AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ ಅಣ್ಣಂಗೆ ಇಷ್ಟು ಫ್ಯಾನ್ಸ್ ಇದಾರೆ ಅಂತಾ ಇವಾಗ ಗೊತ್ತಾಯ್ತು; ಶಾಸಕ ಜಮೀರ್ ಅಹ್ಮದ್ ಸಹೋದರ ಹೇಳಿಕೆ

ಶಾಸಕನ ಮನೆ ಮೇಲೆ ದಾಳಿ ನಡೆಸಿದ್ದಕ್ಕೆ ಬೆಂಬಲಿಗರು ಪ್ರತಿಭಟನೆ ಮಾಡಿದ್ದರು. ಅದರಲ್ಲೂ ಯುವಕನೊಬ್ಬ ದಾಳಿ ಖಂಡಿಸಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ.

ನಮ್ ಅಣ್ಣಂಗೆ ಇಷ್ಟು ಫ್ಯಾನ್ಸ್ ಇದಾರೆ ಅಂತಾ ಇವಾಗ ಗೊತ್ತಾಯ್ತು; ಶಾಸಕ ಜಮೀರ್ ಅಹ್ಮದ್ ಸಹೋದರ ಹೇಳಿಕೆ
ಜಮೀರ್ ಅಹ್ಮದ್ ನಿವಾಸ, ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು
TV9 Web
| Updated By: sandhya thejappa|

Updated on:Jul 06, 2022 | 8:39 AM

Share

ಬೆಂಗಳೂರು: ನಿನ್ನೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ (Zameer Ahmed) ಮನೆ, ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು (ACB Officials) ದಾಳಿ ನಡೆಸಿದ್ದರು. ನಿನ್ನೆ (ಜುಲೈ 5) ಮುಂಜಾನೆ 3 ಗಂಟೆ ಸುಮಾರಿಗೆ ಆಗಮಿಸಿದ್ದ ಅಧಿಕಾರಿಗಳು ಮಹತ್ವದ ದಾಖಲೆಗಳನ್ನ ಕೊಂಡ್ಯೊಯ್ದಿದ್ದಾರೆ. ಶಾಸಕನ ಮನೆ ಮೇಲೆ ದಾಳಿ ನಡೆಸಿದ್ದಕ್ಕೆ ಬೆಂಬಲಿಗರು ಪ್ರತಿಭಟನೆ ಮಾಡಿದ್ದರು. ಅದರಲ್ಲೂ ಯುವಕನೊಬ್ಬ ದಾಳಿ ಖಂಡಿಸಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಮೀರ್ ಅಹ್ಮದ್ ಸಹೋದರ ಶಕೀಲ್ ಅಹ್ಮದ್, ನಮ್ ಅಣ್ಣಂಗೆ ಇಷ್ಟು ಫ್ಯಾನ್ಸ್ ಇದಾರೆ ಅಂತಾ ಇವಾಗ ಗೊತ್ತಾಗಿದೆ. ಈ ರೀತಿ ಆತ್ಮಹತ್ಯೆಗೆ ಯತ್ನಿಸುವುದು ಸರಿಯಲ್ಲ. ಅವರ ಪ್ರೀತಿಗೆ ಚಿರಋಣಿ. ಆದರೆ ಯಾರೂ ಈ ರೀತಿ ಮಾಡಬೇಡಿ. ಈ ಮಾದರಿ ಪ್ರೀತಿ ಬೇಡ ಎಂದರು.

ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಅವರಿಗೆ ಏನೇನು ಬೇಕು ದಾಖಲೆ ಎಲ್ಲಾ ತೆಗೆದುಕೊಂಡು ಹೋಗಿದ್ದಾರೆ. ಇಡಿ ಅಧಿಕಾರಿಗಳು ನಮ್ಮನ್ನ ಕಳಿಸಿದ್ದಾರೆ ಅಂತಾ ಹೇಳಿದ್ದರು. ಕೆಲವೊಂದು ಡಾಕ್ಯುಮೆಂಟ್​ಗಳನ್ನ ಕೇಳಿದ್ದರು. ಅವರು ಕೇಳಿದ್ದ ಎಲ್ಲವನ್ನೂ ಕೊಟ್ಟಿದೀವಿ. ಇಡಿ ಅವರು ಏನೇನು ತಗೊಂಡಿದ್ದರು ಅದೇ ದಾಖಲೆಗಳನ್ನ ಪಡೆದಿದ್ದಾರೆ ಎಂದು ಶಕೀಲ್ ಅಹ್ಮದ್ ತಿಳಿಸಿದ್ದಾರೆ.

ಇದನ್ನೂ ಓದಿ: PM Special Scheme: ಪಿಎಂ ಸ್ಪೆಷಲ್ ಯೋಜನೆ; ವೃದ್ಧರಿಗೆ ಕೈಗೆಟುಕುವ ದರದಲ್ಲಿ ವೈದ್ಯಕೀಯ ಸೌಲಭ್ಯ ನೀಡಲು ಸರ್ಕಾರ ಚಿಂತನೆ

ಇದನ್ನೂ ಓದಿ
Image
International Kissing Day 2022: ಇಂದು ವಿಶ್ವ ಚುಂಬನ ದಿನ; ಮುದ್ದಿಸಿ, ಮುದ್ದು ಮಾಡಿಸಿಕೊಳ್ಳಿ, ಸುಖವಾಗಿರಿ
Image
Chandrashekhar Guruji Murder: ಗುರೂಜಿಗೂ ತನಗೂ ಯಾವುದೇ ಸಂಬಂಧವಿಲ್ಲವೆಂದ ಹಂತಕ ಮಹಾಂತೇಶ್ ಪತ್ನಿ ವನಜಾಕ್ಷಿ
Image
Samantha: ಸಮಂತಾ-ನಾಗ ಚೈತನ್ಯ ವಿಚ್ಛೇದನಕ್ಕೆ ಅಸಲಿ ಕಾರಣ ಬಹಿರಂಗ ಆಗುವ ಸಮಯ ಬಂತಾ? ಹೆಚ್ಚಿತು ಕೌತುಕ
Image
Amavasya: ಅಮಾವಾಸ್ಯೆ ದಿನ ಚಂದ್ರ ಮತ್ತು ಸೂರ್ಯ ಒಂದೇ ವೇಳೆಯಲ್ಲಿ ಉದಯಿಸುತ್ತಾರೆ, ಹೀಗಾಗಿ ಈ ದಿನ ಅನಾಹುತಗಳು ಹೆಚ್ಚು

ಇದು ರಾಜಕೀಯ ಉದ್ದೇಶ: ಜಮೀರ್ ಅವರ ಬಳಿ ಗನ್ ಇದೆ ಲೈಸೆನ್ಸ್ ಗನ್ ಇದೆ. ಹಾಗಾಗಿ ಬುಲೆಟ್ ಸಿಕ್ಕಿದೆ. ಲೈಸೆನ್ಸ್ ಇರುವ ಒಂದು ಗನ್ ಇದೆ. ಎಸಿಬಿ ಅವ್ರು ತುಂಬಾ ಒಳ್ಳೆಯವರು. ಕೋ ಆಪರೇಟ್ ಮಾಡಿದ್ದೇವೆ. ಸೇಲ್ ಡೀಡ್ ಅಗ್ರಿಮೆಂಟ್ ದಾಖಲೆಗಳನ್ನ ಪಡೆದುಕೊಂಡಿದ್ದಾರೆ. ಇದರ ಹಿಂದೆ ರಾಜಕೀಯ ಉದ್ದೇಶವಿದೆ. ಮನೆ ಪೇಪರ್ಸ್, ಇನ್ ಕಮ್‌ಟ್ಯಾಕ್ಸ್ ಪೇಪರ್ಸ್ ತೆಗೆದುಕೊಂಡು ಹೋಗಿದ್ದಾರೆ. ಬ್ಯಾಂಕ್ ಮಾಹಿತಿ ತೆಗೆದುಕೊಂಡು ಹೋಗಿದ್ದಾರೆ. ವಿಚಾರಣೆಗೆ ಬರುವುದಕ್ಕೆ ಹೇಳಿಲ್ಲ. ವಿಚಾರಣೆಗೆ ಕರೆದರೆ ಹೋಗುತ್ತೇವೆ ಎಂದರು.

ಇದನ್ನೂ ಓದಿ: Samantha: ಸಮಂತಾ-ನಾಗ ಚೈತನ್ಯ ವಿಚ್ಛೇದನಕ್ಕೆ ಅಸಲಿ ಕಾರಣ ಬಹಿರಂಗ ಆಗುವ ಸಮಯ ಬಂತಾ? ಹೆಚ್ಚಿತು ಕೌತುಕ

Published On - 8:35 am, Wed, 6 July 22

ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಅರ್ಜೆಂಟೀನಾ ಭೇಟಿ ಫಲಪ್ರದವಾಗಿದೆ: ಪ್ರಧಾನಿ ಮೋದಿ
ಅರ್ಜೆಂಟೀನಾ ಭೇಟಿ ಫಲಪ್ರದವಾಗಿದೆ: ಪ್ರಧಾನಿ ಮೋದಿ
ಫಾಫ್ ಸಿಡಿಲಬ್ಬರದ ಬ್ಯಾಟಿಂಗ್: ಶತಕದಂಚಿನಲ್ಲಿ ನಿವೃತ್ತರಾದ ಡುಪ್ಲೆಸಿಸ್
ಫಾಫ್ ಸಿಡಿಲಬ್ಬರದ ಬ್ಯಾಟಿಂಗ್: ಶತಕದಂಚಿನಲ್ಲಿ ನಿವೃತ್ತರಾದ ಡುಪ್ಲೆಸಿಸ್