ಎರಡು ತಿಂಗಳಲ್ಲಿ ಬೆಂಗಳೂರಿಗೆ ಬರಲಿವೆ 10 ಸಾವಿರ ಇ-ಸ್ಕೂಟರ್​; ಉದ್ಯೋಗಾವಕಾಶ ಹೆಚ್ಚಿಸಲು ಝೈಪ್ ಎಲೆಕ್ಟ್ರಿಕ್ ಗುರಿ

ಮುಂದಿನ ಎರಡು ತಿಂಗಳ ಒಳಗಾಗಿ ಬೆಂಗಳೂರಿನಲ್ಲಿ10 ಸಾವಿರ ಇ-ಸ್ಕೂಟರ್​ಗಳು ಕಾರ್ಯಾಚರಿಸುವಂತೆ ಮಾಡಲಾಗುವುದು. 2,000 ಇ-ಸ್ಕೂಟರ್​ಗಳು ಈಗಾಗಲೇ ನಗರದಲ್ಲಿವೆ. ಉಳಿದ 8,000 ಸ್ಕೂಟರ್​​ಗಳು ಇನ್ನೆರಡು ತಿಂಗಳಲ್ಲಿ ಬರಲಿವೆ ಎಂದು ಝೈಪ್ ಎಲೆಕ್ಟ್ರಿಕ್ ಮಂಗಳವಾರ ತಿಳಿಸಿದೆ.

ಎರಡು ತಿಂಗಳಲ್ಲಿ ಬೆಂಗಳೂರಿಗೆ ಬರಲಿವೆ 10 ಸಾವಿರ ಇ-ಸ್ಕೂಟರ್​; ಉದ್ಯೋಗಾವಕಾಶ ಹೆಚ್ಚಿಸಲು ಝೈಪ್ ಎಲೆಕ್ಟ್ರಿಕ್ ಗುರಿ
ಝೈಪ್ ಎಲೆಕ್ಟ್ರಿಕ್
Follow us
|

Updated on:May 03, 2023 | 8:36 PM

ಮುಂಬೈ: ಮುಂದಿನ ಎರಡು ತಿಂಗಳ ಒಳಗಾಗಿ ಬೆಂಗಳೂರಿನಲ್ಲಿ (Bengaluru) 10 ಸಾವಿರ ಇ-ಸ್ಕೂಟರ್​ಗಳು (e-scooters) ಕಾರ್ಯಾಚರಿಸುವಂತೆ ಮಾಡಲಾಗುವುದು. 2,000 ಇ-ಸ್ಕೂಟರ್​ಗಳು ಈಗಾಗಲೇ ನಗರದಲ್ಲಿವೆ. ಉಳಿದ 8,000 ಸ್ಕೂಟರ್​​ಗಳು ಇನ್ನೆರಡು ತಿಂಗಳಲ್ಲಿ ಬರಲಿವೆ ಎಂದು ಝೈಪ್ ಎಲೆಕ್ಟ್ರಿಕ್ (Zypp Electric) ಮಂಗಳವಾರ ತಿಳಿಸಿದೆ. ದೇಶದ 30 ನಗರಗಳಲ್ಲಿ ಸೇವೆ ವಿಸ್ತರಿಸುವುದಾಗಿ ಕಂಪನಿ ಇತ್ತೀಚೆಗೆ ಘೋಷಿಸಿತ್ತು. 2025ರ ಒಳಗೆ 2 ಲಕ್ಷ ಇ-ಸ್ಕೂಟರ್​ಗಳು ಕಾರ್ಯಾಚರಿಸುವಂತೆ ಮಾಡುವ ಬಗ್ಗೆ ಕಂಪನಿ ಗುರಿ ಹಾಕಿಕೊಂಡಿದೆ.

ಬೆಂಗಳೂರಿನಲ್ಲಿ 2,000 ಡೆಲಿವರಿ ಎಕ್ಸ್​ಕ್ಯೂಟಿವ್ಸ್ ನೇಮಿಸಿಕೊಳ್ಳಲಾಗಿದೆ ಮತ್ತು ಮುಂದಿನ ಎರಡು ತಿಂಗಳೊಳಗೆ 5,000 ಕ್ಕೂ ಹೆಚ್ಚು ಜನರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಕಂಪನಿ ಹೇಳಿದೆ.

ನೇಮಕಾತಿಯಿಂದ ವಿತರಣೆ ಹೆಚ್ಚಳ ಹಾಗೂ ಉದ್ಯೋಗಾವಕಾಶ ಹೆಚ್ಚಳವಾಗಲಿದೆ ಎಂದು ಕಂಪನಿ ಹೇಳಿದೆ. ಮುಂದಿನ 12-18 ತಿಂಗಳುಗಳಲ್ಲಿ ಬೆಂಗಳೂರಿನ ವಿವಿಧೆಡೆ 100 ಗೊರೊಗ್ರೊ ಬ್ಯಾಟರಿ ವಿನಿಮಯ ಕೇಂದ್ರಗಳನ್ನು ಸ್ಥಾಪಿಸಲು ಯೋಜಿಸಲಾಗಿದೆ ಎಂದು ಝೈಪ್ ಹೇಳಿದೆ. ಇದು ನಗರದ ಎಲೆಕ್ಟ್ರಿಕ್ ವಾಹನ ವ್ಯವಸ್ಥೆಯನ್ನು ಗಣನೀಯವಾಗಿ ಹೆಚ್ಚಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ: Bangalore rain: ಬೆಂಗಳೂರಿನ ಹಲವೆಡೆ ಭಾರೀ ಮಳೆ, ಮೇ 6ರ ವರೆಗೂ ವರ್ಷಧಾರೆ ಸಾಧ್ಯತೆ

ನಾವು ಈಗಾಗಲೇ ಬೆಂಗಳೂರಿನಲ್ಲಿ 2,000 ಇ-ಸ್ಕೂಟರ್‌ಗಳನ್ನು ನಿಯೋಜಿಸಿದ್ದೇವೆ. ಕೈಗೆಟುಕುವ ಮತ್ತು ಸ್ಥಿರವಾದ ವಿತರಣೆ ಒದಗಿಸುವುದು ನಮ್ಮ ಗುರಿಯಾಗಿದೆ ಎಂದು ಝೈಪ್ ಎಲೆಕ್ಟ್ರಿಕ್‌ನ ಸಂಸ್ಥಾಪಕಿ ರಾಶಿ ಅಗರ್ವಾಲ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:33 pm, Wed, 3 May 23

Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ