Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಶಾ ಕಾರ್ಯಕರ್ತೆಯರಿಗೆ​ ಹಂಚಿದ ಸೌಧಿಯ 500 ರಿಯಲ್ ಭಾರತದಲ್ಲಿ ಎಷ್ಟು? ಸ್ಪಷ್ಟನೆ ಕೊಟ್ಟ ಜಮೀರ್

ಆಶಾ ಕಾರ್ಯಕರ್ತೆಯರಿಗೆ​ ಸೌಧಿಯ 500 ರಿಯಲ್ ಹಂಚಿರುವುದಕ್ಕೆ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಖಾನ್ ಸ್ಪಷ್ಟನೆ ನೀಡಿದ್ದಾರೆ.

ಆಶಾ ಕಾರ್ಯಕರ್ತೆಯರಿಗೆ​ ಹಂಚಿದ ಸೌಧಿಯ 500 ರಿಯಲ್ ಭಾರತದಲ್ಲಿ ಎಷ್ಟು? ಸ್ಪಷ್ಟನೆ ಕೊಟ್ಟ ಜಮೀರ್
Follow us
ರಮೇಶ್ ಬಿ. ಜವಳಗೇರಾ
|

Updated on: Feb 27, 2023 | 1:59 PM

ಬೆಂಗಳೂರು: ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್​ ಖಾನ್(zameer ahmed khan) ಅವರು ಆಶಾ ಕಾರ್ಯಕರ್ತೆಯರಿಗೆ​ ವಿದೇಶಿ ಕರೆನ್ಸಿ ಹಂಚಿದ ಸುದ್ದಿ ಭಾರೀ ಸದ್ದು ಮಾಡುತ್ತಿದೆ. ಇನ್ನು ಚುನಾವಣೆ ಸಂದರ್ಭದಲ್ಲಿ ವಿದೇಶಿ ಕರೆನ್ಸಿ ಹಂಚಿಕೆ ಮಾಡಿರುವುದಕ್ಕೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ಜಮೀರ್ ಅಹಮ್ಮದ್ ಖಾನ್ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಫೆಬ್ರುವರಿ 27) ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್, ಸೌದಿಗೆ ಹೋಗುತ್ತಿದ್ದ ಆಶಾ ಕಾರ್ಯಕರ್ತೆಯರಿಗೆ ಹಣ ನೀಡಿದ್ದೇನೆ. ಸೌದಿಯಲ್ಲಿ ಕರೆನ್ಸಿ ಬದಲಾಯಿಸಲು ಹೇಳಿದ್ದೇನೆ. ವಿದೇಶಿ ಕರೆನ್ಸಿ ಹಂಚಿದ್ದಕ್ಕೆ ಕಾನೂನು ತೊಡಕು ಏನೂ ಆಗುವುದಿಲ್ಲ, ಅವರಿಗೆ ತಲಾ 12 ಸಾವಿರ ಹಂಚಿದ್ದೇನೆ. ಸೌಧಿಯಲ್ಲಿ 500 ರಿಯಲ್ ಆಗುತ್ತೆ. ಅಲ್ಲಿ ಹೋಗಿ ಕರೆನ್ಸಿ ಬದಲಾಯಿಸಲು ಹೇಳಿದ್ದೇನೆ. ನೋಟು ಹಂಚಿದ್ದು ಕಾನೂನು ತೊಡಕು ಏನು ಆಗಲ್ಲ. ನಾನು ಅದರ ವಿವರಣೆ ಕೊಟ್ಟು ಕಳಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಆಶಾ ಕಾರ್ಯಕರ್ತೆಯರಿಗೆ ಸೌದಿ ಅರೇಬಿಯಾದ 500 ಮುಖಬೆಲೆಯ ನೋಟು ಹಂಚಿದ ಜಮೀರ್, ಭಾರತದಲ್ಲಿ ಅದರ ಮೌಲ್ಯ ಎಷ್ಟು ಗೊತ್ತಾ?

ಜೆಡಿಎಸ್ 123 ಮಿಷನ್​ ಬಗ್ಗೆ ಮಾತನಾಡಿದ ಜಮೀರ್, ಜೆಡಿಎಸ್​ನವರು ತಪ್ಪಾಗಿ ಒಂದು ಸೇರಿಸಿ ಬಿಟ್ಟಿದ್ದಾರೆ. ಅವರು ಗೆಲ್ಲುವುದು 23 ಕ್ಷೇತ್ರ ಮಾತ್ರ. ಯಾರೇ ಆದ್ರೂ ದೇವೇಗೌಡರ ಮನೆಗೆ ಹೋಗುವುದಾದರೆ ಅವರಿಗೆ ಬಹುಮತ ಬರಲ್ಲ ಅಂತ ಅಲ್ವಾ. ಮತ್ತೆ 123 ಮಿಷನ್ ಹೇಗೆ ಆಗುತ್ತೆ ಎಂದು ಜೆಡಿಎಸ್ ಬಗ್ಗೆ ವ್ಯಂಗ್ಯವಾಡಿದರು.

ಮುಖಬೆಲೆಯ ನೋಟು ನೀಡುವುದರ ಜೊತೆಗೆ ನ್ಯಾಷನಲ್ ಟ್ರಾವೆಲ್ಸ್​​ ಕಿಟ್ ವಿತರಣೆ ಮಾಡಿದ್ದರು. ಬೆಂಗಳೂರಿನ ಗೋರಿಪಾಳ್ಯದ ಪೋಸ್ಟ್ ಆಫೀಸ್ ಆವರಣದಲ್ಲಿ ಸೌದಿ ಅರೇಬಿಯಾದ 500 ಮುಖಬೆಲೆಯ ನೋಟು ನೀಡಿ ಬಿಬಿಎಂಪಿಯ 46 ಆಶಾ ಕಾರ್ಯಕರ್ತೆಯರನ್ನು ಮೆಕ್ಕಾಗೆ ಕಳಿಸಿಕೊಟ್ಟರು. ಪಾದರಾಯನಪುರ ವಾರ್ಡ್​​​, ಜೆಜೆಆರ್ ನಗರದ ವಾರ್ಡ್ ಹಾಗೂ ರಾಯಪುರಂ ವಾರ್ಡ್ ಆಶಾ ಕಾರ್ಯಕರ್ತೆಯರಿಗೆ ವಿದೇಶಿ ನೋಟು ನೀಡಿದ್ದಾರೆ. ಜಮೀರ್ ಹಂಚಿದ ಸೌದಿ ಅರೇಬಿಯಾದ 5೦೦ ರೂ.ಗೆ ಭಾರತದಲ್ಲಿ 11ಸಾವಿರದ 34 ರೂಪಾಯಿ.

ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
ಕೋಲಾರ: ಹೆಲ್ಮೆಟ್ ತೆಗೀತಿದ್ದಂತೆ ಬುಸ್ ಎಂದ ನಾಗಪ್ಪ! ಆಮೇಲೇನಾಯ್ತು ನೋಡಿ
ಕೋಲಾರ: ಹೆಲ್ಮೆಟ್ ತೆಗೀತಿದ್ದಂತೆ ಬುಸ್ ಎಂದ ನಾಗಪ್ಪ! ಆಮೇಲೇನಾಯ್ತು ನೋಡಿ
ಧಗ ಧಗನೆ ಹೊತ್ತಿ ಉರಿದ ಸಿಲಿಂಡರ್ ತುಂಬಿದ್ದ ಟ್ರಕ್, ಹಲವು ಬಾರಿ ಸ್ಫೋಟ
ಧಗ ಧಗನೆ ಹೊತ್ತಿ ಉರಿದ ಸಿಲಿಂಡರ್ ತುಂಬಿದ್ದ ಟ್ರಕ್, ಹಲವು ಬಾರಿ ಸ್ಫೋಟ
VIDEO: ರನೌಟ್ ಮಾಡಲು ಕುಲ್ದೀಪ್ ಯಾದವ್​ನ ತಳ್ಳಿದ ರಿಷಭ್ ಪಂತ್
VIDEO: ರನೌಟ್ ಮಾಡಲು ಕುಲ್ದೀಪ್ ಯಾದವ್​ನ ತಳ್ಳಿದ ರಿಷಭ್ ಪಂತ್
VIDEO: ಗೆಲ್ಲುವ ಪಂದ್ಯವನ್ನು 'ಕೈ ಚೆಲ್ಲಿದ' ರಿಷಭ್ ಪಂತ್
VIDEO: ಗೆಲ್ಲುವ ಪಂದ್ಯವನ್ನು 'ಕೈ ಚೆಲ್ಲಿದ' ರಿಷಭ್ ಪಂತ್