AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ತಿಂಗಳಲ್ಲಿ ಬೆಂಗಳೂರಿಗೆ ಬರಲಿವೆ 10 ಸಾವಿರ ಇ-ಸ್ಕೂಟರ್​; ಉದ್ಯೋಗಾವಕಾಶ ಹೆಚ್ಚಿಸಲು ಝೈಪ್ ಎಲೆಕ್ಟ್ರಿಕ್ ಗುರಿ

ಮುಂದಿನ ಎರಡು ತಿಂಗಳ ಒಳಗಾಗಿ ಬೆಂಗಳೂರಿನಲ್ಲಿ10 ಸಾವಿರ ಇ-ಸ್ಕೂಟರ್​ಗಳು ಕಾರ್ಯಾಚರಿಸುವಂತೆ ಮಾಡಲಾಗುವುದು. 2,000 ಇ-ಸ್ಕೂಟರ್​ಗಳು ಈಗಾಗಲೇ ನಗರದಲ್ಲಿವೆ. ಉಳಿದ 8,000 ಸ್ಕೂಟರ್​​ಗಳು ಇನ್ನೆರಡು ತಿಂಗಳಲ್ಲಿ ಬರಲಿವೆ ಎಂದು ಝೈಪ್ ಎಲೆಕ್ಟ್ರಿಕ್ ಮಂಗಳವಾರ ತಿಳಿಸಿದೆ.

ಎರಡು ತಿಂಗಳಲ್ಲಿ ಬೆಂಗಳೂರಿಗೆ ಬರಲಿವೆ 10 ಸಾವಿರ ಇ-ಸ್ಕೂಟರ್​; ಉದ್ಯೋಗಾವಕಾಶ ಹೆಚ್ಚಿಸಲು ಝೈಪ್ ಎಲೆಕ್ಟ್ರಿಕ್ ಗುರಿ
ಝೈಪ್ ಎಲೆಕ್ಟ್ರಿಕ್
ಗಣಪತಿ ಶರ್ಮಾ
|

Updated on:May 03, 2023 | 8:36 PM

Share

ಮುಖ್ಯಾಂಶಗಳು

  • ಬೆಂಗಳೂರಿಗೆ ಬರಲಿವೆ 10,000 ಝೈಪ್ ಇ-ಸ್ಕೂಟರ್
  • 5,000ಕ್ಕೂ ಹೆಚ್ಚು ಜನರಿಗೆ ಉದ್ಯೋಗಾವಕಾಶ
  • ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಪಾಯಿಂಟ್​ ವಿಸ್ತರಣೆಗೂ ಕಂಪನಿ ಒಲವು

ಮುಂಬೈ: ಮುಂದಿನ ಎರಡು ತಿಂಗಳ ಒಳಗಾಗಿ ಬೆಂಗಳೂರಿನಲ್ಲಿ (Bengaluru) 10 ಸಾವಿರ ಇ-ಸ್ಕೂಟರ್​ಗಳು (e-scooters) ಕಾರ್ಯಾಚರಿಸುವಂತೆ ಮಾಡಲಾಗುವುದು. 2,000 ಇ-ಸ್ಕೂಟರ್​ಗಳು ಈಗಾಗಲೇ ನಗರದಲ್ಲಿವೆ. ಉಳಿದ 8,000 ಸ್ಕೂಟರ್​​ಗಳು ಇನ್ನೆರಡು ತಿಂಗಳಲ್ಲಿ ಬರಲಿವೆ ಎಂದು ಝೈಪ್ ಎಲೆಕ್ಟ್ರಿಕ್ (Zypp Electric) ಮಂಗಳವಾರ ತಿಳಿಸಿದೆ. ದೇಶದ 30 ನಗರಗಳಲ್ಲಿ ಸೇವೆ ವಿಸ್ತರಿಸುವುದಾಗಿ ಕಂಪನಿ ಇತ್ತೀಚೆಗೆ ಘೋಷಿಸಿತ್ತು. 2025ರ ಒಳಗೆ 2 ಲಕ್ಷ ಇ-ಸ್ಕೂಟರ್​ಗಳು ಕಾರ್ಯಾಚರಿಸುವಂತೆ ಮಾಡುವ ಬಗ್ಗೆ ಕಂಪನಿ ಗುರಿ ಹಾಕಿಕೊಂಡಿದೆ.

ಬೆಂಗಳೂರಿನಲ್ಲಿ 2,000 ಡೆಲಿವರಿ ಎಕ್ಸ್​ಕ್ಯೂಟಿವ್ಸ್ ನೇಮಿಸಿಕೊಳ್ಳಲಾಗಿದೆ ಮತ್ತು ಮುಂದಿನ ಎರಡು ತಿಂಗಳೊಳಗೆ 5,000 ಕ್ಕೂ ಹೆಚ್ಚು ಜನರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಕಂಪನಿ ಹೇಳಿದೆ.

ನೇಮಕಾತಿಯಿಂದ ವಿತರಣೆ ಹೆಚ್ಚಳ ಹಾಗೂ ಉದ್ಯೋಗಾವಕಾಶ ಹೆಚ್ಚಳವಾಗಲಿದೆ ಎಂದು ಕಂಪನಿ ಹೇಳಿದೆ. ಮುಂದಿನ 12-18 ತಿಂಗಳುಗಳಲ್ಲಿ ಬೆಂಗಳೂರಿನ ವಿವಿಧೆಡೆ 100 ಗೊರೊಗ್ರೊ ಬ್ಯಾಟರಿ ವಿನಿಮಯ ಕೇಂದ್ರಗಳನ್ನು ಸ್ಥಾಪಿಸಲು ಯೋಜಿಸಲಾಗಿದೆ ಎಂದು ಝೈಪ್ ಹೇಳಿದೆ. ಇದು ನಗರದ ಎಲೆಕ್ಟ್ರಿಕ್ ವಾಹನ ವ್ಯವಸ್ಥೆಯನ್ನು ಗಣನೀಯವಾಗಿ ಹೆಚ್ಚಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ: Bangalore rain: ಬೆಂಗಳೂರಿನ ಹಲವೆಡೆ ಭಾರೀ ಮಳೆ, ಮೇ 6ರ ವರೆಗೂ ವರ್ಷಧಾರೆ ಸಾಧ್ಯತೆ

ನಾವು ಈಗಾಗಲೇ ಬೆಂಗಳೂರಿನಲ್ಲಿ 2,000 ಇ-ಸ್ಕೂಟರ್‌ಗಳನ್ನು ನಿಯೋಜಿಸಿದ್ದೇವೆ. ಕೈಗೆಟುಕುವ ಮತ್ತು ಸ್ಥಿರವಾದ ವಿತರಣೆ ಒದಗಿಸುವುದು ನಮ್ಮ ಗುರಿಯಾಗಿದೆ ಎಂದು ಝೈಪ್ ಎಲೆಕ್ಟ್ರಿಕ್‌ನ ಸಂಸ್ಥಾಪಕಿ ರಾಶಿ ಅಗರ್ವಾಲ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:33 pm, Wed, 3 May 23

Follow Us
ಪಾದಯಾತ್ರೆಗೂ ಮುನ್ನ ಗುರುಗುಂಟ ಅಮರೇಶ್ವರ ದೇವಸ್ಥಾನಕ್ಕೆ ವಿಜಯೇಂದ್ರ ಭೇಟಿ
ಪಾದಯಾತ್ರೆಗೂ ಮುನ್ನ ಗುರುಗುಂಟ ಅಮರೇಶ್ವರ ದೇವಸ್ಥಾನಕ್ಕೆ ವಿಜಯೇಂದ್ರ ಭೇಟಿ
ಹಾರ್ಮುಜ್​ನಲ್ಲಿ ಶಾಂತಿ, ಉಕ್ರೇನ್ ಯುದ್ಧ ಅಂತ್ಯಕ್ಕೆ ಕರೆ
ಹಾರ್ಮುಜ್​ನಲ್ಲಿ ಶಾಂತಿ, ಉಕ್ರೇನ್ ಯುದ್ಧ ಅಂತ್ಯಕ್ಕೆ ಕರೆ
ಸಿಕ್ಸ್​ ಪ್ಯಾಕ್​, ಟ್ಯಾಟು, ಶೋಕಿ ಜೀವನ: ಈತ ಯಾರೋ ಸೆಲೆಬ್ರಿಟಿ ಅಲ್ಲ, PDO
ಸಿಕ್ಸ್​ ಪ್ಯಾಕ್​, ಟ್ಯಾಟು, ಶೋಕಿ ಜೀವನ: ಈತ ಯಾರೋ ಸೆಲೆಬ್ರಿಟಿ ಅಲ್ಲ, PDO
‘ಟಾಕ್ಸಿಕ್’ನಿಂದ ಅರ್ಧಕ್ಕೆ ಹೊರಬಂದೆ’; ಬಿಗ್ ಬಾಸ್ ಮಾಜಿ ಸ್ಪರ್ಧಿಯ ಹೇಳಿಕೆ
‘ಟಾಕ್ಸಿಕ್’ನಿಂದ ಅರ್ಧಕ್ಕೆ ಹೊರಬಂದೆ’; ಬಿಗ್ ಬಾಸ್ ಮಾಜಿ ಸ್ಪರ್ಧಿಯ ಹೇಳಿಕೆ
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ