AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ತಿಂಗಳಲ್ಲಿ ಬೆಂಗಳೂರಿಗೆ ಬರಲಿವೆ 10 ಸಾವಿರ ಇ-ಸ್ಕೂಟರ್​; ಉದ್ಯೋಗಾವಕಾಶ ಹೆಚ್ಚಿಸಲು ಝೈಪ್ ಎಲೆಕ್ಟ್ರಿಕ್ ಗುರಿ

ಮುಂದಿನ ಎರಡು ತಿಂಗಳ ಒಳಗಾಗಿ ಬೆಂಗಳೂರಿನಲ್ಲಿ10 ಸಾವಿರ ಇ-ಸ್ಕೂಟರ್​ಗಳು ಕಾರ್ಯಾಚರಿಸುವಂತೆ ಮಾಡಲಾಗುವುದು. 2,000 ಇ-ಸ್ಕೂಟರ್​ಗಳು ಈಗಾಗಲೇ ನಗರದಲ್ಲಿವೆ. ಉಳಿದ 8,000 ಸ್ಕೂಟರ್​​ಗಳು ಇನ್ನೆರಡು ತಿಂಗಳಲ್ಲಿ ಬರಲಿವೆ ಎಂದು ಝೈಪ್ ಎಲೆಕ್ಟ್ರಿಕ್ ಮಂಗಳವಾರ ತಿಳಿಸಿದೆ.

ಎರಡು ತಿಂಗಳಲ್ಲಿ ಬೆಂಗಳೂರಿಗೆ ಬರಲಿವೆ 10 ಸಾವಿರ ಇ-ಸ್ಕೂಟರ್​; ಉದ್ಯೋಗಾವಕಾಶ ಹೆಚ್ಚಿಸಲು ಝೈಪ್ ಎಲೆಕ್ಟ್ರಿಕ್ ಗುರಿ
ಝೈಪ್ ಎಲೆಕ್ಟ್ರಿಕ್
Ganapathi Sharma
|

Updated on:May 03, 2023 | 8:36 PM

Share

ಮುಂಬೈ: ಮುಂದಿನ ಎರಡು ತಿಂಗಳ ಒಳಗಾಗಿ ಬೆಂಗಳೂರಿನಲ್ಲಿ (Bengaluru) 10 ಸಾವಿರ ಇ-ಸ್ಕೂಟರ್​ಗಳು (e-scooters) ಕಾರ್ಯಾಚರಿಸುವಂತೆ ಮಾಡಲಾಗುವುದು. 2,000 ಇ-ಸ್ಕೂಟರ್​ಗಳು ಈಗಾಗಲೇ ನಗರದಲ್ಲಿವೆ. ಉಳಿದ 8,000 ಸ್ಕೂಟರ್​​ಗಳು ಇನ್ನೆರಡು ತಿಂಗಳಲ್ಲಿ ಬರಲಿವೆ ಎಂದು ಝೈಪ್ ಎಲೆಕ್ಟ್ರಿಕ್ (Zypp Electric) ಮಂಗಳವಾರ ತಿಳಿಸಿದೆ. ದೇಶದ 30 ನಗರಗಳಲ್ಲಿ ಸೇವೆ ವಿಸ್ತರಿಸುವುದಾಗಿ ಕಂಪನಿ ಇತ್ತೀಚೆಗೆ ಘೋಷಿಸಿತ್ತು. 2025ರ ಒಳಗೆ 2 ಲಕ್ಷ ಇ-ಸ್ಕೂಟರ್​ಗಳು ಕಾರ್ಯಾಚರಿಸುವಂತೆ ಮಾಡುವ ಬಗ್ಗೆ ಕಂಪನಿ ಗುರಿ ಹಾಕಿಕೊಂಡಿದೆ.

ಬೆಂಗಳೂರಿನಲ್ಲಿ 2,000 ಡೆಲಿವರಿ ಎಕ್ಸ್​ಕ್ಯೂಟಿವ್ಸ್ ನೇಮಿಸಿಕೊಳ್ಳಲಾಗಿದೆ ಮತ್ತು ಮುಂದಿನ ಎರಡು ತಿಂಗಳೊಳಗೆ 5,000 ಕ್ಕೂ ಹೆಚ್ಚು ಜನರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಕಂಪನಿ ಹೇಳಿದೆ.

ನೇಮಕಾತಿಯಿಂದ ವಿತರಣೆ ಹೆಚ್ಚಳ ಹಾಗೂ ಉದ್ಯೋಗಾವಕಾಶ ಹೆಚ್ಚಳವಾಗಲಿದೆ ಎಂದು ಕಂಪನಿ ಹೇಳಿದೆ. ಮುಂದಿನ 12-18 ತಿಂಗಳುಗಳಲ್ಲಿ ಬೆಂಗಳೂರಿನ ವಿವಿಧೆಡೆ 100 ಗೊರೊಗ್ರೊ ಬ್ಯಾಟರಿ ವಿನಿಮಯ ಕೇಂದ್ರಗಳನ್ನು ಸ್ಥಾಪಿಸಲು ಯೋಜಿಸಲಾಗಿದೆ ಎಂದು ಝೈಪ್ ಹೇಳಿದೆ. ಇದು ನಗರದ ಎಲೆಕ್ಟ್ರಿಕ್ ವಾಹನ ವ್ಯವಸ್ಥೆಯನ್ನು ಗಣನೀಯವಾಗಿ ಹೆಚ್ಚಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ: Bangalore rain: ಬೆಂಗಳೂರಿನ ಹಲವೆಡೆ ಭಾರೀ ಮಳೆ, ಮೇ 6ರ ವರೆಗೂ ವರ್ಷಧಾರೆ ಸಾಧ್ಯತೆ

ನಾವು ಈಗಾಗಲೇ ಬೆಂಗಳೂರಿನಲ್ಲಿ 2,000 ಇ-ಸ್ಕೂಟರ್‌ಗಳನ್ನು ನಿಯೋಜಿಸಿದ್ದೇವೆ. ಕೈಗೆಟುಕುವ ಮತ್ತು ಸ್ಥಿರವಾದ ವಿತರಣೆ ಒದಗಿಸುವುದು ನಮ್ಮ ಗುರಿಯಾಗಿದೆ ಎಂದು ಝೈಪ್ ಎಲೆಕ್ಟ್ರಿಕ್‌ನ ಸಂಸ್ಥಾಪಕಿ ರಾಶಿ ಅಗರ್ವಾಲ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:33 pm, Wed, 3 May 23

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು