ಬೆಂಗಳೂರು ಮೆಟ್ರೋ ರೈಲು, ಎಸ್ಕಲೇಟರ್​​ ಮೇಲೆ ಯುವಕನಿಗೆ ಮೂರ್ಛೆ! ಪ್ರಾಂಕ್ ವಿಡಿಯೋಗೆ ಬೆಚ್ಚಿಬಿದ್ದ ಪ್ರಯಾಣಿಕರು

ಲೈಕ್ಸ್, ಕಮೆಂಟ್ಸ್​ಗಾಗಿ ಯೂಟ್ಯೂಬರ್​ಗಳು, ರೀಲ್ಸ್ ಸ್ಟಾರ್​ಗಳು ಪ್ರಾಂಕ್ ವಿಡಿಯೋಗಳನ್ನು ಮಾಡುವುದು ನೋಡಬಹುದು. ಒಂದು ರೀತಿಯಲ್ಲಿ ಇದು ಸಾರ್ವಜನಿಕರನ್ನು ಭೀತಿಗೊಳಿಸುವ ವಿಡಿಯೋ ಕೂಡ ಹೌದು. ಇದೀಗ, ಬೆಂಗಳೂರು ಮೆಟ್ರೋ ರೈಲು ಹಾಗೂ ಎಸ್ಕಲೇಟರ್​ನಲ್ಲಿ ಮೂರ್ಛೆ ಬಂದವರಂತೆ ನಟಿಸಿ ಪ್ರಯಾಣಿಕರನ್ನು ಭೀತಿಗೊಳಿಸಿದ ಯುವಕನ ವಿಡಿಯೋ ವೈರಲ್ ಆಗುತ್ತಿದೆ.

Follow us
| Updated By: Rakesh Nayak Manchi

Updated on:Oct 06, 2023 | 1:06 PM

ಬೆಂಗಳೂರು, ಅ.6: ಲೈಕ್ಸ್, ಕಮೆಂಟ್ಸ್​ಗಾಗಿ ಯೂಟ್ಯೂಬರ್​ಗಳು, ರೀಲ್ಸ್ ಸ್ಟಾರ್​ಗಳು ಪ್ರಾಂಕ್ ವಿಡಿಯೋಗಳನ್ನು ಮಾಡುವುದು ನೋಡಬಹುದು. ಒಂದು ರೀತಿಯಲ್ಲಿ ಇದು ಸಾರ್ವಜನಿಕರನ್ನು ಭೀತಿಗೊಳಿಸುವ ವಿಡಿಯೋ ಕೂಡ ಹೌದು. ಇದೀಗ, ಬೆಂಗಳೂರು ಮೆಟ್ರೋ (Bengaluru Metro) ರೈಲು ಹಾಗೂ ಎಸ್ಕಲೇಟರ್​ನಲ್ಲಿ ಯುವಕನೊಬ್ಬ ಮೂರ್ಛೆ ಬಂದವರಂತೆ ನಟಿಸಿ ಪ್ರಯಾಣಿಕರನ್ನು ಭೀತಿಗೊಳಿಸಿದ ವಿಡಿಯೋ ವೈರಲ್ ಆಗುತ್ತಿದೆ.

ವಿಜಯನಗರದಿಂದ ಮೆಜೆಸ್ಟಿಕ್​ ಕಡೆಗೆ ಬರುವ ನೇರಳೆ ಬಣ್ಣದ ಮೆಟ್ರೋ ರೈಲಿನಲ್ಲಿ ಯೂಟ್ಯೂಬರ್ ಹುಚ್ಚಾಟಕ್ಕೆ ಪ್ರಯಾಣಿಕರು ಗಾಬರಿಗೊಂಡಿದ್ದು, ನಿಲ್ದಾಣದ ಎಸ್ಕಲೇಟರ್​ನಲ್ಲೂ ಮೂರ್ಛೆ ಬಂದಂತೆ ನಟಿಸಿ ಭೀತಿಗೊಳಿಸಿದ್ದಾನೆ.

ಒಂದು ವಿಡಿಯೋದಲ್ಲಿ ನೋಡುವಂತೆ, ಚಲಿಸುತ್ತಿರುವ ಮೆಟ್ರೋದಲ್ಲಿ ಮೂರ್ಛೆ ಬಂದವರಂತೆ ಪ್ರಾಂಕ್ ಮಾಡಲಾಗಿದೆ. ಮತ್ತೊಂದು ವೀಡಿಯೋದಲ್ಲಿ, ಎಸ್ಕಲೇಟರ್​ನಲ್ಲಿ ಬರುವಾಗ ವಯಸ್ಸಾದ ವೃದ್ಧೆಯ ಮುಂದೆ ಪ್ರಾಂಕ್ ಮಾಡಿದ್ದು, ಈ ವೇಳೆ ವೃದ್ಧೆ ಗಾಬರಿಗೊಳ್ಳುವುದನ್ನು ಕಾಣಬಹುದು.

ಇದನ್ನೂ ಓದಿ: ಬೆಂಗಳೂರು ಮೆಟ್ರೋದಲ್ಲಿ ಆಹಾರ ಸೇವಿಸಿದ ಪ್ರಯಾಣಿಕ, ಪ್ರಕರಣ ದಾಖಲಿಸಿ ದಂಡ ವಸೂಲಿ ಮಾಡಿದ BMRCL

ಪ್ರಾಂಕ್ ಪ್ರಜ್ಜು ಎಂಬ ಯುವಕನಿಂದ ಈ ಹುಚ್ಚಾಟ ನಡೆಸಿದ್ದು, ತನ್ನದೇ ಇನ್​ಸ್ಟಾಗ್ರಾಮ್​ನಲ್ಲಿ ವೀಡಿಯೋ ಹಂಚಿಕೊಂಡಿದ್ದಾನೆ. ಸದ್ಯ ವಿಡಿಯೋ ಆಧರಿಸಿ ಬಿಎಂಆರ್​ಸಿಎಲ್ ಅಧಿಕಾರಿಗಳು ಯುವಕನ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ನಮ್ಮ ಮೆಟ್ರೋದಲ್ಲಿ ಇತ್ತೀಚೆಗೆ ಒಂದು ಪ್ರಕರಣ ನಡೆದಿತ್ತು. ಮೆಟ್ರೋ ನಿಲ್ದಾಣಕ್ಕೆ ನುಸುಳಿ ಟಿಕೆಟ್ ಇಲ್ಲದೆ ರೈಲಿನಲ್ಲಿ ಪ್ರಯಾಣಿಸಿದ್ದಕ್ಕಾಗಿ ಸೆಪ್ಟೆಂಬರ್ ಕೊನೆಯ ವಾರದಲ್ಲಿ ಸೈಪ್ರಸ್ ಮೂಲದ ಯೂಟ್ಯೂಬರ್ ಫಿಡಿಯಾಸ್ ಪನಯೋಟೌ ವಿರುದ್ಧ ಬಿಎಂಆರ್​ಸಿಎಲ್ ಪ್ರಕರಣ ದಾಖಲಿಸಿತ್ತು.

‘ಪ್ರೊಫೆಷನಲ್ ಮಿಸ್ಟೇಕ್ ಮೇಕರ್’ ಎಂಬ ಯೂಟ್ಯೂಬರ್​ನ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಬಿಎಂಆರ್​ಸಿಎಲ್ ಕೆ.ಆರ್.ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:04 pm, Fri, 6 October 23

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ