ಪ್ರಾಂಕ್ ಮಾಡಿದ್ದು, ಈ ವೇಳೆ ವೃದ್ಧೆ ಗಾಬರಿಗೊಳ್ಳುವುದನ್ನು ಕಾಣಬಹುದು.

ಇದನ್ನೂ ಓದಿ: ಬೆಂಗಳೂರು ಮೆಟ್ರೋದಲ್ಲಿ ಆಹಾರ ಸೇವಿಸಿದ ಪ್ರಯಾಣಿಕ, ಪ್ರಕರಣ ದಾಖಲಿಸಿ ದಂಡ ವಸೂಲಿ ಮಾಡಿದ BMRCL

ಪ್ರಾಂಕ್ ಪ್ರಜ್ಜು ಎಂಬ ಯುವಕನಿಂದ ಈ ಹುಚ್ಚಾಟ ನಡೆಸಿದ್ದು, ತನ್ನದೇ ಇನ್​ಸ್ಟಾಗ್ರಾಮ್​ನಲ್ಲಿ ವೀಡಿಯೋ ಹಂಚಿಕೊಂಡಿದ್ದಾನೆ. ಸದ್ಯ ವಿಡಿಯೋ ಆಧರಿಸಿ ಬಿಎಂಆರ್​ಸಿಎಲ್ ಅಧಿಕಾರಿಗಳು ಯುವಕನ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ನಮ್ಮ ಮೆಟ್ರೋದಲ್ಲಿ ಇತ್ತೀಚೆಗೆ ಒಂದು ಪ್ರಕರಣ ನಡೆದಿತ್ತು. ಮೆಟ್ರೋ ನಿಲ್ದಾಣಕ್ಕೆ ನುಸುಳಿ ಟಿಕೆಟ್ ಇಲ್ಲದೆ ರೈಲಿನಲ್ಲಿ ಪ್ರಯಾಣಿಸಿದ್ದಕ್ಕಾಗಿ ಸೆಪ್ಟೆಂಬರ್ ಕೊನೆಯ ವಾರದಲ್ಲಿ ಸೈಪ್ರಸ್ ಮೂಲದ ಯೂಟ್ಯೂಬರ್ ಫಿಡಿಯಾಸ್ ಪನಯೋಟೌ ವಿರುದ್ಧ ಬಿಎಂಆರ್​ಸಿಎಲ್ ಪ್ರಕರಣ ದಾಖಲಿಸಿತ್ತು.

‘ಪ್ರೊಫೆಷನಲ್ ಮಿಸ್ಟೇಕ್ ಮೇಕರ್’ ಎಂಬ ಯೂಟ್ಯೂಬರ್​ನ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಬಿಎಂಆರ್​ಸಿಎಲ್ ಕೆ.ಆರ್.ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:04 pm, Fri, 6 October 23

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್