AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ತಿಂಗಳಲ್ಲಿ ಬೆಂಗಳೂರಿಗೆ ಬರಲಿವೆ 10 ಸಾವಿರ ಇ-ಸ್ಕೂಟರ್​; ಉದ್ಯೋಗಾವಕಾಶ ಹೆಚ್ಚಿಸಲು ಝೈಪ್ ಎಲೆಕ್ಟ್ರಿಕ್ ಗುರಿ

ಮುಂದಿನ ಎರಡು ತಿಂಗಳ ಒಳಗಾಗಿ ಬೆಂಗಳೂರಿನಲ್ಲಿ10 ಸಾವಿರ ಇ-ಸ್ಕೂಟರ್​ಗಳು ಕಾರ್ಯಾಚರಿಸುವಂತೆ ಮಾಡಲಾಗುವುದು. 2,000 ಇ-ಸ್ಕೂಟರ್​ಗಳು ಈಗಾಗಲೇ ನಗರದಲ್ಲಿವೆ. ಉಳಿದ 8,000 ಸ್ಕೂಟರ್​​ಗಳು ಇನ್ನೆರಡು ತಿಂಗಳಲ್ಲಿ ಬರಲಿವೆ ಎಂದು ಝೈಪ್ ಎಲೆಕ್ಟ್ರಿಕ್ ಮಂಗಳವಾರ ತಿಳಿಸಿದೆ.

ಎರಡು ತಿಂಗಳಲ್ಲಿ ಬೆಂಗಳೂರಿಗೆ ಬರಲಿವೆ 10 ಸಾವಿರ ಇ-ಸ್ಕೂಟರ್​; ಉದ್ಯೋಗಾವಕಾಶ ಹೆಚ್ಚಿಸಲು ಝೈಪ್ ಎಲೆಕ್ಟ್ರಿಕ್ ಗುರಿ
ಝೈಪ್ ಎಲೆಕ್ಟ್ರಿಕ್
ಗಣಪತಿ ಶರ್ಮಾ
|

Updated on:May 03, 2023 | 8:36 PM

Share

ಮುಖ್ಯಾಂಶಗಳು

  • ಬೆಂಗಳೂರಿಗೆ ಬರಲಿವೆ 10,000 ಝೈಪ್ ಇ-ಸ್ಕೂಟರ್
  • 5,000ಕ್ಕೂ ಹೆಚ್ಚು ಜನರಿಗೆ ಉದ್ಯೋಗಾವಕಾಶ
  • ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಪಾಯಿಂಟ್​ ವಿಸ್ತರಣೆಗೂ ಕಂಪನಿ ಒಲವು

ಮುಂಬೈ: ಮುಂದಿನ ಎರಡು ತಿಂಗಳ ಒಳಗಾಗಿ ಬೆಂಗಳೂರಿನಲ್ಲಿ (Bengaluru) 10 ಸಾವಿರ ಇ-ಸ್ಕೂಟರ್​ಗಳು (e-scooters) ಕಾರ್ಯಾಚರಿಸುವಂತೆ ಮಾಡಲಾಗುವುದು. 2,000 ಇ-ಸ್ಕೂಟರ್​ಗಳು ಈಗಾಗಲೇ ನಗರದಲ್ಲಿವೆ. ಉಳಿದ 8,000 ಸ್ಕೂಟರ್​​ಗಳು ಇನ್ನೆರಡು ತಿಂಗಳಲ್ಲಿ ಬರಲಿವೆ ಎಂದು ಝೈಪ್ ಎಲೆಕ್ಟ್ರಿಕ್ (Zypp Electric) ಮಂಗಳವಾರ ತಿಳಿಸಿದೆ. ದೇಶದ 30 ನಗರಗಳಲ್ಲಿ ಸೇವೆ ವಿಸ್ತರಿಸುವುದಾಗಿ ಕಂಪನಿ ಇತ್ತೀಚೆಗೆ ಘೋಷಿಸಿತ್ತು. 2025ರ ಒಳಗೆ 2 ಲಕ್ಷ ಇ-ಸ್ಕೂಟರ್​ಗಳು ಕಾರ್ಯಾಚರಿಸುವಂತೆ ಮಾಡುವ ಬಗ್ಗೆ ಕಂಪನಿ ಗುರಿ ಹಾಕಿಕೊಂಡಿದೆ.

ಬೆಂಗಳೂರಿನಲ್ಲಿ 2,000 ಡೆಲಿವರಿ ಎಕ್ಸ್​ಕ್ಯೂಟಿವ್ಸ್ ನೇಮಿಸಿಕೊಳ್ಳಲಾಗಿದೆ ಮತ್ತು ಮುಂದಿನ ಎರಡು ತಿಂಗಳೊಳಗೆ 5,000 ಕ್ಕೂ ಹೆಚ್ಚು ಜನರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಕಂಪನಿ ಹೇಳಿದೆ.

ನೇಮಕಾತಿಯಿಂದ ವಿತರಣೆ ಹೆಚ್ಚಳ ಹಾಗೂ ಉದ್ಯೋಗಾವಕಾಶ ಹೆಚ್ಚಳವಾಗಲಿದೆ ಎಂದು ಕಂಪನಿ ಹೇಳಿದೆ. ಮುಂದಿನ 12-18 ತಿಂಗಳುಗಳಲ್ಲಿ ಬೆಂಗಳೂರಿನ ವಿವಿಧೆಡೆ 100 ಗೊರೊಗ್ರೊ ಬ್ಯಾಟರಿ ವಿನಿಮಯ ಕೇಂದ್ರಗಳನ್ನು ಸ್ಥಾಪಿಸಲು ಯೋಜಿಸಲಾಗಿದೆ ಎಂದು ಝೈಪ್ ಹೇಳಿದೆ. ಇದು ನಗರದ ಎಲೆಕ್ಟ್ರಿಕ್ ವಾಹನ ವ್ಯವಸ್ಥೆಯನ್ನು ಗಣನೀಯವಾಗಿ ಹೆಚ್ಚಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ: Bangalore rain: ಬೆಂಗಳೂರಿನ ಹಲವೆಡೆ ಭಾರೀ ಮಳೆ, ಮೇ 6ರ ವರೆಗೂ ವರ್ಷಧಾರೆ ಸಾಧ್ಯತೆ

ನಾವು ಈಗಾಗಲೇ ಬೆಂಗಳೂರಿನಲ್ಲಿ 2,000 ಇ-ಸ್ಕೂಟರ್‌ಗಳನ್ನು ನಿಯೋಜಿಸಿದ್ದೇವೆ. ಕೈಗೆಟುಕುವ ಮತ್ತು ಸ್ಥಿರವಾದ ವಿತರಣೆ ಒದಗಿಸುವುದು ನಮ್ಮ ಗುರಿಯಾಗಿದೆ ಎಂದು ಝೈಪ್ ಎಲೆಕ್ಟ್ರಿಕ್‌ನ ಸಂಸ್ಥಾಪಕಿ ರಾಶಿ ಅಗರ್ವಾಲ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:33 pm, Wed, 3 May 23

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ