AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರಿಗೊಂದು ಬೆಸ್ಕಾಂ ಪ್ರಕಟಣೆ: ಸೆ 1 ರಿಂದಲೇ ಈ ಕಟ್ಟುನಿಟ್ಟಿನ ನಿಯಮಗಳು ಜಾರಿ

ನಿಗದಿತ 30 ದಿನದೊಳಗೆ ಬಿಲ್‌ ಪಾವತಿಸದಿದ್ದಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡುವುದಾಗಿ ಬೆಸ್ಕಾಂ ಹೇಳಿದೆ. ಹೆಚ್ಚುವರಿ ಭದ್ರತಾ ಠೇವಣಿ ಪಾವತಿಸದಿದ್ದರೂ, ವಾಣಿಜ್ಯ ಬಳಕೆ, ಅಪಾರ್ಟ್ಮೆಂಟ್​ ಹಾಗೂ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆದ ಗ್ರಾಹಕರಿಗೂ ಇದು ಅನ್ವಯವಾಗಲಿದೆ ಎಂದು ಬೆಸ್ಕಾಂ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಬೆಂಗಳೂರಿಗರಿಗೊಂದು ಬೆಸ್ಕಾಂ ಪ್ರಕಟಣೆ: ಸೆ 1 ರಿಂದಲೇ ಈ ಕಟ್ಟುನಿಟ್ಟಿನ ನಿಯಮಗಳು ಜಾರಿ
ಬೆಂಗಳೂರಿಗರಿಗೊಂದು ಬೆಸ್ಕಾಂ ಪ್ರಕಟಣೆ: ಸೆ.1 ರಿಂದಲೇ ಈ ಕಟ್ಟುನಿಟ್ಟಿನ ನಿಯಮಗಳು ಜಾರಿ
Anil Kalkere
| Updated By: ಗಂಗಾಧರ​ ಬ. ಸಾಬೋಜಿ|

Updated on:Aug 30, 2024 | 8:21 PM

Share

ಬೆಂಗಳೂರು, ಆಗಸ್ಟ್​ 30: ಗಡುವು ಮುಗಿದ್ರೂ ಬಿಲ್ ಪಾವತಿಸದ್ದರೆ ವಿದ್ಯುತ್ ಸಂಪರ್ಕ ಕಡಿತ ಮಾಡುವುದಾಗಿ ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತ (BESCOM) ತಿಳಿಸಿದೆ. ಆ ಮೂಲಕ ಗ್ರಾಹಕರಿಗೆ ವಿದ್ಯುತ‌್ ಸಂಪರ್ಕ ಕಟ್​ ಬಿಸಿ ಮುಟ್ಟಿಸಲು ಬೆಸ್ಕಾಂ ಮುಂದಾಗಿದೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, ಸೆಪ್ಟೆಂಬರ್ 1ರಿಂದಲೇ ಕಟ್ಟುನಿಟ್ಟಾಗಿ ನಿಯಮ ಪಾಲನೆ ಜಾರಿಯಾಗಲಿದೆ ಎಂದು ತಿಳಿಸಿದೆ.

ಯಾವೆಲ್ಲಾ ನಿಯಮಗಳು ಜಾರಿ?

ನಿಗದಿತ 30 ದಿನದೊಳಗೆ ಬಿಲ್‌ ಪಾವತಿಸದಿದ್ದಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡುವುದಾಗಿ ಬೆಸ್ಕಾಂ ಹೇಳಿದೆ. ಹೆಚ್ಚುವರಿ ಭದ್ರತಾ ಠೇವಣಿ ಪಾವತಿಸದಿದ್ದರೂ, ವಾಣಿಜ್ಯ ಬಳಕೆ, ಅಪಾರ್ಟ್ಮೆಂಟ್​ ಹಾಗೂ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆದ ಗ್ರಾಹಕರಿಗೂ ಇದು ಅನ್ವಯವಾಗಲಿದೆ. ಮೀಟರ್‌ ರೀಡಿಂಗ್‌ಗೆ ಬರುವ ದಿನ ಅಂದರೆ ಪ್ರತಿ ತಿಂಗಳ ಮೊದಲ 15 ದಿನದಲ್ಲೇ ವಿದ್ಯುತ್‌ ಸಂಪರ್ಕ ಕಡಿತ ಮಾಡಲಾಗುತ್ತಿದ್ದು, ಹಾಗಾಗಿ ಗ್ರಾಹಕರು ಸಕಾಲದಲ್ಲಿ ಶುಲ್ಕ ಪಾವತಿಸುವಂತೆ ಬೆಸ್ಕಾಂನಿಂದ ಮನವಿ ಮಾಡಲಾಗಿದೆ.

ಇದನ್ನೂ ಓದಿ: Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್​ ಕಟ್​

ವಿದ್ಯುತ‌ ಬಿಲ್‌ ಪಾವತಿಗೆ ಅಂತಿಮ ದಿನಾಂಕದವರೆಗೆ (ಅಂದರೆ ಬಿಲ್ ನೀಡಿದ 15 ದಿನಗಳು) ಯಾವುದೇ ಬಡ್ಡಿಯಿಲ್ಲದೆ 15 ಕಾಲಾವಕಾಶ ನೀಡಲಾಗುತ್ತದೆ. ಅಂತಿಮ ದಿನಾಂಕದ ನಂತರವೂ ಬಡ್ಡಿಸಹಿತ ಪಾವತಿಗೆ 15 ದಿನಗಳ ಕಾಲಾವಕಾಶ ನೀಡಲಾಗುತ್ತದೆ.

ಆದಾಗ್ಯೂ ಗ್ರಾಹಕರು ಬಿಲ್ ಪಾವತಿಸದಿದ್ದಲ್ಲಿ ಮುಂದಿನ‌ ಮೀಟರ್ ರೀಡಿಂಗ್ ದಿನವೇ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತದೆ. ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂ. ಗಳಿಗಿಂತ ಅಧಿಕವಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಬೆಸ್ಕಾಂ ಕಡಿತಗೊಳಿಸಲಿದೆ.

ಬೆಸ್ಕಾಂ ಟ್ವೀಟ್​ 

ಇನ್ನು ಕರ್ನಾಟಕ ವಿದ್ಯುತ್​ ಸರಬರಾಜು ನಿಗಮ ನಿಯಮಿತ ಲೈನ್‌ ದುರಸ್ತಿ ಮತ್ತು ನಿರ್ವಹಣಾ ಕಾಮಗಾರಿ ಸಲುವಾಗಿ ನಾಳೆ ಅಂದರೆ ಆಗಸ್ಟ್​ 31ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ವಿದ್ಯುತ್ ಅಡಚಣೆಗಾಗಿ ಬೆಸ್ಕಾಂ ವಿಷಾದಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:02 pm, Fri, 30 August 24

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ