AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮೆಟ್ರೋ ರೈಲು, ಎಸ್ಕಲೇಟರ್​​ ಮೇಲೆ ಯುವಕನಿಗೆ ಮೂರ್ಛೆ! ಪ್ರಾಂಕ್ ವಿಡಿಯೋಗೆ ಬೆಚ್ಚಿಬಿದ್ದ ಪ್ರಯಾಣಿಕರು

ಲೈಕ್ಸ್, ಕಮೆಂಟ್ಸ್​ಗಾಗಿ ಯೂಟ್ಯೂಬರ್​ಗಳು, ರೀಲ್ಸ್ ಸ್ಟಾರ್​ಗಳು ಪ್ರಾಂಕ್ ವಿಡಿಯೋಗಳನ್ನು ಮಾಡುವುದು ನೋಡಬಹುದು. ಒಂದು ರೀತಿಯಲ್ಲಿ ಇದು ಸಾರ್ವಜನಿಕರನ್ನು ಭೀತಿಗೊಳಿಸುವ ವಿಡಿಯೋ ಕೂಡ ಹೌದು. ಇದೀಗ, ಬೆಂಗಳೂರು ಮೆಟ್ರೋ ರೈಲು ಹಾಗೂ ಎಸ್ಕಲೇಟರ್​ನಲ್ಲಿ ಮೂರ್ಛೆ ಬಂದವರಂತೆ ನಟಿಸಿ ಪ್ರಯಾಣಿಕರನ್ನು ಭೀತಿಗೊಳಿಸಿದ ಯುವಕನ ವಿಡಿಯೋ ವೈರಲ್ ಆಗುತ್ತಿದೆ.

Kiran Surya
| Edited By: |

Updated on:Oct 06, 2023 | 1:06 PM

Share

ಬೆಂಗಳೂರು, ಅ.6: ಲೈಕ್ಸ್, ಕಮೆಂಟ್ಸ್​ಗಾಗಿ ಯೂಟ್ಯೂಬರ್​ಗಳು, ರೀಲ್ಸ್ ಸ್ಟಾರ್​ಗಳು ಪ್ರಾಂಕ್ ವಿಡಿಯೋಗಳನ್ನು ಮಾಡುವುದು ನೋಡಬಹುದು. ಒಂದು ರೀತಿಯಲ್ಲಿ ಇದು ಸಾರ್ವಜನಿಕರನ್ನು ಭೀತಿಗೊಳಿಸುವ ವಿಡಿಯೋ ಕೂಡ ಹೌದು. ಇದೀಗ, ಬೆಂಗಳೂರು ಮೆಟ್ರೋ (Bengaluru Metro) ರೈಲು ಹಾಗೂ ಎಸ್ಕಲೇಟರ್​ನಲ್ಲಿ ಯುವಕನೊಬ್ಬ ಮೂರ್ಛೆ ಬಂದವರಂತೆ ನಟಿಸಿ ಪ್ರಯಾಣಿಕರನ್ನು ಭೀತಿಗೊಳಿಸಿದ ವಿಡಿಯೋ ವೈರಲ್ ಆಗುತ್ತಿದೆ.

ವಿಜಯನಗರದಿಂದ ಮೆಜೆಸ್ಟಿಕ್​ ಕಡೆಗೆ ಬರುವ ನೇರಳೆ ಬಣ್ಣದ ಮೆಟ್ರೋ ರೈಲಿನಲ್ಲಿ ಯೂಟ್ಯೂಬರ್ ಹುಚ್ಚಾಟಕ್ಕೆ ಪ್ರಯಾಣಿಕರು ಗಾಬರಿಗೊಂಡಿದ್ದು, ನಿಲ್ದಾಣದ ಎಸ್ಕಲೇಟರ್​ನಲ್ಲೂ ಮೂರ್ಛೆ ಬಂದಂತೆ ನಟಿಸಿ ಭೀತಿಗೊಳಿಸಿದ್ದಾನೆ.

ಒಂದು ವಿಡಿಯೋದಲ್ಲಿ ನೋಡುವಂತೆ, ಚಲಿಸುತ್ತಿರುವ ಮೆಟ್ರೋದಲ್ಲಿ ಮೂರ್ಛೆ ಬಂದವರಂತೆ ಪ್ರಾಂಕ್ ಮಾಡಲಾಗಿದೆ. ಮತ್ತೊಂದು ವೀಡಿಯೋದಲ್ಲಿ, ಎಸ್ಕಲೇಟರ್​ನಲ್ಲಿ ಬರುವಾಗ ವಯಸ್ಸಾದ ವೃದ್ಧೆಯ ಮುಂದೆ ಪ್ರಾಂಕ್ ಮಾಡಿದ್ದು, ಈ ವೇಳೆ ವೃದ್ಧೆ ಗಾಬರಿಗೊಳ್ಳುವುದನ್ನು ಕಾಣಬಹುದು.

ಇದನ್ನೂ ಓದಿ: ಬೆಂಗಳೂರು ಮೆಟ್ರೋದಲ್ಲಿ ಆಹಾರ ಸೇವಿಸಿದ ಪ್ರಯಾಣಿಕ, ಪ್ರಕರಣ ದಾಖಲಿಸಿ ದಂಡ ವಸೂಲಿ ಮಾಡಿದ BMRCL

ಪ್ರಾಂಕ್ ಪ್ರಜ್ಜು ಎಂಬ ಯುವಕನಿಂದ ಈ ಹುಚ್ಚಾಟ ನಡೆಸಿದ್ದು, ತನ್ನದೇ ಇನ್​ಸ್ಟಾಗ್ರಾಮ್​ನಲ್ಲಿ ವೀಡಿಯೋ ಹಂಚಿಕೊಂಡಿದ್ದಾನೆ. ಸದ್ಯ ವಿಡಿಯೋ ಆಧರಿಸಿ ಬಿಎಂಆರ್​ಸಿಎಲ್ ಅಧಿಕಾರಿಗಳು ಯುವಕನ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ನಮ್ಮ ಮೆಟ್ರೋದಲ್ಲಿ ಇತ್ತೀಚೆಗೆ ಒಂದು ಪ್ರಕರಣ ನಡೆದಿತ್ತು. ಮೆಟ್ರೋ ನಿಲ್ದಾಣಕ್ಕೆ ನುಸುಳಿ ಟಿಕೆಟ್ ಇಲ್ಲದೆ ರೈಲಿನಲ್ಲಿ ಪ್ರಯಾಣಿಸಿದ್ದಕ್ಕಾಗಿ ಸೆಪ್ಟೆಂಬರ್ ಕೊನೆಯ ವಾರದಲ್ಲಿ ಸೈಪ್ರಸ್ ಮೂಲದ ಯೂಟ್ಯೂಬರ್ ಫಿಡಿಯಾಸ್ ಪನಯೋಟೌ ವಿರುದ್ಧ ಬಿಎಂಆರ್​ಸಿಎಲ್ ಪ್ರಕರಣ ದಾಖಲಿಸಿತ್ತು.

‘ಪ್ರೊಫೆಷನಲ್ ಮಿಸ್ಟೇಕ್ ಮೇಕರ್’ ಎಂಬ ಯೂಟ್ಯೂಬರ್​ನ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಬಿಎಂಆರ್​ಸಿಎಲ್ ಕೆ.ಆರ್.ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:04 pm, Fri, 6 October 23

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ