AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಣ್ಣು ಮಕ್ಕಳ ಮೇಲಿರುವ ಕಾಳಜಿಯಿಂದ ಹಾಗೆ ಹೇಳಿದ್ದು; ಹಿಜಾಬ್ ಹೇಳಿಕೆ ಕುರಿತು ಕ್ಷಮೆ ಕೇಳಿದ ಜಮೀರ್ ಅಹ್ಮದ್

ಭಾರತೀಯ ಮಹಿಳೆ ಅನಾದಿಕಾಲದಿಂದಲೂ ಶಕ್ತಿ ಸ್ವರೂಪಿನಿ. ಇದಕ್ಕೆ ಯಾವುದೇ ಜಾತಿ, ಧರ್ಮ ಅಡ್ಡ ಬರುವುದಿಲ್ಲ. ನಾಯಕರು ಸಂಕುಚಿತ ಮನೋಭಾವದಿಂದ ಹೊರಬರಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್​ ಸುರ್ಜೇವಾಲ ಟ್ವೀಟ್ ಮಾಡಿದ್ದಾರೆ.

ಹೆಣ್ಣು ಮಕ್ಕಳ ಮೇಲಿರುವ ಕಾಳಜಿಯಿಂದ ಹಾಗೆ ಹೇಳಿದ್ದು; ಹಿಜಾಬ್ ಹೇಳಿಕೆ ಕುರಿತು ಕ್ಷಮೆ ಕೇಳಿದ ಜಮೀರ್ ಅಹ್ಮದ್
ಜಮೀರ್ ಅಹ್ಮದ್​
Follow us
TV9 Web
| Updated By: ganapathi bhat

Updated on: Feb 14, 2022 | 10:59 PM

ಬೆಂಗಳೂರು: ಹಿಜಾಬ್ ಧರಿಸದೇ ಹೋದರೆ ಅತ್ಯಾಚಾರಗಳು ಆಗುತ್ತವೆ ಎಂಬ ಬಗ್ಗೆ​ ಹೇಳಿಕೆ ನೀಡಿದ್ದ ಕಾಂಗ್ರೆಸ್ ಶಾಸಕ ಜಮೀರ್​ ಅಹ್ಮದ್​ ಖಾನ್ ತಮ್ಮ ಮಾತಿನ ಕುರಿತು ಕ್ಷಮೆಯಾಚಿಸಿದ್ದಾರೆ. ರಣದೀಪ್​ ಸುರ್ಜೇವಾಲ ಟ್ವೀಟ್​ ಬೆನ್ನಲ್ಲೇ ಜಮೀರ್​​ ಟ್ವಿಟರ್​​ನಲ್ಲಿ ಕ್ಷಮೆ ಕೇಳಿದ್ದಾರೆ. ಯಾರ ಮನಸ್ಸು ನೋಯಿಸುವ ಉದ್ದೇಶದಿಂದ ಹೇಳಿದ್ದಲ್ಲ. ಯಾರಿಗೂ ಅಗೌರವ ತೋರುವ ದುರುದ್ದೇಶದಿಂದ ಹೇಳಿದ್ದಲ್ಲ. ಹೆಣ್ಣು ಮಕ್ಕಳ ಮೇಲಿರುವ ಕಾಳಜಿಯಿಂದ ಹಾಗೆ ಹೇಳಿದ್ದು. ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮೆಯಿರಲಿ ಎಂದು ಜಮೀರ್ ಟ್ವೀಟ್ ಮಾಡಿದ್ದಾರೆ.

ಮಹಿಳೆಯರು ಹಿಜಾಬ್ ಹಾಕದಿದ್ದರೆ ಅತ್ಯಾಚಾರವಾಗುತ್ತೆ ಎಂದು ಹುಬ್ಬಳ್ಳಿಯಲ್ಲಿ ಭಾನುವಾರ ಜಮೀರ್​ ಅಹ್ಮದ್​ ಹೇಳಿಕೆ ನೀಡಿದ್ದರು. ಶಾಸಕ ಜಮೀರ್ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಈ ಹೇಳಿಕೆ ಬಗ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ಸ ಸಹಿತ ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡಿ ಖಂಡನೆ ವ್ಯಕ್ತಪಡಿಸಿದ್ದರು. ಇಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್​ ಸುರ್ಜೇವಾಲ ಆಕ್ಷೇಪ ವ್ಯಕ್ತಪಡಿಸಿದ್ದರು.

ಟ್ವೀಟ್​ ಮೂಲಕ ಜಮೀರ್​ ಹೇಳಿಕೆಯನ್ನು ಸುರ್ಜೇವಾಲ ಖಂಡಿಸಿದ್ದರು. ಕಾಂಗ್ರೆಸ್ ನಾಯಕರೊಬ್ಬರಿಂದ ಕೀಳುಮಟ್ಟದ ಅಭಿಪ್ರಾಯ ವ್ಯಕ್ತವಾಗಿದೆ. ಮಹಿಳೆಯರ ಬಗ್ಗೆ ಕೀಳುಮಟ್ಟದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆಧುನಿಕ ಭಾರತದಲ್ಲಿ ಇಂತಹ ವಿಚಾರಗಳಿಗೆ ಅವಕಾಶವಿಲ್ಲ. ಇಂತಹ ಕೀಳು ವಿಚಾರಗಳು ಕೇವಲ ಬಿಜೆಪಿಗೆ ಮಾತ್ರ ಸಿಮೀತ. ಈ ಹಿಂದೆ ಬಿಜೆಪಿಯ ನಾಯಕರಾದ ಯೋಗಿ ಆದಿತ್ಯನಾಥ್, ಮನೋಹರ್​ ಲಾಲ್ ಖಟ್ಟರ್ ಇಂತಹ ಹೇಳಿಕೆ ನೀಡಿದ್ದಾರೆ. ಮಹಿಳೆಯರ ಬಗ್ಗೆ ಕೀಳುಮಟ್ಟದಲ್ಲಿ‌ ಮಾತನಾಡಿದ್ದರು ಎಂದು ಸುರ್ಜೇವಾಲ ಟ್ವೀಟ್ ಮಾಡಿದ್ದಾರೆ.

ಭಾರತೀಯ ಮಹಿಳೆ ಅನಾದಿಕಾಲದಿಂದಲೂ ಶಕ್ತಿ ಸ್ವರೂಪಿನಿ. ಇದಕ್ಕೆ ಯಾವುದೇ ಜಾತಿ, ಧರ್ಮ ಅಡ್ಡ ಬರುವುದಿಲ್ಲ. ದೇಶ ಹೆಮ್ಮೆ ಪಡುವಂತೆ ಮಹಿಳೆಯರು ಸಾಧನೆ ಮಾಡಿದ್ದಾರೆ. ಈಗ ಸಮಯ ಬದಲಾಗಿದೆ, ಅದರಿಂದ ಹೊರಬರಬೇಕು. ನಾಯಕರು ಸಂಕುಚಿತ ಮನೋಭಾವದಿಂದ ಹೊರಬರಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್​ ಸುರ್ಜೇವಾಲ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನಾನು ಕ್ಷಮೆ ಕೇಳುವಂತಹ ಯಾವುದೇ ಹೇಳಿಕೆ ನೀಡಿಲ್ಲ; ನನ್ನ ಹೇಳಿಕೆಯನ್ನು ತಿರುಚಲಾಗಿದೆ: ಜಮೀರ್ ಅಹ್ಮದ್

ಇದನ್ನೂ ಓದಿ: ಮಹಿಳೆಯರು ಹಿಜಾಬ್ ಹಾಕದಿದ್ದರೆ ಅತ್ಯಾಚಾರವಾಗುತ್ತೆ: ಜಮೀರ್ ಅಹ್ಮದ್ ​ಖಾನ್​ ವಿವಾದಾತ್ಮಕ ಹೇಳಿಕೆ

ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್