AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಣ್ಣು ಮಕ್ಕಳ ಮೇಲಿರುವ ಕಾಳಜಿಯಿಂದ ಹಾಗೆ ಹೇಳಿದ್ದು; ಹಿಜಾಬ್ ಹೇಳಿಕೆ ಕುರಿತು ಕ್ಷಮೆ ಕೇಳಿದ ಜಮೀರ್ ಅಹ್ಮದ್

ಭಾರತೀಯ ಮಹಿಳೆ ಅನಾದಿಕಾಲದಿಂದಲೂ ಶಕ್ತಿ ಸ್ವರೂಪಿನಿ. ಇದಕ್ಕೆ ಯಾವುದೇ ಜಾತಿ, ಧರ್ಮ ಅಡ್ಡ ಬರುವುದಿಲ್ಲ. ನಾಯಕರು ಸಂಕುಚಿತ ಮನೋಭಾವದಿಂದ ಹೊರಬರಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್​ ಸುರ್ಜೇವಾಲ ಟ್ವೀಟ್ ಮಾಡಿದ್ದಾರೆ.

ಹೆಣ್ಣು ಮಕ್ಕಳ ಮೇಲಿರುವ ಕಾಳಜಿಯಿಂದ ಹಾಗೆ ಹೇಳಿದ್ದು; ಹಿಜಾಬ್ ಹೇಳಿಕೆ ಕುರಿತು ಕ್ಷಮೆ ಕೇಳಿದ ಜಮೀರ್ ಅಹ್ಮದ್
ಜಮೀರ್ ಅಹ್ಮದ್​
TV9 Web
| Edited By: |

Updated on: Feb 14, 2022 | 10:59 PM

Share

ಬೆಂಗಳೂರು: ಹಿಜಾಬ್ ಧರಿಸದೇ ಹೋದರೆ ಅತ್ಯಾಚಾರಗಳು ಆಗುತ್ತವೆ ಎಂಬ ಬಗ್ಗೆ​ ಹೇಳಿಕೆ ನೀಡಿದ್ದ ಕಾಂಗ್ರೆಸ್ ಶಾಸಕ ಜಮೀರ್​ ಅಹ್ಮದ್​ ಖಾನ್ ತಮ್ಮ ಮಾತಿನ ಕುರಿತು ಕ್ಷಮೆಯಾಚಿಸಿದ್ದಾರೆ. ರಣದೀಪ್​ ಸುರ್ಜೇವಾಲ ಟ್ವೀಟ್​ ಬೆನ್ನಲ್ಲೇ ಜಮೀರ್​​ ಟ್ವಿಟರ್​​ನಲ್ಲಿ ಕ್ಷಮೆ ಕೇಳಿದ್ದಾರೆ. ಯಾರ ಮನಸ್ಸು ನೋಯಿಸುವ ಉದ್ದೇಶದಿಂದ ಹೇಳಿದ್ದಲ್ಲ. ಯಾರಿಗೂ ಅಗೌರವ ತೋರುವ ದುರುದ್ದೇಶದಿಂದ ಹೇಳಿದ್ದಲ್ಲ. ಹೆಣ್ಣು ಮಕ್ಕಳ ಮೇಲಿರುವ ಕಾಳಜಿಯಿಂದ ಹಾಗೆ ಹೇಳಿದ್ದು. ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮೆಯಿರಲಿ ಎಂದು ಜಮೀರ್ ಟ್ವೀಟ್ ಮಾಡಿದ್ದಾರೆ.

ಮಹಿಳೆಯರು ಹಿಜಾಬ್ ಹಾಕದಿದ್ದರೆ ಅತ್ಯಾಚಾರವಾಗುತ್ತೆ ಎಂದು ಹುಬ್ಬಳ್ಳಿಯಲ್ಲಿ ಭಾನುವಾರ ಜಮೀರ್​ ಅಹ್ಮದ್​ ಹೇಳಿಕೆ ನೀಡಿದ್ದರು. ಶಾಸಕ ಜಮೀರ್ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಈ ಹೇಳಿಕೆ ಬಗ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ಸ ಸಹಿತ ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡಿ ಖಂಡನೆ ವ್ಯಕ್ತಪಡಿಸಿದ್ದರು. ಇಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್​ ಸುರ್ಜೇವಾಲ ಆಕ್ಷೇಪ ವ್ಯಕ್ತಪಡಿಸಿದ್ದರು.

ಟ್ವೀಟ್​ ಮೂಲಕ ಜಮೀರ್​ ಹೇಳಿಕೆಯನ್ನು ಸುರ್ಜೇವಾಲ ಖಂಡಿಸಿದ್ದರು. ಕಾಂಗ್ರೆಸ್ ನಾಯಕರೊಬ್ಬರಿಂದ ಕೀಳುಮಟ್ಟದ ಅಭಿಪ್ರಾಯ ವ್ಯಕ್ತವಾಗಿದೆ. ಮಹಿಳೆಯರ ಬಗ್ಗೆ ಕೀಳುಮಟ್ಟದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆಧುನಿಕ ಭಾರತದಲ್ಲಿ ಇಂತಹ ವಿಚಾರಗಳಿಗೆ ಅವಕಾಶವಿಲ್ಲ. ಇಂತಹ ಕೀಳು ವಿಚಾರಗಳು ಕೇವಲ ಬಿಜೆಪಿಗೆ ಮಾತ್ರ ಸಿಮೀತ. ಈ ಹಿಂದೆ ಬಿಜೆಪಿಯ ನಾಯಕರಾದ ಯೋಗಿ ಆದಿತ್ಯನಾಥ್, ಮನೋಹರ್​ ಲಾಲ್ ಖಟ್ಟರ್ ಇಂತಹ ಹೇಳಿಕೆ ನೀಡಿದ್ದಾರೆ. ಮಹಿಳೆಯರ ಬಗ್ಗೆ ಕೀಳುಮಟ್ಟದಲ್ಲಿ‌ ಮಾತನಾಡಿದ್ದರು ಎಂದು ಸುರ್ಜೇವಾಲ ಟ್ವೀಟ್ ಮಾಡಿದ್ದಾರೆ.

ಭಾರತೀಯ ಮಹಿಳೆ ಅನಾದಿಕಾಲದಿಂದಲೂ ಶಕ್ತಿ ಸ್ವರೂಪಿನಿ. ಇದಕ್ಕೆ ಯಾವುದೇ ಜಾತಿ, ಧರ್ಮ ಅಡ್ಡ ಬರುವುದಿಲ್ಲ. ದೇಶ ಹೆಮ್ಮೆ ಪಡುವಂತೆ ಮಹಿಳೆಯರು ಸಾಧನೆ ಮಾಡಿದ್ದಾರೆ. ಈಗ ಸಮಯ ಬದಲಾಗಿದೆ, ಅದರಿಂದ ಹೊರಬರಬೇಕು. ನಾಯಕರು ಸಂಕುಚಿತ ಮನೋಭಾವದಿಂದ ಹೊರಬರಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್​ ಸುರ್ಜೇವಾಲ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನಾನು ಕ್ಷಮೆ ಕೇಳುವಂತಹ ಯಾವುದೇ ಹೇಳಿಕೆ ನೀಡಿಲ್ಲ; ನನ್ನ ಹೇಳಿಕೆಯನ್ನು ತಿರುಚಲಾಗಿದೆ: ಜಮೀರ್ ಅಹ್ಮದ್

ಇದನ್ನೂ ಓದಿ: ಮಹಿಳೆಯರು ಹಿಜಾಬ್ ಹಾಕದಿದ್ದರೆ ಅತ್ಯಾಚಾರವಾಗುತ್ತೆ: ಜಮೀರ್ ಅಹ್ಮದ್ ​ಖಾನ್​ ವಿವಾದಾತ್ಮಕ ಹೇಳಿಕೆ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ