AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರಿಗೊಂದು ಬೆಸ್ಕಾಂ ಪ್ರಕಟಣೆ: ಸೆ 1 ರಿಂದಲೇ ಈ ಕಟ್ಟುನಿಟ್ಟಿನ ನಿಯಮಗಳು ಜಾರಿ

ನಿಗದಿತ 30 ದಿನದೊಳಗೆ ಬಿಲ್‌ ಪಾವತಿಸದಿದ್ದಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡುವುದಾಗಿ ಬೆಸ್ಕಾಂ ಹೇಳಿದೆ. ಹೆಚ್ಚುವರಿ ಭದ್ರತಾ ಠೇವಣಿ ಪಾವತಿಸದಿದ್ದರೂ, ವಾಣಿಜ್ಯ ಬಳಕೆ, ಅಪಾರ್ಟ್ಮೆಂಟ್​ ಹಾಗೂ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆದ ಗ್ರಾಹಕರಿಗೂ ಇದು ಅನ್ವಯವಾಗಲಿದೆ ಎಂದು ಬೆಸ್ಕಾಂ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಬೆಂಗಳೂರಿಗರಿಗೊಂದು ಬೆಸ್ಕಾಂ ಪ್ರಕಟಣೆ: ಸೆ 1 ರಿಂದಲೇ ಈ ಕಟ್ಟುನಿಟ್ಟಿನ ನಿಯಮಗಳು ಜಾರಿ
ಬೆಂಗಳೂರಿಗರಿಗೊಂದು ಬೆಸ್ಕಾಂ ಪ್ರಕಟಣೆ: ಸೆ.1 ರಿಂದಲೇ ಈ ಕಟ್ಟುನಿಟ್ಟಿನ ನಿಯಮಗಳು ಜಾರಿ
Anil Kalkere
| Edited By: |

Updated on:Aug 30, 2024 | 8:21 PM

Share

ಬೆಂಗಳೂರು, ಆಗಸ್ಟ್​ 30: ಗಡುವು ಮುಗಿದ್ರೂ ಬಿಲ್ ಪಾವತಿಸದ್ದರೆ ವಿದ್ಯುತ್ ಸಂಪರ್ಕ ಕಡಿತ ಮಾಡುವುದಾಗಿ ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತ (BESCOM) ತಿಳಿಸಿದೆ. ಆ ಮೂಲಕ ಗ್ರಾಹಕರಿಗೆ ವಿದ್ಯುತ‌್ ಸಂಪರ್ಕ ಕಟ್​ ಬಿಸಿ ಮುಟ್ಟಿಸಲು ಬೆಸ್ಕಾಂ ಮುಂದಾಗಿದೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, ಸೆಪ್ಟೆಂಬರ್ 1ರಿಂದಲೇ ಕಟ್ಟುನಿಟ್ಟಾಗಿ ನಿಯಮ ಪಾಲನೆ ಜಾರಿಯಾಗಲಿದೆ ಎಂದು ತಿಳಿಸಿದೆ.

ಯಾವೆಲ್ಲಾ ನಿಯಮಗಳು ಜಾರಿ?

ನಿಗದಿತ 30 ದಿನದೊಳಗೆ ಬಿಲ್‌ ಪಾವತಿಸದಿದ್ದಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡುವುದಾಗಿ ಬೆಸ್ಕಾಂ ಹೇಳಿದೆ. ಹೆಚ್ಚುವರಿ ಭದ್ರತಾ ಠೇವಣಿ ಪಾವತಿಸದಿದ್ದರೂ, ವಾಣಿಜ್ಯ ಬಳಕೆ, ಅಪಾರ್ಟ್ಮೆಂಟ್​ ಹಾಗೂ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆದ ಗ್ರಾಹಕರಿಗೂ ಇದು ಅನ್ವಯವಾಗಲಿದೆ. ಮೀಟರ್‌ ರೀಡಿಂಗ್‌ಗೆ ಬರುವ ದಿನ ಅಂದರೆ ಪ್ರತಿ ತಿಂಗಳ ಮೊದಲ 15 ದಿನದಲ್ಲೇ ವಿದ್ಯುತ್‌ ಸಂಪರ್ಕ ಕಡಿತ ಮಾಡಲಾಗುತ್ತಿದ್ದು, ಹಾಗಾಗಿ ಗ್ರಾಹಕರು ಸಕಾಲದಲ್ಲಿ ಶುಲ್ಕ ಪಾವತಿಸುವಂತೆ ಬೆಸ್ಕಾಂನಿಂದ ಮನವಿ ಮಾಡಲಾಗಿದೆ.

ಇದನ್ನೂ ಓದಿ: Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್​ ಕಟ್​

ವಿದ್ಯುತ‌ ಬಿಲ್‌ ಪಾವತಿಗೆ ಅಂತಿಮ ದಿನಾಂಕದವರೆಗೆ (ಅಂದರೆ ಬಿಲ್ ನೀಡಿದ 15 ದಿನಗಳು) ಯಾವುದೇ ಬಡ್ಡಿಯಿಲ್ಲದೆ 15 ಕಾಲಾವಕಾಶ ನೀಡಲಾಗುತ್ತದೆ. ಅಂತಿಮ ದಿನಾಂಕದ ನಂತರವೂ ಬಡ್ಡಿಸಹಿತ ಪಾವತಿಗೆ 15 ದಿನಗಳ ಕಾಲಾವಕಾಶ ನೀಡಲಾಗುತ್ತದೆ.

ಆದಾಗ್ಯೂ ಗ್ರಾಹಕರು ಬಿಲ್ ಪಾವತಿಸದಿದ್ದಲ್ಲಿ ಮುಂದಿನ‌ ಮೀಟರ್ ರೀಡಿಂಗ್ ದಿನವೇ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತದೆ. ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂ. ಗಳಿಗಿಂತ ಅಧಿಕವಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಬೆಸ್ಕಾಂ ಕಡಿತಗೊಳಿಸಲಿದೆ.

ಬೆಸ್ಕಾಂ ಟ್ವೀಟ್​ 

ಇನ್ನು ಕರ್ನಾಟಕ ವಿದ್ಯುತ್​ ಸರಬರಾಜು ನಿಗಮ ನಿಯಮಿತ ಲೈನ್‌ ದುರಸ್ತಿ ಮತ್ತು ನಿರ್ವಹಣಾ ಕಾಮಗಾರಿ ಸಲುವಾಗಿ ನಾಳೆ ಅಂದರೆ ಆಗಸ್ಟ್​ 31ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ವಿದ್ಯುತ್ ಅಡಚಣೆಗಾಗಿ ಬೆಸ್ಕಾಂ ವಿಷಾದಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:02 pm, Fri, 30 August 24

Follow Us
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ನೈಸ್ ಟೋಲ್ ಸಿಬ್ಬಂದಿಗೆ ಕ್ಲಾಸ್ ತಗೊಂಡ ಯುವತಿ
ನೈಸ್ ಟೋಲ್ ಸಿಬ್ಬಂದಿಗೆ ಕ್ಲಾಸ್ ತಗೊಂಡ ಯುವತಿ
ಬೆಂಗಳೂರು: ಗಣೇಶೋತ್ಸವ ಸಂಭ್ರಮದಲ್ಲಿ ಇರುವವರಿಗೆ ಪೊಲೀಸರ ಶಾಕ್
ಬೆಂಗಳೂರು: ಗಣೇಶೋತ್ಸವ ಸಂಭ್ರಮದಲ್ಲಿ ಇರುವವರಿಗೆ ಪೊಲೀಸರ ಶಾಕ್