AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ತಿಂಗಳಲ್ಲಿ ಬೆಂಗಳೂರಿಗೆ ಬರಲಿವೆ 10 ಸಾವಿರ ಇ-ಸ್ಕೂಟರ್​; ಉದ್ಯೋಗಾವಕಾಶ ಹೆಚ್ಚಿಸಲು ಝೈಪ್ ಎಲೆಕ್ಟ್ರಿಕ್ ಗುರಿ

ಮುಂದಿನ ಎರಡು ತಿಂಗಳ ಒಳಗಾಗಿ ಬೆಂಗಳೂರಿನಲ್ಲಿ10 ಸಾವಿರ ಇ-ಸ್ಕೂಟರ್​ಗಳು ಕಾರ್ಯಾಚರಿಸುವಂತೆ ಮಾಡಲಾಗುವುದು. 2,000 ಇ-ಸ್ಕೂಟರ್​ಗಳು ಈಗಾಗಲೇ ನಗರದಲ್ಲಿವೆ. ಉಳಿದ 8,000 ಸ್ಕೂಟರ್​​ಗಳು ಇನ್ನೆರಡು ತಿಂಗಳಲ್ಲಿ ಬರಲಿವೆ ಎಂದು ಝೈಪ್ ಎಲೆಕ್ಟ್ರಿಕ್ ಮಂಗಳವಾರ ತಿಳಿಸಿದೆ.

ಎರಡು ತಿಂಗಳಲ್ಲಿ ಬೆಂಗಳೂರಿಗೆ ಬರಲಿವೆ 10 ಸಾವಿರ ಇ-ಸ್ಕೂಟರ್​; ಉದ್ಯೋಗಾವಕಾಶ ಹೆಚ್ಚಿಸಲು ಝೈಪ್ ಎಲೆಕ್ಟ್ರಿಕ್ ಗುರಿ
ಝೈಪ್ ಎಲೆಕ್ಟ್ರಿಕ್
ಗಣಪತಿ ಶರ್ಮಾ
|

Updated on:May 03, 2023 | 8:36 PM

Share

ಮುಂಬೈ: ಮುಂದಿನ ಎರಡು ತಿಂಗಳ ಒಳಗಾಗಿ ಬೆಂಗಳೂರಿನಲ್ಲಿ (Bengaluru) 10 ಸಾವಿರ ಇ-ಸ್ಕೂಟರ್​ಗಳು (e-scooters) ಕಾರ್ಯಾಚರಿಸುವಂತೆ ಮಾಡಲಾಗುವುದು. 2,000 ಇ-ಸ್ಕೂಟರ್​ಗಳು ಈಗಾಗಲೇ ನಗರದಲ್ಲಿವೆ. ಉಳಿದ 8,000 ಸ್ಕೂಟರ್​​ಗಳು ಇನ್ನೆರಡು ತಿಂಗಳಲ್ಲಿ ಬರಲಿವೆ ಎಂದು ಝೈಪ್ ಎಲೆಕ್ಟ್ರಿಕ್ (Zypp Electric) ಮಂಗಳವಾರ ತಿಳಿಸಿದೆ. ದೇಶದ 30 ನಗರಗಳಲ್ಲಿ ಸೇವೆ ವಿಸ್ತರಿಸುವುದಾಗಿ ಕಂಪನಿ ಇತ್ತೀಚೆಗೆ ಘೋಷಿಸಿತ್ತು. 2025ರ ಒಳಗೆ 2 ಲಕ್ಷ ಇ-ಸ್ಕೂಟರ್​ಗಳು ಕಾರ್ಯಾಚರಿಸುವಂತೆ ಮಾಡುವ ಬಗ್ಗೆ ಕಂಪನಿ ಗುರಿ ಹಾಕಿಕೊಂಡಿದೆ.

ಬೆಂಗಳೂರಿನಲ್ಲಿ 2,000 ಡೆಲಿವರಿ ಎಕ್ಸ್​ಕ್ಯೂಟಿವ್ಸ್ ನೇಮಿಸಿಕೊಳ್ಳಲಾಗಿದೆ ಮತ್ತು ಮುಂದಿನ ಎರಡು ತಿಂಗಳೊಳಗೆ 5,000 ಕ್ಕೂ ಹೆಚ್ಚು ಜನರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಕಂಪನಿ ಹೇಳಿದೆ.

ನೇಮಕಾತಿಯಿಂದ ವಿತರಣೆ ಹೆಚ್ಚಳ ಹಾಗೂ ಉದ್ಯೋಗಾವಕಾಶ ಹೆಚ್ಚಳವಾಗಲಿದೆ ಎಂದು ಕಂಪನಿ ಹೇಳಿದೆ. ಮುಂದಿನ 12-18 ತಿಂಗಳುಗಳಲ್ಲಿ ಬೆಂಗಳೂರಿನ ವಿವಿಧೆಡೆ 100 ಗೊರೊಗ್ರೊ ಬ್ಯಾಟರಿ ವಿನಿಮಯ ಕೇಂದ್ರಗಳನ್ನು ಸ್ಥಾಪಿಸಲು ಯೋಜಿಸಲಾಗಿದೆ ಎಂದು ಝೈಪ್ ಹೇಳಿದೆ. ಇದು ನಗರದ ಎಲೆಕ್ಟ್ರಿಕ್ ವಾಹನ ವ್ಯವಸ್ಥೆಯನ್ನು ಗಣನೀಯವಾಗಿ ಹೆಚ್ಚಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ: Bangalore rain: ಬೆಂಗಳೂರಿನ ಹಲವೆಡೆ ಭಾರೀ ಮಳೆ, ಮೇ 6ರ ವರೆಗೂ ವರ್ಷಧಾರೆ ಸಾಧ್ಯತೆ

ನಾವು ಈಗಾಗಲೇ ಬೆಂಗಳೂರಿನಲ್ಲಿ 2,000 ಇ-ಸ್ಕೂಟರ್‌ಗಳನ್ನು ನಿಯೋಜಿಸಿದ್ದೇವೆ. ಕೈಗೆಟುಕುವ ಮತ್ತು ಸ್ಥಿರವಾದ ವಿತರಣೆ ಒದಗಿಸುವುದು ನಮ್ಮ ಗುರಿಯಾಗಿದೆ ಎಂದು ಝೈಪ್ ಎಲೆಕ್ಟ್ರಿಕ್‌ನ ಸಂಸ್ಥಾಪಕಿ ರಾಶಿ ಅಗರ್ವಾಲ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:33 pm, Wed, 3 May 23

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್