AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಣ್ಣು ಮಕ್ಕಳ ಮೇಲಿರುವ ಕಾಳಜಿಯಿಂದ ಹಾಗೆ ಹೇಳಿದ್ದು; ಹಿಜಾಬ್ ಹೇಳಿಕೆ ಕುರಿತು ಕ್ಷಮೆ ಕೇಳಿದ ಜಮೀರ್ ಅಹ್ಮದ್

ಭಾರತೀಯ ಮಹಿಳೆ ಅನಾದಿಕಾಲದಿಂದಲೂ ಶಕ್ತಿ ಸ್ವರೂಪಿನಿ. ಇದಕ್ಕೆ ಯಾವುದೇ ಜಾತಿ, ಧರ್ಮ ಅಡ್ಡ ಬರುವುದಿಲ್ಲ. ನಾಯಕರು ಸಂಕುಚಿತ ಮನೋಭಾವದಿಂದ ಹೊರಬರಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್​ ಸುರ್ಜೇವಾಲ ಟ್ವೀಟ್ ಮಾಡಿದ್ದಾರೆ.

ಹೆಣ್ಣು ಮಕ್ಕಳ ಮೇಲಿರುವ ಕಾಳಜಿಯಿಂದ ಹಾಗೆ ಹೇಳಿದ್ದು; ಹಿಜಾಬ್ ಹೇಳಿಕೆ ಕುರಿತು ಕ್ಷಮೆ ಕೇಳಿದ ಜಮೀರ್ ಅಹ್ಮದ್
ಜಮೀರ್ ಅಹ್ಮದ್​
TV9 Web
| Updated By: ganapathi bhat|

Updated on: Feb 14, 2022 | 10:59 PM

Share

ಬೆಂಗಳೂರು: ಹಿಜಾಬ್ ಧರಿಸದೇ ಹೋದರೆ ಅತ್ಯಾಚಾರಗಳು ಆಗುತ್ತವೆ ಎಂಬ ಬಗ್ಗೆ​ ಹೇಳಿಕೆ ನೀಡಿದ್ದ ಕಾಂಗ್ರೆಸ್ ಶಾಸಕ ಜಮೀರ್​ ಅಹ್ಮದ್​ ಖಾನ್ ತಮ್ಮ ಮಾತಿನ ಕುರಿತು ಕ್ಷಮೆಯಾಚಿಸಿದ್ದಾರೆ. ರಣದೀಪ್​ ಸುರ್ಜೇವಾಲ ಟ್ವೀಟ್​ ಬೆನ್ನಲ್ಲೇ ಜಮೀರ್​​ ಟ್ವಿಟರ್​​ನಲ್ಲಿ ಕ್ಷಮೆ ಕೇಳಿದ್ದಾರೆ. ಯಾರ ಮನಸ್ಸು ನೋಯಿಸುವ ಉದ್ದೇಶದಿಂದ ಹೇಳಿದ್ದಲ್ಲ. ಯಾರಿಗೂ ಅಗೌರವ ತೋರುವ ದುರುದ್ದೇಶದಿಂದ ಹೇಳಿದ್ದಲ್ಲ. ಹೆಣ್ಣು ಮಕ್ಕಳ ಮೇಲಿರುವ ಕಾಳಜಿಯಿಂದ ಹಾಗೆ ಹೇಳಿದ್ದು. ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮೆಯಿರಲಿ ಎಂದು ಜಮೀರ್ ಟ್ವೀಟ್ ಮಾಡಿದ್ದಾರೆ.

ಮಹಿಳೆಯರು ಹಿಜಾಬ್ ಹಾಕದಿದ್ದರೆ ಅತ್ಯಾಚಾರವಾಗುತ್ತೆ ಎಂದು ಹುಬ್ಬಳ್ಳಿಯಲ್ಲಿ ಭಾನುವಾರ ಜಮೀರ್​ ಅಹ್ಮದ್​ ಹೇಳಿಕೆ ನೀಡಿದ್ದರು. ಶಾಸಕ ಜಮೀರ್ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಈ ಹೇಳಿಕೆ ಬಗ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ಸ ಸಹಿತ ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡಿ ಖಂಡನೆ ವ್ಯಕ್ತಪಡಿಸಿದ್ದರು. ಇಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್​ ಸುರ್ಜೇವಾಲ ಆಕ್ಷೇಪ ವ್ಯಕ್ತಪಡಿಸಿದ್ದರು.

ಟ್ವೀಟ್​ ಮೂಲಕ ಜಮೀರ್​ ಹೇಳಿಕೆಯನ್ನು ಸುರ್ಜೇವಾಲ ಖಂಡಿಸಿದ್ದರು. ಕಾಂಗ್ರೆಸ್ ನಾಯಕರೊಬ್ಬರಿಂದ ಕೀಳುಮಟ್ಟದ ಅಭಿಪ್ರಾಯ ವ್ಯಕ್ತವಾಗಿದೆ. ಮಹಿಳೆಯರ ಬಗ್ಗೆ ಕೀಳುಮಟ್ಟದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆಧುನಿಕ ಭಾರತದಲ್ಲಿ ಇಂತಹ ವಿಚಾರಗಳಿಗೆ ಅವಕಾಶವಿಲ್ಲ. ಇಂತಹ ಕೀಳು ವಿಚಾರಗಳು ಕೇವಲ ಬಿಜೆಪಿಗೆ ಮಾತ್ರ ಸಿಮೀತ. ಈ ಹಿಂದೆ ಬಿಜೆಪಿಯ ನಾಯಕರಾದ ಯೋಗಿ ಆದಿತ್ಯನಾಥ್, ಮನೋಹರ್​ ಲಾಲ್ ಖಟ್ಟರ್ ಇಂತಹ ಹೇಳಿಕೆ ನೀಡಿದ್ದಾರೆ. ಮಹಿಳೆಯರ ಬಗ್ಗೆ ಕೀಳುಮಟ್ಟದಲ್ಲಿ‌ ಮಾತನಾಡಿದ್ದರು ಎಂದು ಸುರ್ಜೇವಾಲ ಟ್ವೀಟ್ ಮಾಡಿದ್ದಾರೆ.

ಭಾರತೀಯ ಮಹಿಳೆ ಅನಾದಿಕಾಲದಿಂದಲೂ ಶಕ್ತಿ ಸ್ವರೂಪಿನಿ. ಇದಕ್ಕೆ ಯಾವುದೇ ಜಾತಿ, ಧರ್ಮ ಅಡ್ಡ ಬರುವುದಿಲ್ಲ. ದೇಶ ಹೆಮ್ಮೆ ಪಡುವಂತೆ ಮಹಿಳೆಯರು ಸಾಧನೆ ಮಾಡಿದ್ದಾರೆ. ಈಗ ಸಮಯ ಬದಲಾಗಿದೆ, ಅದರಿಂದ ಹೊರಬರಬೇಕು. ನಾಯಕರು ಸಂಕುಚಿತ ಮನೋಭಾವದಿಂದ ಹೊರಬರಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್​ ಸುರ್ಜೇವಾಲ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನಾನು ಕ್ಷಮೆ ಕೇಳುವಂತಹ ಯಾವುದೇ ಹೇಳಿಕೆ ನೀಡಿಲ್ಲ; ನನ್ನ ಹೇಳಿಕೆಯನ್ನು ತಿರುಚಲಾಗಿದೆ: ಜಮೀರ್ ಅಹ್ಮದ್

ಇದನ್ನೂ ಓದಿ: ಮಹಿಳೆಯರು ಹಿಜಾಬ್ ಹಾಕದಿದ್ದರೆ ಅತ್ಯಾಚಾರವಾಗುತ್ತೆ: ಜಮೀರ್ ಅಹ್ಮದ್ ​ಖಾನ್​ ವಿವಾದಾತ್ಮಕ ಹೇಳಿಕೆ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ