AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Driverless Car: ಬೆಂಗಳೂರಿನಲ್ಲಿ ರಸ್ತೆಗಿಳಿದ ಸ್ವಯಂಚಾಲಿತ ಕಾರು: ಸಾರ್ವಜನಿಕರ ಅಚ್ಚರಿಗೆ ಕಾರಣವಾಯ್ತು ಝಡ್ ಪಾಡ್

ಝಡ್ ಪಾಡ್​ ಎಂಬ ಕಾರು ಬೆಂಗಳೂರು ಮೂಲದ ಮೈನಸ್ ಝೀರೋ ಎಂಬ ಸ್ಟಾರ್ಟ್ಅಪ್​ನ ಕನಸಿನ ಕೂಸಾಗಿದೆ. ಇದು ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಭಾರತದ ಮೊದಲ ಸ್ವಯಂ ಚಾಲಿತ ವಾಹನ ಎಂದು ಗುರುತಿಸಲಾಗಿದೆ.

Driverless Car: ಬೆಂಗಳೂರಿನಲ್ಲಿ ರಸ್ತೆಗಿಳಿದ ಸ್ವಯಂಚಾಲಿತ ಕಾರು: ಸಾರ್ವಜನಿಕರ ಅಚ್ಚರಿಗೆ ಕಾರಣವಾಯ್ತು ಝಡ್ ಪಾಡ್
ಸ್ವಯಂ ಚಾಲಿತ ಕಾರು (ಸಂಗ್ರಹ ಚಿತ್ರ)
ಗಂಗಾಧರ​ ಬ. ಸಾಬೋಜಿ
|

Updated on:Jul 28, 2023 | 9:03 PM

Share

ಬೆಂಗಳೂರು, ಜುಲೈ 28: ನಗರದಲ್ಲಿ ಚಾಲಕ ರಹಿತ ಕಾರು (car) ಒಂದು ರಸ್ತೆಗೆ ಇಳಿದಿರುವುದು ಕಂಡುಬಂದಿದೆ. ಯಾವುದೇ ಮನುಷ್ಯರ ಸಹಾಯವಿಲ್ಲದೇ ರಸ್ತೆಯಲ್ಲಿ ಸಂಚರಿಸುವ ಈ ಕಾರನ್ನು ಕಂಡು ಸಿಲಿಕಾನ್​ ಸಿಟಿ ಜನರು ಒಂದು ಕ್ಷಣ ದಂಗಾಗಿದ್ದಾರೆ. ಶಿವಾಜಿನಗರ, ಫ್ರೇಜರ್ ಟೌನ್​ ಸೇರಿದಂತೆ ಮುಂತಾದ ಕಡೆಗಳಲ್ಲಿ ಸಂಚರಿಸುತ್ತಿರುವ ಈ ಕಾರು ಸಾರ್ವಜನಿಕರಲ್ಲಿ ಕುತೂಹಲ ಮೂಡಿಸಿದೆ.

ಸ್ವಯಂ ಚಾಲಿತ ತಂತ್ರಜ್ಞಾನವನ್ನು ಮೊದಲು ಅಮೆರಿಕದ ಕಾರು ತಯಾರಕ ಕಂಪನಿ ಆದ ಟೆಸ್ಲಾ  ಪರಿಚಯಿಸಿತು. ಅಂತೆಯೇ, ಚಾಲಕರಹಿತ ಕಾರು ಬೆಂಗಳೂರಿನಲ್ಲಿ ರಸ್ತೆಗೆ ಇಳಿದಿದ್ದು ಇದು ಎಲ್ಲರ ಅಚ್ಚರಿಗೆ ಕಾರಣವಾಗಿದೆ.

ಅನಿರುದ್ಧ್ ರವಿಶಂಕರ್ ಎಂಬ ಟ್ವಿಟ್ಟರ್ ಬಳಕೆದಾರರೊಬ್ಬರು ಸ್ವಯಂ ಚಾಲಿತ ಮತ್ತು ವಿಚಿತ್ರವಾಗಿ ಕಾಣುವ ಕಾರಿನ ವಿಡಿಯೋವನ್ನು ಇತ್ತೀಚೆಗೆ ಹಂಚಿಕೊಂಡಿದ್ದರು. ವಿಡಿಯೋದಲ್ಲಿ ಜನರು ಕುತೂಹಲದಿಂದ ಕಾರನ್ನು ನೋಡುತ್ತಿರುವುದು ಗಮನಿಸಬಹುದು. ಅವರು ಟ್ವೀಟ್​ ಮಾಡಿದ ಬಳಿಕ ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ಇದನ್ನೂ ಓದಿ: House Rent in Bengaluru: ಬೆಂಗಳೂರಿನಲ್ಲಿ ಮನೆ ಹುಡುಕಲು ಪ್ಯಾಕೇಜ್ ಟೂರ್; ಸಿಲಿಕಾನ್ ಸಿಟಿಯಲ್ಲಿ ಬಾಡಿಗೆ ಮನೆಗೆ ಸಿಕ್ಕಾಪಟ್ಟೆ ಡಿಮ್ಯಾಂಡ್

ಸದ್ಯ ಈ ವಿಡಿಯೋ 12 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದುಕೊಂಡಿದೆ. ಮೈನಸ್ ಝೀರೋ ಸ್ಟಾರ್ಟ್ ಅಪ್ ಕಂಪನಿಗೆ ಸೇರಿದ ಈ ಸ್ವಯಂ ಚಾಲಿತ ಕಾರಿಗೆ ಝಡ್ ಪಾಡ್ ಎಂದು ಹೆಸರಿಡಲಾಗಿದೆ. ಈ ವಿಚಿತ್ರ ಕಾರಿನ ಬಗ್ಗೆ ನೆಟ್ಟಿಗರು ಸಾಕಷ್ಟು ಕಮೆಂಟ್​ ಮಾಡಿದ್ದಾರೆ.

ಭಾರತದ ಮೊದಲ ಸ್ವಯಂ ಚಾಲಿತ ವಾಹನ

ಝಡ್ ಪಾಡ್​ ಎಂಬ ಈ ಕಾರು ಬೆಂಗಳೂರು ಮೂಲದ ಮೈನಸ್ ಝೀರೋ ಎಂಬ ಸ್ಟಾರ್ಟ್ಅಪ್​ನ ಕನಸಿನ ಕೂಸಾಗಿದೆ. ಇದು ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಭಾರತದ ಮೊದಲ ಸ್ವಯಂ ಚಾಲಿತ ವಾಹನ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಮತ್ತಷ್ಟು ಸಂಚರಿಸಲಿವೆ ಇವಿ ಬಸ್​​: ಟಾಟಾ ಕಂಪನಿಯಿಂದ 921 ವಿದ್ಯುತ್​ ಚಾಲಿತ ಬಸ್​​ ಖರೀದಿ

ಈ ಝಡ್ ಪಾಡ್​ ಕಾರು ಸಂಪೂರ್ಣ ಸ್ವಯಂ ಚಾಲಿತವಾಗಿದ್ದು, ಆರು ಕ್ಯಾಮೆರಾಗಳು, ಪರಸ್ಪರ ಎದುರಾಗಿ ನಾಲ್ಕು ಆಸನಗಳನ್ನು ಹೊಂದಿದೆ. ಇದನ್ನು ಯಾವುದೇ ಭೌಗೋಳಿಕ ಸ್ಥಳ ಅಥವಾ ಪರಿಸರದಲ್ಲಿ ಸಂಚರಿಸಬಹುದು ಎಂದು ಕಂಪನಿ ತಿಳಿಸಿದೆ. ಕಾರಿನಲ್ಲಿ ಅಳವಡಿಸಿರುವ ಕ್ಯಾಮೆರಾಗಳು ಸೆರೆಹಿಡಿದ ಚಿತ್ರಗಳ ಆಧಾರದ ಮೇಲೆ ಚಲನೆ ಮಾಡುತ್ತಿದೆ. ಜೊತೆಗೆ ತಕ್ಷಣ ನಿರ್ಧಾರ ತೆಗೆದುಕೊಳ್ಳುತ್ತದೆ.

ಸಂಚಾರ ದಟ್ಟಣೆ ಮತ್ತು ರಸ್ತೆ ಅಪಘಾತಗಳು ಕಡಿಮೆ

ಈ ಕಾರಿನ ಇನ್ನೊಂದು ವಿಶೇಷವೆಂದರೆ, ಧ್ವನಿ ಆದೇಶಗಳ ಮೂಲಕವೂ ಕಾರ್ಯನಿರ್ವಹಿಸುತ್ತದೆ. ಹಾಗಾಗಿ ಕಾರನ್ನು ಆನ್​ ಮತ್ತು ಆಫ್​ ಮಾಡಲು ಆದೇಶಿಸಬಹುದಾಗಿದೆ. ಇದು ಎರಡು ದಿಕ್ಕಿನಲ್ಲಿ ಸಂಚರಿಸುತ್ತದೆ ಮತ್ತು ಸ್ಟೀರಿಂಗ್​ನ ಅಗತ್ಯವಿರುವುದಿಲ್ಲ. ಸಂಚಾರ ದಟ್ಟಣೆ ಮತ್ತು ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವುದು ಮೈನಸ್ ಝೀರೋ ಉದ್ದೇಶವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 7:51 pm, Fri, 28 July 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್