AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀಟರ್​​​ ರೀಡಿಂಗ್​​ ಇಲ್ಲ: ಜುಲೈ ತಿಂಗಳ ಕರೆಂಟ್​ ಬಿಲ್​​ ಬರಲ್ಲ; ಯಾರಿಗೆಲ್ಲಾ ಅನ್ವಯ?

ಸದ್ಯ ರಾಜ್ಯದಲ್ಲಿ ಜುಲೈ 1ರಿಂದ ಗೃಹಜ್ಯೋತಿ ಗ್ಯಾರಂಟಿ ಯೋಜನೆ ಪರಿಶೀಲನೆ ಶುರುವಾಗಿದೆ. ಮನೆ ಮನೆಗೆ ಮೀಟರ್ ರೀಡರ್​​ಗಳು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಹೀಗಾಗಿ ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ. ಹಾಗಾದರೆ ಈ ತಿಂಗಳ ಕರೆಂಟ್​ ಬಿಲ್​​ ಬರುವುದಿಲ್ಲವಾ ಎಂಬ ನಿಮ್ಮ ಪ್ರಶ್ನೆಗೆ ಉತ್ತರ ಇಲ್ಲಿದೆ. ​​

ಮೀಟರ್​​​ ರೀಡಿಂಗ್​​ ಇಲ್ಲ: ಜುಲೈ ತಿಂಗಳ ಕರೆಂಟ್​ ಬಿಲ್​​ ಬರಲ್ಲ; ಯಾರಿಗೆಲ್ಲಾ ಅನ್ವಯ?
ಬೆಸ್ಕಾಂImage Credit source: Getty images
ಗಂಗಾಧರ​ ಬ. ಸಾಬೋಜಿ
|

Updated on:Jul 02, 2026 | 3:56 PM

Share

ಮುಖ್ಯಾಂಶಗಳು

  • ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಪರಿಶೀಲನೆ
  • ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇಲ್ಲ
  • ಬೆಸ್ಕಾಂ ಮಹತ್ವದ ಆದೇಶ

ಬೆಂಗಳೂರು, ಜುಲೈ 02: ಗೃಹಜ್ಯೋತಿ (Gruha Jyothi Scheme) 200 ಯೂನಿಟ್​ವರೆಗೆ ಉಚಿತ ವಿದ್ಯುತ್ ನೀಡುವ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ. ಅನರ್ಹರಿಗೆ ಗ್ಯಾರಂಟಿ ಯೋಜನೆ ಲಾಭ ಸಿಗಬಾರದೆಂದು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಫಿಲ್ಟರ್ ಮಾಡುತ್ತಿದೆ. ಇದರ ಭಾಗವಾಗಿ ರಾಜ್ಯಾದ್ಯಂತ ಆಪರೇಷನ್ ಗೃಹಜ್ಯೋತಿ ಶುರುವಾಗಿದೆ. ಹೀಗಾಗಿ ಜುಲೈನಲ್ಲಿ ಮೀಟರ್​​​ ರೀಡಿಂಗ್​​ ಇರುವುದಿಲ್ಲ. ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ ತಿಂಗಳ ಬಿಲ್ ನೀಡಲು ಬೆಸ್ಕಾಂ (BESCOM)​​ ಮುಂದಾಗಿದೆ.

ಬೆಸ್ಕಾಂ ಮಾಧ್ಯಮ ಪ್ರಕಟಣೆಯಲ್ಲಿ ಏನಿದೆ?

ಈ ಕುರಿತಾಗಿ ಬೆಂಗಳೂರು ವಿದ್ಯುತ್​​​ ಸರಬರಾಜು ಕಂಪನಿ ನಿಯಮಿತ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿಯ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನಾ ಕಾರ್ಯಕ್ಕೆ ಬೆಸ್ಕಾಂ ಮೀಟರ್ ರೀಡರ್‌ಗಳನ್ನು ನಿಯೋಜಿಸಲಾಗಿದೆ. ಈ ನಿಟ್ಟಿನಲ್ಲಿ ಜುಲೈ ತಿಂಗಳಲ್ಲಿ ನಿಯಮಿತ ಮೀಟರ್ ರೀಡಿಂಗ್ ಇರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.

ಬೆಸ್ಕಾಂ ಟ್ವೀಟ್​

ಇನ್ನು ಮೀಟರ್ ರೀಡಿಂಗ್ ಬದಲಾಗಿ, ಗ್ರಾಹಕರಿಗೆ ಜುಲೈ ತಿಂಗಳಲ್ಲಿ ಸರಾಸರಿ ಬಿಲ್ ನೀಡಲಾಗುತ್ತದೆ. ಅಂದರೆ ಕಳೆದ 3 ತಿಂಗಳ ನಿಮ್ಮ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ ತಿಂಗಳ ಬಿಲ್ ಅನ್ನು ಸಿದ್ಧಪಡಿಸಲಾಗುತ್ತದೆ.

ಯಾರಿಗೆಲ್ಲಾ ಅನ್ವಯ 

ಈ ಹೊಸ ನಿಯಮವು ಹೆಚ್.ಟಿ ಗ್ರಾಹಕರು, 40 ಹೆಚ್.ಪಿ ಮತ್ತು ಅದಕ್ಕಿಂತ ಹೆಚ್ಚಿನ ಲೋಡ್ ಹೊಂದಿರುವ ಎಲ್.ಟಿ ಗ್ರಾಹಕರು, ಸೋಲಾರ್ ರೂಫ್‌ಟಾಪ್ ಗ್ರಾಹಕರು ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕ ಹೊಂದಿರುವವರಿಗೆ ಅನ್ವಯಿಸುವುದಿಲ್ಲ. ಈ ಗ್ರಾಹಕರಿಗೆ ಎಂದಿನಂತೆ ನಿಯಮಿತವಾಗಿ ಮೀಟರ್ ರೀಡಿಂಗ್ ಮಾಡಿ ಬಿಲ್ ನೀಡಲಾಗುವುದು ಎಂದು ಬೆಂಗಳೂರು ವಿದ್ಯುತ್​​​ ಸರಬರಾಜು ಕಂಪನಿ ನಿಯಮಿತ ಮಾಹಿತಿ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:19 pm, Thu, 2 July 26

Follow Us
ಸಿಜೆಪಿ ಪ್ರತಿಭಟನೆ: ಮುಂಜಾಗ್ರತಾ ಕ್ರಮವಾಗಿ ಪೊಲೀಸರ ರಜೆ ರದ್ದು
ಸಿಜೆಪಿ ಪ್ರತಿಭಟನೆ: ಮುಂಜಾಗ್ರತಾ ಕ್ರಮವಾಗಿ ಪೊಲೀಸರ ರಜೆ ರದ್ದು
ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ 8 ಸೇತುವೆಗಳು ಜಲಾವೃತ
ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ 8 ಸೇತುವೆಗಳು ಜಲಾವೃತ
ಬಿಪಿಎಲ್ ಕಾರ್ಡುದಾರರಿಗೆ ಗುಡ್​ ನ್ಯೂಸ್ ನೀಡಿದ ಆಹಾರ ಸಚಿವ ಮುನಿಯಪ್ಪ
ಬಿಪಿಎಲ್ ಕಾರ್ಡುದಾರರಿಗೆ ಗುಡ್​ ನ್ಯೂಸ್ ನೀಡಿದ ಆಹಾರ ಸಚಿವ ಮುನಿಯಪ್ಪ
ಬಿಡಾಡಿ ವಾಹನಗಳ ಟೋಯಿಂಗ್: ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಗಳು ಜಪ್ತಿ
ಬಿಡಾಡಿ ವಾಹನಗಳ ಟೋಯಿಂಗ್: ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಗಳು ಜಪ್ತಿ
‘ಸ್ವಾರ್ಥ ಬಿಡಿ’: ಚಿತ್ರರಂಗದವರ ಬಗ್ಗೆ ಸಾಧುಕೋಕಿಲ ಬೇಸರ
‘ಸ್ವಾರ್ಥ ಬಿಡಿ’: ಚಿತ್ರರಂಗದವರ ಬಗ್ಗೆ ಸಾಧುಕೋಕಿಲ ಬೇಸರ
ಕಾಕ್ರೋಚ್ ಹೋರಾಟಗಾರರಿಗೆ ಮುಲ್ಲಾಗಳು ಬಿರಿಯಾನಿ ತಿನ್ನಿಸ್ತಾವಸ್ರೆ: ಸಿಂಹ
ಕಾಕ್ರೋಚ್ ಹೋರಾಟಗಾರರಿಗೆ ಮುಲ್ಲಾಗಳು ಬಿರಿಯಾನಿ ತಿನ್ನಿಸ್ತಾವಸ್ರೆ: ಸಿಂಹ
ಸಾರಿಗೆ ಸಚಿವರ ಕ್ಷೇತ್ರದಲ್ಲೇ ಗೋದಾಮಾಗಿ ಮಾರ್ಪಟ್ಟಿರುವ ಬಸ್​​ ನಿಲ್ದಾಣ!
ಸಾರಿಗೆ ಸಚಿವರ ಕ್ಷೇತ್ರದಲ್ಲೇ ಗೋದಾಮಾಗಿ ಮಾರ್ಪಟ್ಟಿರುವ ಬಸ್​​ ನಿಲ್ದಾಣ!
ಚಾಲಕನ ಜೀವಕ್ಕಿಂತ ಬಿಯರ್ ಬಾಟಲಿಯೇ ಮುಖ್ಯವಾಯಿತೇ?
ಚಾಲಕನ ಜೀವಕ್ಕಿಂತ ಬಿಯರ್ ಬಾಟಲಿಯೇ ಮುಖ್ಯವಾಯಿತೇ?
ನೀಟ್ ಪ್ರತಿಭಟನೆ, ಮೋದಿ ಹೇಳಿಕೆ ಬಗ್ಗೆ ಪ್ರಲ್ಹಾದ್ ಜೋಶಿ ಮಹತ್ವದ ಹೇಳಿಕೆ
ನೀಟ್ ಪ್ರತಿಭಟನೆ, ಮೋದಿ ಹೇಳಿಕೆ ಬಗ್ಗೆ ಪ್ರಲ್ಹಾದ್ ಜೋಶಿ ಮಹತ್ವದ ಹೇಳಿಕೆ
ಬಿಯರ್ ಬಾಟಲಿಗಳಿದ್ದ ಲಾರಿ ಪಲ್ಟಿ; ಲಕ್ಷಾಂತರ ರೂ. ಮೌಲ್ಯದ ಮದ್ಯರಸ್ತೆ ಪಾಲು
ಬಿಯರ್ ಬಾಟಲಿಗಳಿದ್ದ ಲಾರಿ ಪಲ್ಟಿ; ಲಕ್ಷಾಂತರ ರೂ. ಮೌಲ್ಯದ ಮದ್ಯರಸ್ತೆ ಪಾಲು